Homeಮುಖಪುಟಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

- Advertisement -
- Advertisement -

ಎದೆ ನೋವು ಎಂದು ನೋವು ತೋಡಿಕೊಂಡರೂ ಬಿಡದೆ ಪೊಲೀಸರು ನಡೆಸಿರುವ ಹಲ್ಲೆಯಿಂದಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸ್ನೇಹಿತರಾದ ಜುಬೈರ್, ಸಜೀವನ್ ಮತ್ತು ಶಾಮನಾದ್ ಅವರು ತಲಶ್ಶೇರಿಯಿಂದ ವಡಕರ ಬಳಿ ಕಲ್ಲೇರಿ ಕಡೆಗೆ ಜುಲೈ 21ರಂದು ಹೋಗುತ್ತಿದ್ದಾಗ ರಾತ್ರಿ 11.30 ರ ಸುಮಾರಿಗೆ ಅವರ i20 ಕಾರು, ಸ್ವಿಫ್ಟ್‌ಗೆ ಡಿಕ್ಕಿ ಹೊಡೆದಿತ್ತು. ಈ ಅವಘಡದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಜೀವನ್ ಸಾವನ್ನಪ್ಪಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡಕರ ಸಮೀಪದ ಅಡ್ಯಕ್ಕತೆರುವು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಕಾರಣ ಶಾಮನಾದ್ ಪೊಲೀಸರು ವಶಕ್ಕೆ ಪಡೆದಿಲ್ಲ.

ವಡಕರದಲ್ಲಿ ಡ್ರೈವಿಂಗ್ ಲರ್ನಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಜುಬೇರ್‌ ಘಟನೆ ಕುರಿತು ಮಾತನಾಡಿ, “ನಾವು ಇನ್ನೊಂದು ಕಾರಿನಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯತ್ನಿಸಿದೆವು. ಅಷ್ಟರಲ್ಲಾಗಲೇ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದ ಕಾರಣ ನಮ್ಮನ್ನು ಠಾಣೆಗೆ ಕರೆದೊಯ್ದರು. ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ ಪೆಕ್ಟರ್ ನಮ್ಮ ಮೇಲೆ ಕೋಪಗೊಂಡಿದ್ದರು. ಆಗ ಸಜೀವನ್, ಇಂತಹ ಅವಘಡಗಳು ಸಹಜ ಎಂದು ಹೇಳಿದ. ಸಜೀವನ್‌ ಹಿಂತಿರುಗಿ ಮಾತನಾಡಿದ ಕಾರಣಕ್ಕೇನೋ ಸಬ್ ಇನ್ಸ್‌ಪೆಕ್ಟರ್ ಆತನನ್ನು ಹೊಡೆದು ನಮ್ಮನ್ನು ಠಾಣೆಯೊಳಗೆ ತಳ್ಳಿದರು” ಎಂದು ಮಾಹಿತಿ ನೀಡಿರುವುದಾಗಿ ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

“ಪೊಲೀಸ್ ಸಿಬ್ಬಂದಿ ಸಜೀವನ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಬಲವಾಗಿ ಹೊಡೆದರು. ಆಗ ಸಜೀವನ್‌ ಒಂದು ಕೈಯನ್ನು ಎದೆಗೆ ಮತ್ತು ಇನ್ನೊಂದು ಕೈಯನ್ನು ಮೇಲಕ್ಕೆತ್ತಿ ನೋವು ತೋಡಿಕೊಂಡನು. ಅಲ್ಲಿ ಇನ್ನೂ ಇಬ್ಬರು ಮೂವರು ಪೊಲೀಸರು ಇದ್ದರು. ಆದರೆ ಅವರು ನಮ್ಮನ್ನು ಬಿಡಲೇ ಇಲ್ಲ. ಅವರು ನಮ್ಮನ್ನು ಹೊರಗೆ ಬಿಡುವ ಮೊದಲು 45 ನಿಮಿಷಗಳ ಕಾಲ ಕಾಯಿಸಿದರು. ಮರುದಿನ ಕಾರನ್ನು ಬಿಡುಗಡೆ ಮಾಡಲಾಗುವುದು. ಕೀಲಿಯನ್ನು ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ನಮಗೆ ತಿಳಿಸಲಾಯಿತು” ಎಂದು ವಿವರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ತಮ್ಮನ್ನು ಥಳಿಸಿರುವುದಾಗಿ ಜುಬೇರ್‌ ಆರೋಪಿಸಿದ್ದಾರೆ.

“ಪೊಲೀಸರು ಅವನ ಮುಖ ಮತ್ತು ಬೆನ್ನಿನ ಮೇಲೆ ಕನಿಷ್ಠ ಐದರಿಂದ ಆರು ಬಾರಿ ಹೊಡೆದರು. ಪೊಲೀಸರು ಹೊಡೆಯಲು ಪ್ರಾರಂಭಿಸಿದ ಐದು ನಿಮಿಷಗಳಲ್ಲಿ ತನಗಾಗುತ್ತಿರುವ ಸಮಸ್ಯೆಯನ್ನು ಸಜೀವನ್‌ ಹೇಳಿದ್ದ. ಯಾಕೆ ಹೀಗೆ ಹೊಡೆಯುತ್ತಿದ್ದೀರ ಎಂದು ಪೊಲೀಸರನ್ನು ಕೇಳಿದಾಗ ನನಗೂ ಥಳಿಸಿದರು. ಸಜೀವನ್ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿರುವ ಕುರಿತು ಪೊಲೀಸರಿಗೆ ತಿಳಿಸಿದಾಗ- ಗ್ಯಾಸ್ ಆಗಿರಬಹುದು ಎಂದು ತಾತ್ಸಾರ ತೋರಿ ನೀರು ಕುಡಿಯಲು ತಿಳಿಸಿದರು” ಎಂದು ಜುಬೇರ್‌ ಹೇಳಿದ್ದಾರೆ.

ಪೊಲೀಸರು ಇಬ್ಬರಿಗೂ ತೆರಳಲು ಅವಕಾಶ ನೀಡಿದ ನಂತರ, ಸಜೀವನ್ ಆಟೊ ಹತ್ತಲು ಪೊಲೀಸ್ ಠಾಣೆಯಿಂದ ಹೊರಬಂದನು. “ಕಾರಿನ ಕೀಯನ್ನು ಪೊಲೀಸರಿಗೆ ಕೊಟ್ಟು ನಾನು ಹೊರಗೆ ಬರುವಷ್ಟರಲ್ಲಿ ಆತ ಪೊಲೀಸ್ ಠಾಣೆಯ ಆವರಣದಲ್ಲಿ ಕುಸಿದು ಬಿದ್ದಿದ್ದ. ಆ ಸಮಯದಲ್ಲಿ ಕಾಂಪೌಂಡ್ ಹೊರಗೆ ಆಟೋ ರಿಕ್ಷಾಗಳಿದ್ದವು. ನಂತರ ಆಟೋ ರಿಕ್ಷಾ ಚಾಲಕರು ಸಜೀವನ್‌ನನ್ನು ಆಟೋಗೆ ಸ್ಥಳಾಂತರಿಸಲು ಪ್ರಯತ್ನಿಸಿದರು. ಆದರೆ ಆತ ದಪ್ಪವಾಗಿದ್ದ ಕಾರಣ ಕಷ್ಟವಾಯಿತು. ಪೊಲೀಸ್ ಪೇದೆಯೊಬ್ಬರು ಠಾಣೆಯಿಂದ ಹೊರಬಂದರು. ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರನ್ನು ಕೊಡುವಂತೆ ಅವರಲ್ಲಿ ಮನವಿ ಮಾಡಿದೆ. ಅದಕ್ಕೆ ಅವರು ನಿರಾಕರಿಸಿದರು. ನಂತರ ಆಟೋ ರಿಕ್ಷಾ ಚಾಲಕರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಬಂದಿತು” ಎಂದು ಘಟನೆಯ ಕುರಿತು ತಿಳಿಸಿದ್ದಾರೆ.

ಇದನ್ನೂ ಓದಿರಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ಸಜೀವನ್‌ ತನಗಾಗುತ್ತಿರುವ ನೋವುನ್ನು ವ್ಯಕ್ತಪಡಿಸಿದಾಗಲೇ ಹೊರಹೋಗಲು ಪೊಲೀಸರು ಅವಕಾಶ ನೀಡಿದ್ದರೆ ಆತನ ಜೀವವನ್ನು ಉಳಿಸಬಹುದಿತ್ತು. ನಾನು ಆತನೊಂದಿಗೆ ಆಸ್ಪತ್ರೆಗೆ ಹೋಗಿದ್ದೆ. ಕೆಲವೇ ನಿಮಿಷಗಳಲ್ಲಿ, ಸಜೀವನ್‌ ತೀರಿಕೊಂಡರು ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ ಸಾವಿಗೆ ಕಾರಣವೇನೆಂದು ತಿಳಿಸಲಿಲ್ಲ. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಸಾಕಷ್ಟು ಸಮಯ ವ್ಯರ್ಥವಾಯಿತು. ಹತ್ತು ನಿಮಿಷ ಮುಂಚಿತವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಆತನ ಜೀವ ಉಳಿಸಬಹುದಿತ್ತು” ಎಂದು ವೈದ್ಯರು ಹೇಳಿದ್ದಾರೆ.

ಸಜೀವನ್ ಅವರ ಸಂಬಂಧಿ ಅರ್ಜುನ್ ಕೂಡ ಇದೇ ಆತಂಕವನ್ನು ‘ನ್ಯೂಸ್‌ ಮಿನಿಟ್‌’ನೊಂದಿಗೆ  ಹಂಚಿಕೊಂಡಿದ್ದಾರೆ. ಸಜೀವನ್ ಅವರ ಎದೆನೋವಿನ ದೂರನ್ನು ಪೊಲೀಸರು ನಿರ್ಲಕ್ಷಿಸಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಟಿ.ವಿಕ್ರಮ್ ಘಟನೆಯ ಕುರಿತು ತನಿಖಾ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಕ್ರೈಂ ಬ್ರಾಂಚ್ ಜುಲೈ 25ರ ಭಾನುವಾರ ಹೇಳಿಕೆ ದಾಖಲಿಸಲು ಜುಬೈರ್‌ಗೆ ಸಮನ್ಸ್ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...