Homeಮುಖಪುಟಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

- Advertisement -
- Advertisement -

ಎದೆ ನೋವು ಎಂದು ನೋವು ತೋಡಿಕೊಂಡರೂ ಬಿಡದೆ ಪೊಲೀಸರು ನಡೆಸಿರುವ ಹಲ್ಲೆಯಿಂದಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸ್ನೇಹಿತರಾದ ಜುಬೈರ್, ಸಜೀವನ್ ಮತ್ತು ಶಾಮನಾದ್ ಅವರು ತಲಶ್ಶೇರಿಯಿಂದ ವಡಕರ ಬಳಿ ಕಲ್ಲೇರಿ ಕಡೆಗೆ ಜುಲೈ 21ರಂದು ಹೋಗುತ್ತಿದ್ದಾಗ ರಾತ್ರಿ 11.30 ರ ಸುಮಾರಿಗೆ ಅವರ i20 ಕಾರು, ಸ್ವಿಫ್ಟ್‌ಗೆ ಡಿಕ್ಕಿ ಹೊಡೆದಿತ್ತು. ಈ ಅವಘಡದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಜೀವನ್ ಸಾವನ್ನಪ್ಪಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡಕರ ಸಮೀಪದ ಅಡ್ಯಕ್ಕತೆರುವು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಕಾರಣ ಶಾಮನಾದ್ ಪೊಲೀಸರು ವಶಕ್ಕೆ ಪಡೆದಿಲ್ಲ.

ವಡಕರದಲ್ಲಿ ಡ್ರೈವಿಂಗ್ ಲರ್ನಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಜುಬೇರ್‌ ಘಟನೆ ಕುರಿತು ಮಾತನಾಡಿ, “ನಾವು ಇನ್ನೊಂದು ಕಾರಿನಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯತ್ನಿಸಿದೆವು. ಅಷ್ಟರಲ್ಲಾಗಲೇ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದ ಕಾರಣ ನಮ್ಮನ್ನು ಠಾಣೆಗೆ ಕರೆದೊಯ್ದರು. ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ ಪೆಕ್ಟರ್ ನಮ್ಮ ಮೇಲೆ ಕೋಪಗೊಂಡಿದ್ದರು. ಆಗ ಸಜೀವನ್, ಇಂತಹ ಅವಘಡಗಳು ಸಹಜ ಎಂದು ಹೇಳಿದ. ಸಜೀವನ್‌ ಹಿಂತಿರುಗಿ ಮಾತನಾಡಿದ ಕಾರಣಕ್ಕೇನೋ ಸಬ್ ಇನ್ಸ್‌ಪೆಕ್ಟರ್ ಆತನನ್ನು ಹೊಡೆದು ನಮ್ಮನ್ನು ಠಾಣೆಯೊಳಗೆ ತಳ್ಳಿದರು” ಎಂದು ಮಾಹಿತಿ ನೀಡಿರುವುದಾಗಿ ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

“ಪೊಲೀಸ್ ಸಿಬ್ಬಂದಿ ಸಜೀವನ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಬಲವಾಗಿ ಹೊಡೆದರು. ಆಗ ಸಜೀವನ್‌ ಒಂದು ಕೈಯನ್ನು ಎದೆಗೆ ಮತ್ತು ಇನ್ನೊಂದು ಕೈಯನ್ನು ಮೇಲಕ್ಕೆತ್ತಿ ನೋವು ತೋಡಿಕೊಂಡನು. ಅಲ್ಲಿ ಇನ್ನೂ ಇಬ್ಬರು ಮೂವರು ಪೊಲೀಸರು ಇದ್ದರು. ಆದರೆ ಅವರು ನಮ್ಮನ್ನು ಬಿಡಲೇ ಇಲ್ಲ. ಅವರು ನಮ್ಮನ್ನು ಹೊರಗೆ ಬಿಡುವ ಮೊದಲು 45 ನಿಮಿಷಗಳ ಕಾಲ ಕಾಯಿಸಿದರು. ಮರುದಿನ ಕಾರನ್ನು ಬಿಡುಗಡೆ ಮಾಡಲಾಗುವುದು. ಕೀಲಿಯನ್ನು ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ನಮಗೆ ತಿಳಿಸಲಾಯಿತು” ಎಂದು ವಿವರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ತಮ್ಮನ್ನು ಥಳಿಸಿರುವುದಾಗಿ ಜುಬೇರ್‌ ಆರೋಪಿಸಿದ್ದಾರೆ.

“ಪೊಲೀಸರು ಅವನ ಮುಖ ಮತ್ತು ಬೆನ್ನಿನ ಮೇಲೆ ಕನಿಷ್ಠ ಐದರಿಂದ ಆರು ಬಾರಿ ಹೊಡೆದರು. ಪೊಲೀಸರು ಹೊಡೆಯಲು ಪ್ರಾರಂಭಿಸಿದ ಐದು ನಿಮಿಷಗಳಲ್ಲಿ ತನಗಾಗುತ್ತಿರುವ ಸಮಸ್ಯೆಯನ್ನು ಸಜೀವನ್‌ ಹೇಳಿದ್ದ. ಯಾಕೆ ಹೀಗೆ ಹೊಡೆಯುತ್ತಿದ್ದೀರ ಎಂದು ಪೊಲೀಸರನ್ನು ಕೇಳಿದಾಗ ನನಗೂ ಥಳಿಸಿದರು. ಸಜೀವನ್ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿರುವ ಕುರಿತು ಪೊಲೀಸರಿಗೆ ತಿಳಿಸಿದಾಗ- ಗ್ಯಾಸ್ ಆಗಿರಬಹುದು ಎಂದು ತಾತ್ಸಾರ ತೋರಿ ನೀರು ಕುಡಿಯಲು ತಿಳಿಸಿದರು” ಎಂದು ಜುಬೇರ್‌ ಹೇಳಿದ್ದಾರೆ.

ಪೊಲೀಸರು ಇಬ್ಬರಿಗೂ ತೆರಳಲು ಅವಕಾಶ ನೀಡಿದ ನಂತರ, ಸಜೀವನ್ ಆಟೊ ಹತ್ತಲು ಪೊಲೀಸ್ ಠಾಣೆಯಿಂದ ಹೊರಬಂದನು. “ಕಾರಿನ ಕೀಯನ್ನು ಪೊಲೀಸರಿಗೆ ಕೊಟ್ಟು ನಾನು ಹೊರಗೆ ಬರುವಷ್ಟರಲ್ಲಿ ಆತ ಪೊಲೀಸ್ ಠಾಣೆಯ ಆವರಣದಲ್ಲಿ ಕುಸಿದು ಬಿದ್ದಿದ್ದ. ಆ ಸಮಯದಲ್ಲಿ ಕಾಂಪೌಂಡ್ ಹೊರಗೆ ಆಟೋ ರಿಕ್ಷಾಗಳಿದ್ದವು. ನಂತರ ಆಟೋ ರಿಕ್ಷಾ ಚಾಲಕರು ಸಜೀವನ್‌ನನ್ನು ಆಟೋಗೆ ಸ್ಥಳಾಂತರಿಸಲು ಪ್ರಯತ್ನಿಸಿದರು. ಆದರೆ ಆತ ದಪ್ಪವಾಗಿದ್ದ ಕಾರಣ ಕಷ್ಟವಾಯಿತು. ಪೊಲೀಸ್ ಪೇದೆಯೊಬ್ಬರು ಠಾಣೆಯಿಂದ ಹೊರಬಂದರು. ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರನ್ನು ಕೊಡುವಂತೆ ಅವರಲ್ಲಿ ಮನವಿ ಮಾಡಿದೆ. ಅದಕ್ಕೆ ಅವರು ನಿರಾಕರಿಸಿದರು. ನಂತರ ಆಟೋ ರಿಕ್ಷಾ ಚಾಲಕರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಬಂದಿತು” ಎಂದು ಘಟನೆಯ ಕುರಿತು ತಿಳಿಸಿದ್ದಾರೆ.

ಇದನ್ನೂ ಓದಿರಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ಸಜೀವನ್‌ ತನಗಾಗುತ್ತಿರುವ ನೋವುನ್ನು ವ್ಯಕ್ತಪಡಿಸಿದಾಗಲೇ ಹೊರಹೋಗಲು ಪೊಲೀಸರು ಅವಕಾಶ ನೀಡಿದ್ದರೆ ಆತನ ಜೀವವನ್ನು ಉಳಿಸಬಹುದಿತ್ತು. ನಾನು ಆತನೊಂದಿಗೆ ಆಸ್ಪತ್ರೆಗೆ ಹೋಗಿದ್ದೆ. ಕೆಲವೇ ನಿಮಿಷಗಳಲ್ಲಿ, ಸಜೀವನ್‌ ತೀರಿಕೊಂಡರು ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ ಸಾವಿಗೆ ಕಾರಣವೇನೆಂದು ತಿಳಿಸಲಿಲ್ಲ. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಸಾಕಷ್ಟು ಸಮಯ ವ್ಯರ್ಥವಾಯಿತು. ಹತ್ತು ನಿಮಿಷ ಮುಂಚಿತವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಆತನ ಜೀವ ಉಳಿಸಬಹುದಿತ್ತು” ಎಂದು ವೈದ್ಯರು ಹೇಳಿದ್ದಾರೆ.

ಸಜೀವನ್ ಅವರ ಸಂಬಂಧಿ ಅರ್ಜುನ್ ಕೂಡ ಇದೇ ಆತಂಕವನ್ನು ‘ನ್ಯೂಸ್‌ ಮಿನಿಟ್‌’ನೊಂದಿಗೆ  ಹಂಚಿಕೊಂಡಿದ್ದಾರೆ. ಸಜೀವನ್ ಅವರ ಎದೆನೋವಿನ ದೂರನ್ನು ಪೊಲೀಸರು ನಿರ್ಲಕ್ಷಿಸಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಟಿ.ವಿಕ್ರಮ್ ಘಟನೆಯ ಕುರಿತು ತನಿಖಾ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಕ್ರೈಂ ಬ್ರಾಂಚ್ ಜುಲೈ 25ರ ಭಾನುವಾರ ಹೇಳಿಕೆ ದಾಖಲಿಸಲು ಜುಬೈರ್‌ಗೆ ಸಮನ್ಸ್ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...