Homeಮುಖಪುಟರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

- Advertisement -
- Advertisement -

ಕೇರಳ-ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ 2017ರಲ್ಲಿ ಕಾಸರಗೋಡಿನಲ್ಲಿ ನಡೆದಿದ್ದ ಮಡಿಕೇರಿ ಮೂಲದ ರಿಯಾಝ್ ಮೌಲವಿ (27) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾಗಿದ್ದ ಆರೆಸ್ಸೆಸ್‌ನ ಮೂವರು ಕಾರ್ಯಕರ್ತರನ್ನು ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿದೆ. ಇದರ ಬೆನ್ನಲ್ಲಿ ರಿಯಾಝ್ ಮೌಲವಿ ಕುಟುಂಬ ನಿರಾಶೆಯನ್ನು ವ್ಯಕ್ತಪಡಿಸಿದೆ.

ಕಾಸರಗೋಡು ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಕೆ.ಬಾಲಕೃಷ್ಣನ್ ಅವರು ಆರೋಪಿಗಳಾದ ಅಖಿಲೇಶ್(34), ಜಿತಿನ್(28) ಮತ್ತು ಅಜೇಶ್(29) ಅವರನ್ನು ಖುಲಾಸೆಗೊಳಿಸಿದ್ದಾರೆ. ಆರೋಪಿಗಳು ಏಳು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಕಾಸರಗೋಡಿನ ಹಳೆ ಸೂರ್ಲುವಿನಲ್ಲಿ ಮದ್ರಸದಲ್ಲಿ ಶಿಕ್ಷಕರಾಗಿ‌ ಕೆಲಸ ಮೊಹಮ್ಮದ್ ರಿಯಾಝ್ ಮೌಲವಿ ಅವರನ್ನು ಮಾರ್ಚ್ 20, 2017ರಂದು ಮುಂಜಾನೆ ಮಸೀದಿಗೆ ನುಗ್ಗಿ ಕೊಚ್ಚಿ ಕೊಲೆಗೈಯ್ಯಲಾಗಿತ್ತು. ಕೃತ್ಯ ನಡೆದು ಮೂರು ದಿನಗಳಲ್ಲೇ ಆರೋಪಿಗಳನ್ನು ತನಿಖಾ ತಂಡ ಬಂಧಿಸಿತ್ತು.

ಪ್ರಕರಣದ ಕುರಿತು ಅಂದಿನ ಕ್ರೈಂ ಬ್ರಾಂಚ್ ಎಸ್ಪಿ ಆಗಿದ್ದ ಡಾ.ಶ್ರೀನಿವಾಸ್ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಶೀಘ್ರವೇ ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಕುರಿತು ನ್ಯಾಯಾಲಯಕ್ಕೆ ನೂರಕ್ಕೂ ಅಧಿಕ ಸಾಕ್ಷಿಗಳನ್ನು ಸಲ್ಲಿಸಲಾಗಿತ್ತು. ಡಿಎನ್ಎ, ವೈಜ್ಞಾನಿಕ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ಕೋವಿಡ್ ಹಾಗೂ ಇನ್ನಿತರ ಕಾರಣಗಳಿಂದ ವಿಚಾರಣೆ ಹಾಗೂ ತೀರ್ಪು ವಿಳಂಬವಾಗಿತ್ತು.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ಶುಕ್ಕೂರ್ ಈ ಕುರಿತು ಮಾತನಾಡಿದ್ದು,  ಪ್ರಕರಣದಲ್ಲಿ ಬಲವಾದ ಸಾಕ್ಷ್ಯಾಧಾರಗಳಿವೆ. ಆರೋಪಿಗಳಲ್ಲಿ ಒಬ್ಬನ ಬಟ್ಟೆಯಲ್ಲಿ ಮೌಲವಿ ಅವರ ರಕ್ತದ ಕಲೆ ಪತ್ತೆಯಾಗಿದೆ. ಆರೋಪಿಗಳು ಬಳಸಿದ್ದ ಚಾಕುವಿನಲ್ಲಿಯೂ ಮೌಲವಿಯ ಬಟ್ಟೆಯ ತುಂಡು ಪತ್ತೆಯಾಗಿದೆ. ನಾವು ಎಲ್ಲಾ ಸಾಕ್ಷ್ಯಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ತೀರ್ಪಿನ ಬೆನ್ನಲ್ಲಿ ರಿಯಾಝ್ ಮೌಲವಿ ಅವರ ಪತ್ನಿ ಸೈದಾ ಅವರು ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇತ್ತು. ಆರೋಪಿಗಳಿಗೆ ಕಠಿಣ ಶಿಕ್ಷೆ ಲಭಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ ಜಸ್ಟಿಸ್‌ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...