Homeಮುಖಪುಟರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

- Advertisement -
- Advertisement -

ಕೇರಳ-ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ 2017ರಲ್ಲಿ ಕಾಸರಗೋಡಿನಲ್ಲಿ ನಡೆದಿದ್ದ ಮಡಿಕೇರಿ ಮೂಲದ ರಿಯಾಝ್ ಮೌಲವಿ (27) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾಗಿದ್ದ ಆರೆಸ್ಸೆಸ್‌ನ ಮೂವರು ಕಾರ್ಯಕರ್ತರನ್ನು ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿದೆ. ಇದರ ಬೆನ್ನಲ್ಲಿ ರಿಯಾಝ್ ಮೌಲವಿ ಕುಟುಂಬ ನಿರಾಶೆಯನ್ನು ವ್ಯಕ್ತಪಡಿಸಿದೆ.

ಕಾಸರಗೋಡು ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಕೆ.ಬಾಲಕೃಷ್ಣನ್ ಅವರು ಆರೋಪಿಗಳಾದ ಅಖಿಲೇಶ್(34), ಜಿತಿನ್(28) ಮತ್ತು ಅಜೇಶ್(29) ಅವರನ್ನು ಖುಲಾಸೆಗೊಳಿಸಿದ್ದಾರೆ. ಆರೋಪಿಗಳು ಏಳು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಕಾಸರಗೋಡಿನ ಹಳೆ ಸೂರ್ಲುವಿನಲ್ಲಿ ಮದ್ರಸದಲ್ಲಿ ಶಿಕ್ಷಕರಾಗಿ‌ ಕೆಲಸ ಮೊಹಮ್ಮದ್ ರಿಯಾಝ್ ಮೌಲವಿ ಅವರನ್ನು ಮಾರ್ಚ್ 20, 2017ರಂದು ಮುಂಜಾನೆ ಮಸೀದಿಗೆ ನುಗ್ಗಿ ಕೊಚ್ಚಿ ಕೊಲೆಗೈಯ್ಯಲಾಗಿತ್ತು. ಕೃತ್ಯ ನಡೆದು ಮೂರು ದಿನಗಳಲ್ಲೇ ಆರೋಪಿಗಳನ್ನು ತನಿಖಾ ತಂಡ ಬಂಧಿಸಿತ್ತು.

ಪ್ರಕರಣದ ಕುರಿತು ಅಂದಿನ ಕ್ರೈಂ ಬ್ರಾಂಚ್ ಎಸ್ಪಿ ಆಗಿದ್ದ ಡಾ.ಶ್ರೀನಿವಾಸ್ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಶೀಘ್ರವೇ ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಕುರಿತು ನ್ಯಾಯಾಲಯಕ್ಕೆ ನೂರಕ್ಕೂ ಅಧಿಕ ಸಾಕ್ಷಿಗಳನ್ನು ಸಲ್ಲಿಸಲಾಗಿತ್ತು. ಡಿಎನ್ಎ, ವೈಜ್ಞಾನಿಕ ದಾಖಲೆಗಳನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ಕೋವಿಡ್ ಹಾಗೂ ಇನ್ನಿತರ ಕಾರಣಗಳಿಂದ ವಿಚಾರಣೆ ಹಾಗೂ ತೀರ್ಪು ವಿಳಂಬವಾಗಿತ್ತು.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ಶುಕ್ಕೂರ್ ಈ ಕುರಿತು ಮಾತನಾಡಿದ್ದು,  ಪ್ರಕರಣದಲ್ಲಿ ಬಲವಾದ ಸಾಕ್ಷ್ಯಾಧಾರಗಳಿವೆ. ಆರೋಪಿಗಳಲ್ಲಿ ಒಬ್ಬನ ಬಟ್ಟೆಯಲ್ಲಿ ಮೌಲವಿ ಅವರ ರಕ್ತದ ಕಲೆ ಪತ್ತೆಯಾಗಿದೆ. ಆರೋಪಿಗಳು ಬಳಸಿದ್ದ ಚಾಕುವಿನಲ್ಲಿಯೂ ಮೌಲವಿಯ ಬಟ್ಟೆಯ ತುಂಡು ಪತ್ತೆಯಾಗಿದೆ. ನಾವು ಎಲ್ಲಾ ಸಾಕ್ಷ್ಯಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ತೀರ್ಪಿನ ಬೆನ್ನಲ್ಲಿ ರಿಯಾಝ್ ಮೌಲವಿ ಅವರ ಪತ್ನಿ ಸೈದಾ ಅವರು ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇತ್ತು. ಆರೋಪಿಗಳಿಗೆ ಕಠಿಣ ಶಿಕ್ಷೆ ಲಭಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ ಜಸ್ಟಿಸ್‌ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...