Homeಮುಖಪುಟಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

- Advertisement -
- Advertisement -

ಎದೆ ನೋವು ಎಂದು ನೋವು ತೋಡಿಕೊಂಡರೂ ಬಿಡದೆ ಪೊಲೀಸರು ನಡೆಸಿರುವ ಹಲ್ಲೆಯಿಂದಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸ್ನೇಹಿತರಾದ ಜುಬೈರ್, ಸಜೀವನ್ ಮತ್ತು ಶಾಮನಾದ್ ಅವರು ತಲಶ್ಶೇರಿಯಿಂದ ವಡಕರ ಬಳಿ ಕಲ್ಲೇರಿ ಕಡೆಗೆ ಜುಲೈ 21ರಂದು ಹೋಗುತ್ತಿದ್ದಾಗ ರಾತ್ರಿ 11.30 ರ ಸುಮಾರಿಗೆ ಅವರ i20 ಕಾರು, ಸ್ವಿಫ್ಟ್‌ಗೆ ಡಿಕ್ಕಿ ಹೊಡೆದಿತ್ತು. ಈ ಅವಘಡದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಜೀವನ್ ಸಾವನ್ನಪ್ಪಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡಕರ ಸಮೀಪದ ಅಡ್ಯಕ್ಕತೆರುವು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಕಾರಣ ಶಾಮನಾದ್ ಪೊಲೀಸರು ವಶಕ್ಕೆ ಪಡೆದಿಲ್ಲ.

ವಡಕರದಲ್ಲಿ ಡ್ರೈವಿಂಗ್ ಲರ್ನಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಜುಬೇರ್‌ ಘಟನೆ ಕುರಿತು ಮಾತನಾಡಿ, “ನಾವು ಇನ್ನೊಂದು ಕಾರಿನಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯತ್ನಿಸಿದೆವು. ಅಷ್ಟರಲ್ಲಾಗಲೇ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದ ಕಾರಣ ನಮ್ಮನ್ನು ಠಾಣೆಗೆ ಕರೆದೊಯ್ದರು. ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ ಪೆಕ್ಟರ್ ನಮ್ಮ ಮೇಲೆ ಕೋಪಗೊಂಡಿದ್ದರು. ಆಗ ಸಜೀವನ್, ಇಂತಹ ಅವಘಡಗಳು ಸಹಜ ಎಂದು ಹೇಳಿದ. ಸಜೀವನ್‌ ಹಿಂತಿರುಗಿ ಮಾತನಾಡಿದ ಕಾರಣಕ್ಕೇನೋ ಸಬ್ ಇನ್ಸ್‌ಪೆಕ್ಟರ್ ಆತನನ್ನು ಹೊಡೆದು ನಮ್ಮನ್ನು ಠಾಣೆಯೊಳಗೆ ತಳ್ಳಿದರು” ಎಂದು ಮಾಹಿತಿ ನೀಡಿರುವುದಾಗಿ ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

“ಪೊಲೀಸ್ ಸಿಬ್ಬಂದಿ ಸಜೀವನ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಬಲವಾಗಿ ಹೊಡೆದರು. ಆಗ ಸಜೀವನ್‌ ಒಂದು ಕೈಯನ್ನು ಎದೆಗೆ ಮತ್ತು ಇನ್ನೊಂದು ಕೈಯನ್ನು ಮೇಲಕ್ಕೆತ್ತಿ ನೋವು ತೋಡಿಕೊಂಡನು. ಅಲ್ಲಿ ಇನ್ನೂ ಇಬ್ಬರು ಮೂವರು ಪೊಲೀಸರು ಇದ್ದರು. ಆದರೆ ಅವರು ನಮ್ಮನ್ನು ಬಿಡಲೇ ಇಲ್ಲ. ಅವರು ನಮ್ಮನ್ನು ಹೊರಗೆ ಬಿಡುವ ಮೊದಲು 45 ನಿಮಿಷಗಳ ಕಾಲ ಕಾಯಿಸಿದರು. ಮರುದಿನ ಕಾರನ್ನು ಬಿಡುಗಡೆ ಮಾಡಲಾಗುವುದು. ಕೀಲಿಯನ್ನು ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ನಮಗೆ ತಿಳಿಸಲಾಯಿತು” ಎಂದು ವಿವರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ತಮ್ಮನ್ನು ಥಳಿಸಿರುವುದಾಗಿ ಜುಬೇರ್‌ ಆರೋಪಿಸಿದ್ದಾರೆ.

“ಪೊಲೀಸರು ಅವನ ಮುಖ ಮತ್ತು ಬೆನ್ನಿನ ಮೇಲೆ ಕನಿಷ್ಠ ಐದರಿಂದ ಆರು ಬಾರಿ ಹೊಡೆದರು. ಪೊಲೀಸರು ಹೊಡೆಯಲು ಪ್ರಾರಂಭಿಸಿದ ಐದು ನಿಮಿಷಗಳಲ್ಲಿ ತನಗಾಗುತ್ತಿರುವ ಸಮಸ್ಯೆಯನ್ನು ಸಜೀವನ್‌ ಹೇಳಿದ್ದ. ಯಾಕೆ ಹೀಗೆ ಹೊಡೆಯುತ್ತಿದ್ದೀರ ಎಂದು ಪೊಲೀಸರನ್ನು ಕೇಳಿದಾಗ ನನಗೂ ಥಳಿಸಿದರು. ಸಜೀವನ್ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿರುವ ಕುರಿತು ಪೊಲೀಸರಿಗೆ ತಿಳಿಸಿದಾಗ- ಗ್ಯಾಸ್ ಆಗಿರಬಹುದು ಎಂದು ತಾತ್ಸಾರ ತೋರಿ ನೀರು ಕುಡಿಯಲು ತಿಳಿಸಿದರು” ಎಂದು ಜುಬೇರ್‌ ಹೇಳಿದ್ದಾರೆ.

ಪೊಲೀಸರು ಇಬ್ಬರಿಗೂ ತೆರಳಲು ಅವಕಾಶ ನೀಡಿದ ನಂತರ, ಸಜೀವನ್ ಆಟೊ ಹತ್ತಲು ಪೊಲೀಸ್ ಠಾಣೆಯಿಂದ ಹೊರಬಂದನು. “ಕಾರಿನ ಕೀಯನ್ನು ಪೊಲೀಸರಿಗೆ ಕೊಟ್ಟು ನಾನು ಹೊರಗೆ ಬರುವಷ್ಟರಲ್ಲಿ ಆತ ಪೊಲೀಸ್ ಠಾಣೆಯ ಆವರಣದಲ್ಲಿ ಕುಸಿದು ಬಿದ್ದಿದ್ದ. ಆ ಸಮಯದಲ್ಲಿ ಕಾಂಪೌಂಡ್ ಹೊರಗೆ ಆಟೋ ರಿಕ್ಷಾಗಳಿದ್ದವು. ನಂತರ ಆಟೋ ರಿಕ್ಷಾ ಚಾಲಕರು ಸಜೀವನ್‌ನನ್ನು ಆಟೋಗೆ ಸ್ಥಳಾಂತರಿಸಲು ಪ್ರಯತ್ನಿಸಿದರು. ಆದರೆ ಆತ ದಪ್ಪವಾಗಿದ್ದ ಕಾರಣ ಕಷ್ಟವಾಯಿತು. ಪೊಲೀಸ್ ಪೇದೆಯೊಬ್ಬರು ಠಾಣೆಯಿಂದ ಹೊರಬಂದರು. ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರನ್ನು ಕೊಡುವಂತೆ ಅವರಲ್ಲಿ ಮನವಿ ಮಾಡಿದೆ. ಅದಕ್ಕೆ ಅವರು ನಿರಾಕರಿಸಿದರು. ನಂತರ ಆಟೋ ರಿಕ್ಷಾ ಚಾಲಕರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಬಂದಿತು” ಎಂದು ಘಟನೆಯ ಕುರಿತು ತಿಳಿಸಿದ್ದಾರೆ.

ಇದನ್ನೂ ಓದಿರಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ಸಜೀವನ್‌ ತನಗಾಗುತ್ತಿರುವ ನೋವುನ್ನು ವ್ಯಕ್ತಪಡಿಸಿದಾಗಲೇ ಹೊರಹೋಗಲು ಪೊಲೀಸರು ಅವಕಾಶ ನೀಡಿದ್ದರೆ ಆತನ ಜೀವವನ್ನು ಉಳಿಸಬಹುದಿತ್ತು. ನಾನು ಆತನೊಂದಿಗೆ ಆಸ್ಪತ್ರೆಗೆ ಹೋಗಿದ್ದೆ. ಕೆಲವೇ ನಿಮಿಷಗಳಲ್ಲಿ, ಸಜೀವನ್‌ ತೀರಿಕೊಂಡರು ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ ಸಾವಿಗೆ ಕಾರಣವೇನೆಂದು ತಿಳಿಸಲಿಲ್ಲ. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಸಾಕಷ್ಟು ಸಮಯ ವ್ಯರ್ಥವಾಯಿತು. ಹತ್ತು ನಿಮಿಷ ಮುಂಚಿತವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಆತನ ಜೀವ ಉಳಿಸಬಹುದಿತ್ತು” ಎಂದು ವೈದ್ಯರು ಹೇಳಿದ್ದಾರೆ.

ಸಜೀವನ್ ಅವರ ಸಂಬಂಧಿ ಅರ್ಜುನ್ ಕೂಡ ಇದೇ ಆತಂಕವನ್ನು ‘ನ್ಯೂಸ್‌ ಮಿನಿಟ್‌’ನೊಂದಿಗೆ  ಹಂಚಿಕೊಂಡಿದ್ದಾರೆ. ಸಜೀವನ್ ಅವರ ಎದೆನೋವಿನ ದೂರನ್ನು ಪೊಲೀಸರು ನಿರ್ಲಕ್ಷಿಸಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಟಿ.ವಿಕ್ರಮ್ ಘಟನೆಯ ಕುರಿತು ತನಿಖಾ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಕ್ರೈಂ ಬ್ರಾಂಚ್ ಜುಲೈ 25ರ ಭಾನುವಾರ ಹೇಳಿಕೆ ದಾಖಲಿಸಲು ಜುಬೈರ್‌ಗೆ ಸಮನ್ಸ್ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...