Homeಮುಖಪುಟಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

- Advertisement -
- Advertisement -

ಎದೆ ನೋವು ಎಂದು ನೋವು ತೋಡಿಕೊಂಡರೂ ಬಿಡದೆ ಪೊಲೀಸರು ನಡೆಸಿರುವ ಹಲ್ಲೆಯಿಂದಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸ್ನೇಹಿತರಾದ ಜುಬೈರ್, ಸಜೀವನ್ ಮತ್ತು ಶಾಮನಾದ್ ಅವರು ತಲಶ್ಶೇರಿಯಿಂದ ವಡಕರ ಬಳಿ ಕಲ್ಲೇರಿ ಕಡೆಗೆ ಜುಲೈ 21ರಂದು ಹೋಗುತ್ತಿದ್ದಾಗ ರಾತ್ರಿ 11.30 ರ ಸುಮಾರಿಗೆ ಅವರ i20 ಕಾರು, ಸ್ವಿಫ್ಟ್‌ಗೆ ಡಿಕ್ಕಿ ಹೊಡೆದಿತ್ತು. ಈ ಅವಘಡದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಜೀವನ್ ಸಾವನ್ನಪ್ಪಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡಕರ ಸಮೀಪದ ಅಡ್ಯಕ್ಕತೆರುವು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಕಾರಣ ಶಾಮನಾದ್ ಪೊಲೀಸರು ವಶಕ್ಕೆ ಪಡೆದಿಲ್ಲ.

ವಡಕರದಲ್ಲಿ ಡ್ರೈವಿಂಗ್ ಲರ್ನಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಜುಬೇರ್‌ ಘಟನೆ ಕುರಿತು ಮಾತನಾಡಿ, “ನಾವು ಇನ್ನೊಂದು ಕಾರಿನಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯತ್ನಿಸಿದೆವು. ಅಷ್ಟರಲ್ಲಾಗಲೇ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದ ಕಾರಣ ನಮ್ಮನ್ನು ಠಾಣೆಗೆ ಕರೆದೊಯ್ದರು. ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ ಪೆಕ್ಟರ್ ನಮ್ಮ ಮೇಲೆ ಕೋಪಗೊಂಡಿದ್ದರು. ಆಗ ಸಜೀವನ್, ಇಂತಹ ಅವಘಡಗಳು ಸಹಜ ಎಂದು ಹೇಳಿದ. ಸಜೀವನ್‌ ಹಿಂತಿರುಗಿ ಮಾತನಾಡಿದ ಕಾರಣಕ್ಕೇನೋ ಸಬ್ ಇನ್ಸ್‌ಪೆಕ್ಟರ್ ಆತನನ್ನು ಹೊಡೆದು ನಮ್ಮನ್ನು ಠಾಣೆಯೊಳಗೆ ತಳ್ಳಿದರು” ಎಂದು ಮಾಹಿತಿ ನೀಡಿರುವುದಾಗಿ ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

“ಪೊಲೀಸ್ ಸಿಬ್ಬಂದಿ ಸಜೀವನ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಬಲವಾಗಿ ಹೊಡೆದರು. ಆಗ ಸಜೀವನ್‌ ಒಂದು ಕೈಯನ್ನು ಎದೆಗೆ ಮತ್ತು ಇನ್ನೊಂದು ಕೈಯನ್ನು ಮೇಲಕ್ಕೆತ್ತಿ ನೋವು ತೋಡಿಕೊಂಡನು. ಅಲ್ಲಿ ಇನ್ನೂ ಇಬ್ಬರು ಮೂವರು ಪೊಲೀಸರು ಇದ್ದರು. ಆದರೆ ಅವರು ನಮ್ಮನ್ನು ಬಿಡಲೇ ಇಲ್ಲ. ಅವರು ನಮ್ಮನ್ನು ಹೊರಗೆ ಬಿಡುವ ಮೊದಲು 45 ನಿಮಿಷಗಳ ಕಾಲ ಕಾಯಿಸಿದರು. ಮರುದಿನ ಕಾರನ್ನು ಬಿಡುಗಡೆ ಮಾಡಲಾಗುವುದು. ಕೀಲಿಯನ್ನು ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ನಮಗೆ ತಿಳಿಸಲಾಯಿತು” ಎಂದು ವಿವರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ತಮ್ಮನ್ನು ಥಳಿಸಿರುವುದಾಗಿ ಜುಬೇರ್‌ ಆರೋಪಿಸಿದ್ದಾರೆ.

“ಪೊಲೀಸರು ಅವನ ಮುಖ ಮತ್ತು ಬೆನ್ನಿನ ಮೇಲೆ ಕನಿಷ್ಠ ಐದರಿಂದ ಆರು ಬಾರಿ ಹೊಡೆದರು. ಪೊಲೀಸರು ಹೊಡೆಯಲು ಪ್ರಾರಂಭಿಸಿದ ಐದು ನಿಮಿಷಗಳಲ್ಲಿ ತನಗಾಗುತ್ತಿರುವ ಸಮಸ್ಯೆಯನ್ನು ಸಜೀವನ್‌ ಹೇಳಿದ್ದ. ಯಾಕೆ ಹೀಗೆ ಹೊಡೆಯುತ್ತಿದ್ದೀರ ಎಂದು ಪೊಲೀಸರನ್ನು ಕೇಳಿದಾಗ ನನಗೂ ಥಳಿಸಿದರು. ಸಜೀವನ್ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿರುವ ಕುರಿತು ಪೊಲೀಸರಿಗೆ ತಿಳಿಸಿದಾಗ- ಗ್ಯಾಸ್ ಆಗಿರಬಹುದು ಎಂದು ತಾತ್ಸಾರ ತೋರಿ ನೀರು ಕುಡಿಯಲು ತಿಳಿಸಿದರು” ಎಂದು ಜುಬೇರ್‌ ಹೇಳಿದ್ದಾರೆ.

ಪೊಲೀಸರು ಇಬ್ಬರಿಗೂ ತೆರಳಲು ಅವಕಾಶ ನೀಡಿದ ನಂತರ, ಸಜೀವನ್ ಆಟೊ ಹತ್ತಲು ಪೊಲೀಸ್ ಠಾಣೆಯಿಂದ ಹೊರಬಂದನು. “ಕಾರಿನ ಕೀಯನ್ನು ಪೊಲೀಸರಿಗೆ ಕೊಟ್ಟು ನಾನು ಹೊರಗೆ ಬರುವಷ್ಟರಲ್ಲಿ ಆತ ಪೊಲೀಸ್ ಠಾಣೆಯ ಆವರಣದಲ್ಲಿ ಕುಸಿದು ಬಿದ್ದಿದ್ದ. ಆ ಸಮಯದಲ್ಲಿ ಕಾಂಪೌಂಡ್ ಹೊರಗೆ ಆಟೋ ರಿಕ್ಷಾಗಳಿದ್ದವು. ನಂತರ ಆಟೋ ರಿಕ್ಷಾ ಚಾಲಕರು ಸಜೀವನ್‌ನನ್ನು ಆಟೋಗೆ ಸ್ಥಳಾಂತರಿಸಲು ಪ್ರಯತ್ನಿಸಿದರು. ಆದರೆ ಆತ ದಪ್ಪವಾಗಿದ್ದ ಕಾರಣ ಕಷ್ಟವಾಯಿತು. ಪೊಲೀಸ್ ಪೇದೆಯೊಬ್ಬರು ಠಾಣೆಯಿಂದ ಹೊರಬಂದರು. ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರನ್ನು ಕೊಡುವಂತೆ ಅವರಲ್ಲಿ ಮನವಿ ಮಾಡಿದೆ. ಅದಕ್ಕೆ ಅವರು ನಿರಾಕರಿಸಿದರು. ನಂತರ ಆಟೋ ರಿಕ್ಷಾ ಚಾಲಕರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಬಂದಿತು” ಎಂದು ಘಟನೆಯ ಕುರಿತು ತಿಳಿಸಿದ್ದಾರೆ.

ಇದನ್ನೂ ಓದಿರಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ಸಜೀವನ್‌ ತನಗಾಗುತ್ತಿರುವ ನೋವುನ್ನು ವ್ಯಕ್ತಪಡಿಸಿದಾಗಲೇ ಹೊರಹೋಗಲು ಪೊಲೀಸರು ಅವಕಾಶ ನೀಡಿದ್ದರೆ ಆತನ ಜೀವವನ್ನು ಉಳಿಸಬಹುದಿತ್ತು. ನಾನು ಆತನೊಂದಿಗೆ ಆಸ್ಪತ್ರೆಗೆ ಹೋಗಿದ್ದೆ. ಕೆಲವೇ ನಿಮಿಷಗಳಲ್ಲಿ, ಸಜೀವನ್‌ ತೀರಿಕೊಂಡರು ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ ಸಾವಿಗೆ ಕಾರಣವೇನೆಂದು ತಿಳಿಸಲಿಲ್ಲ. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಸಾಕಷ್ಟು ಸಮಯ ವ್ಯರ್ಥವಾಯಿತು. ಹತ್ತು ನಿಮಿಷ ಮುಂಚಿತವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಆತನ ಜೀವ ಉಳಿಸಬಹುದಿತ್ತು” ಎಂದು ವೈದ್ಯರು ಹೇಳಿದ್ದಾರೆ.

ಸಜೀವನ್ ಅವರ ಸಂಬಂಧಿ ಅರ್ಜುನ್ ಕೂಡ ಇದೇ ಆತಂಕವನ್ನು ‘ನ್ಯೂಸ್‌ ಮಿನಿಟ್‌’ನೊಂದಿಗೆ  ಹಂಚಿಕೊಂಡಿದ್ದಾರೆ. ಸಜೀವನ್ ಅವರ ಎದೆನೋವಿನ ದೂರನ್ನು ಪೊಲೀಸರು ನಿರ್ಲಕ್ಷಿಸಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಟಿ.ವಿಕ್ರಮ್ ಘಟನೆಯ ಕುರಿತು ತನಿಖಾ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಕ್ರೈಂ ಬ್ರಾಂಚ್ ಜುಲೈ 25ರ ಭಾನುವಾರ ಹೇಳಿಕೆ ದಾಖಲಿಸಲು ಜುಬೈರ್‌ಗೆ ಸಮನ್ಸ್ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...