Homeಮುಖಪುಟಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

- Advertisement -
- Advertisement -

ಎದೆ ನೋವು ಎಂದು ನೋವು ತೋಡಿಕೊಂಡರೂ ಬಿಡದೆ ಪೊಲೀಸರು ನಡೆಸಿರುವ ಹಲ್ಲೆಯಿಂದಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸ್ನೇಹಿತರಾದ ಜುಬೈರ್, ಸಜೀವನ್ ಮತ್ತು ಶಾಮನಾದ್ ಅವರು ತಲಶ್ಶೇರಿಯಿಂದ ವಡಕರ ಬಳಿ ಕಲ್ಲೇರಿ ಕಡೆಗೆ ಜುಲೈ 21ರಂದು ಹೋಗುತ್ತಿದ್ದಾಗ ರಾತ್ರಿ 11.30 ರ ಸುಮಾರಿಗೆ ಅವರ i20 ಕಾರು, ಸ್ವಿಫ್ಟ್‌ಗೆ ಡಿಕ್ಕಿ ಹೊಡೆದಿತ್ತು. ಈ ಅವಘಡದಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಲ್ಲೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಜೀವನ್ ಸಾವನ್ನಪ್ಪಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಡಕರ ಸಮೀಪದ ಅಡ್ಯಕ್ಕತೆರುವು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಕಾರಣ ಶಾಮನಾದ್ ಪೊಲೀಸರು ವಶಕ್ಕೆ ಪಡೆದಿಲ್ಲ.

ವಡಕರದಲ್ಲಿ ಡ್ರೈವಿಂಗ್ ಲರ್ನಿಂಗ್ ಇನ್‌ಸ್ಟಿಟ್ಯೂಟ್ ನಡೆಸುತ್ತಿರುವ ಜುಬೇರ್‌ ಘಟನೆ ಕುರಿತು ಮಾತನಾಡಿ, “ನಾವು ಇನ್ನೊಂದು ಕಾರಿನಲ್ಲಿದ್ದ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಯತ್ನಿಸಿದೆವು. ಅಷ್ಟರಲ್ಲಾಗಲೇ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದ ಕಾರಣ ನಮ್ಮನ್ನು ಠಾಣೆಗೆ ಕರೆದೊಯ್ದರು. ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ ಪೆಕ್ಟರ್ ನಮ್ಮ ಮೇಲೆ ಕೋಪಗೊಂಡಿದ್ದರು. ಆಗ ಸಜೀವನ್, ಇಂತಹ ಅವಘಡಗಳು ಸಹಜ ಎಂದು ಹೇಳಿದ. ಸಜೀವನ್‌ ಹಿಂತಿರುಗಿ ಮಾತನಾಡಿದ ಕಾರಣಕ್ಕೇನೋ ಸಬ್ ಇನ್ಸ್‌ಪೆಕ್ಟರ್ ಆತನನ್ನು ಹೊಡೆದು ನಮ್ಮನ್ನು ಠಾಣೆಯೊಳಗೆ ತಳ್ಳಿದರು” ಎಂದು ಮಾಹಿತಿ ನೀಡಿರುವುದಾಗಿ ‘ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

“ಪೊಲೀಸ್ ಸಿಬ್ಬಂದಿ ಸಜೀವನ್ ಅವರ ಮುಖಕ್ಕೆ ಮತ್ತು ಬೆನ್ನಿಗೆ ಬಲವಾಗಿ ಹೊಡೆದರು. ಆಗ ಸಜೀವನ್‌ ಒಂದು ಕೈಯನ್ನು ಎದೆಗೆ ಮತ್ತು ಇನ್ನೊಂದು ಕೈಯನ್ನು ಮೇಲಕ್ಕೆತ್ತಿ ನೋವು ತೋಡಿಕೊಂಡನು. ಅಲ್ಲಿ ಇನ್ನೂ ಇಬ್ಬರು ಮೂವರು ಪೊಲೀಸರು ಇದ್ದರು. ಆದರೆ ಅವರು ನಮ್ಮನ್ನು ಬಿಡಲೇ ಇಲ್ಲ. ಅವರು ನಮ್ಮನ್ನು ಹೊರಗೆ ಬಿಡುವ ಮೊದಲು 45 ನಿಮಿಷಗಳ ಕಾಲ ಕಾಯಿಸಿದರು. ಮರುದಿನ ಕಾರನ್ನು ಬಿಡುಗಡೆ ಮಾಡಲಾಗುವುದು. ಕೀಲಿಯನ್ನು ಪೊಲೀಸ್ ಠಾಣೆಯಲ್ಲಿ ಇಡಬೇಕೆಂದು ನಮಗೆ ತಿಳಿಸಲಾಯಿತು” ಎಂದು ವಿವರಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ತಮ್ಮನ್ನು ಥಳಿಸಿರುವುದಾಗಿ ಜುಬೇರ್‌ ಆರೋಪಿಸಿದ್ದಾರೆ.

“ಪೊಲೀಸರು ಅವನ ಮುಖ ಮತ್ತು ಬೆನ್ನಿನ ಮೇಲೆ ಕನಿಷ್ಠ ಐದರಿಂದ ಆರು ಬಾರಿ ಹೊಡೆದರು. ಪೊಲೀಸರು ಹೊಡೆಯಲು ಪ್ರಾರಂಭಿಸಿದ ಐದು ನಿಮಿಷಗಳಲ್ಲಿ ತನಗಾಗುತ್ತಿರುವ ಸಮಸ್ಯೆಯನ್ನು ಸಜೀವನ್‌ ಹೇಳಿದ್ದ. ಯಾಕೆ ಹೀಗೆ ಹೊಡೆಯುತ್ತಿದ್ದೀರ ಎಂದು ಪೊಲೀಸರನ್ನು ಕೇಳಿದಾಗ ನನಗೂ ಥಳಿಸಿದರು. ಸಜೀವನ್ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಳ್ಳುತ್ತಿರುವ ಕುರಿತು ಪೊಲೀಸರಿಗೆ ತಿಳಿಸಿದಾಗ- ಗ್ಯಾಸ್ ಆಗಿರಬಹುದು ಎಂದು ತಾತ್ಸಾರ ತೋರಿ ನೀರು ಕುಡಿಯಲು ತಿಳಿಸಿದರು” ಎಂದು ಜುಬೇರ್‌ ಹೇಳಿದ್ದಾರೆ.

ಪೊಲೀಸರು ಇಬ್ಬರಿಗೂ ತೆರಳಲು ಅವಕಾಶ ನೀಡಿದ ನಂತರ, ಸಜೀವನ್ ಆಟೊ ಹತ್ತಲು ಪೊಲೀಸ್ ಠಾಣೆಯಿಂದ ಹೊರಬಂದನು. “ಕಾರಿನ ಕೀಯನ್ನು ಪೊಲೀಸರಿಗೆ ಕೊಟ್ಟು ನಾನು ಹೊರಗೆ ಬರುವಷ್ಟರಲ್ಲಿ ಆತ ಪೊಲೀಸ್ ಠಾಣೆಯ ಆವರಣದಲ್ಲಿ ಕುಸಿದು ಬಿದ್ದಿದ್ದ. ಆ ಸಮಯದಲ್ಲಿ ಕಾಂಪೌಂಡ್ ಹೊರಗೆ ಆಟೋ ರಿಕ್ಷಾಗಳಿದ್ದವು. ನಂತರ ಆಟೋ ರಿಕ್ಷಾ ಚಾಲಕರು ಸಜೀವನ್‌ನನ್ನು ಆಟೋಗೆ ಸ್ಥಳಾಂತರಿಸಲು ಪ್ರಯತ್ನಿಸಿದರು. ಆದರೆ ಆತ ದಪ್ಪವಾಗಿದ್ದ ಕಾರಣ ಕಷ್ಟವಾಯಿತು. ಪೊಲೀಸ್ ಪೇದೆಯೊಬ್ಬರು ಠಾಣೆಯಿಂದ ಹೊರಬಂದರು. ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರನ್ನು ಕೊಡುವಂತೆ ಅವರಲ್ಲಿ ಮನವಿ ಮಾಡಿದೆ. ಅದಕ್ಕೆ ಅವರು ನಿರಾಕರಿಸಿದರು. ನಂತರ ಆಟೋ ರಿಕ್ಷಾ ಚಾಲಕರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು. 15 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಬಂದಿತು” ಎಂದು ಘಟನೆಯ ಕುರಿತು ತಿಳಿಸಿದ್ದಾರೆ.

ಇದನ್ನೂ ಓದಿರಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ಸಜೀವನ್‌ ತನಗಾಗುತ್ತಿರುವ ನೋವುನ್ನು ವ್ಯಕ್ತಪಡಿಸಿದಾಗಲೇ ಹೊರಹೋಗಲು ಪೊಲೀಸರು ಅವಕಾಶ ನೀಡಿದ್ದರೆ ಆತನ ಜೀವವನ್ನು ಉಳಿಸಬಹುದಿತ್ತು. ನಾನು ಆತನೊಂದಿಗೆ ಆಸ್ಪತ್ರೆಗೆ ಹೋಗಿದ್ದೆ. ಕೆಲವೇ ನಿಮಿಷಗಳಲ್ಲಿ, ಸಜೀವನ್‌ ತೀರಿಕೊಂಡರು ಎಂದು ವೈದ್ಯರು ನಮಗೆ ತಿಳಿಸಿದರು. ಆದರೆ ಸಾವಿಗೆ ಕಾರಣವೇನೆಂದು ತಿಳಿಸಲಿಲ್ಲ. ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಸಾಕಷ್ಟು ಸಮಯ ವ್ಯರ್ಥವಾಯಿತು. ಹತ್ತು ನಿಮಿಷ ಮುಂಚಿತವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಆತನ ಜೀವ ಉಳಿಸಬಹುದಿತ್ತು” ಎಂದು ವೈದ್ಯರು ಹೇಳಿದ್ದಾರೆ.

ಸಜೀವನ್ ಅವರ ಸಂಬಂಧಿ ಅರ್ಜುನ್ ಕೂಡ ಇದೇ ಆತಂಕವನ್ನು ‘ನ್ಯೂಸ್‌ ಮಿನಿಟ್‌’ನೊಂದಿಗೆ  ಹಂಚಿಕೊಂಡಿದ್ದಾರೆ. ಸಜೀವನ್ ಅವರ ಎದೆನೋವಿನ ದೂರನ್ನು ಪೊಲೀಸರು ನಿರ್ಲಕ್ಷಿಸಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಟಿ.ವಿಕ್ರಮ್ ಘಟನೆಯ ಕುರಿತು ತನಿಖಾ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ. ಕ್ರೈಂ ಬ್ರಾಂಚ್ ಜುಲೈ 25ರ ಭಾನುವಾರ ಹೇಳಿಕೆ ದಾಖಲಿಸಲು ಜುಬೈರ್‌ಗೆ ಸಮನ್ಸ್ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...