Homeಕರ್ನಾಟಕಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

- Advertisement -
- Advertisement -

ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ದಾಖಲಿಸಿದ್ದ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ, ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿದೆ.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ಆರೋಪಿಸಲಾಗಿದೆ. ಕೇರಳದ ನ್ಯಾಯಾಲಯ ನೀಡಿದ ತಡೆಯಾಜ್ಞೆ ಬಗ್ಗೆ ಇನ್ಸ್‌ಟ್ರಾಗ್ರಾಂ‌‌ನಲ್ಲಿ ಹಂಚಿಕೊಂಡಿದ್ದು,“ಎಲ್ಲರ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೋಝಿಕ್ಕೋ‌ಡ್‌ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ನುಡಿಸದಂತೆ ತಡೆಯಾಜ್ಞೆ ನೀಡಿದ್ದಾರೆ ಎಂದು ಇನ್ಸ್‌ಗ್ರಾಮ್‌ ಪೋಸ್ಟ್‌ನಲ್ಲಿ ಥೈಕ್ಕುಡಂ ಬ್ರಿಡ್ಜ್‌‌ ಬರೆದಿದೆ.

 

View this post on Instagram

 

A post shared by Thaikkudam Bridge (@thaikkudambridge)

ಇದನ್ನ ಓದಿ: ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಪರವಾಗಿ ಭಾರತದ ಸುಪ್ರೀಂ ಕೋರ್ಟ್ ವಕೀಲರಾದ ಸತೀಶ್ ಮೂರ್ತಿ ಅವರು ತಡೆಯಾಜ್ಞೆಗಾಗಿ ಮೊಕದ್ದಮೆ ಹೂಡಿದ್ದಾರೆ ಎಂದು ಇನ್ಸ್‌ಟ್ರಾಗ್ರಾಂ ಪೋಸ್ಟ್ ಹೇಳಿದೆ. ಇನ್ನು ಮುಂದಕ್ಕೆ ವರಾಹ ರೂಪಂ ಹಾಡನ್ನು ಪ್ಲೇ ಮಾಡಬೇಕಾದರೆ ಕಾಂತಾರ ಚಿತ್ರ ತಂಡವೂ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ‘ಥೈಕ್ಕುಡಂ ಬ್ರಿಡ್ಜ್’ ಈ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿತ್ತು. ಈ ಬಗ್ಗೆ ಬರೆದುಕೊಂಡಿದ್ದ ಅದು,“‘ಥೈಕ್ಕುಡಂ ಬ್ರಿಡ್ಜ್’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ತಿಳಿಸಿತ್ತು.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ. ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ಥೈಕ್ಕುಡಂ ಬ್ರಿಡ್ಜ್ ತಿಳಿಸಿತ್ತು.

ಇದನ್ನ ಓದಿ: Film Review| ಜನ ಗಣ ಮನ: ಸಮೂಹ ಸನ್ನಿಗೊಂದು ಮದ್ದು

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಹಲವಾರು ಪ್ರೇಕ್ಷಕರು ಈ ಹಿಂದೆಯೆ ಮಾಡಿದ್ದರು. ಅಲ್ಲದೆ ಚಿತ್ರದ ‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ಇದನ್ನ ಓದಿ: ಕಾಂತಾರ ಮತ್ತು ಭಾರತದ ಪ್ರಜೆಗಳಾದ ನಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...