Homeಕರ್ನಾಟಕಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

- Advertisement -
- Advertisement -

ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ದಾಖಲಿಸಿದ್ದ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ, ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿದೆ.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ಆರೋಪಿಸಲಾಗಿದೆ. ಕೇರಳದ ನ್ಯಾಯಾಲಯ ನೀಡಿದ ತಡೆಯಾಜ್ಞೆ ಬಗ್ಗೆ ಇನ್ಸ್‌ಟ್ರಾಗ್ರಾಂ‌‌ನಲ್ಲಿ ಹಂಚಿಕೊಂಡಿದ್ದು,“ಎಲ್ಲರ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೋಝಿಕ್ಕೋ‌ಡ್‌ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ನುಡಿಸದಂತೆ ತಡೆಯಾಜ್ಞೆ ನೀಡಿದ್ದಾರೆ ಎಂದು ಇನ್ಸ್‌ಗ್ರಾಮ್‌ ಪೋಸ್ಟ್‌ನಲ್ಲಿ ಥೈಕ್ಕುಡಂ ಬ್ರಿಡ್ಜ್‌‌ ಬರೆದಿದೆ.

 

View this post on Instagram

 

A post shared by Thaikkudam Bridge (@thaikkudambridge)

ಇದನ್ನ ಓದಿ: ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಪರವಾಗಿ ಭಾರತದ ಸುಪ್ರೀಂ ಕೋರ್ಟ್ ವಕೀಲರಾದ ಸತೀಶ್ ಮೂರ್ತಿ ಅವರು ತಡೆಯಾಜ್ಞೆಗಾಗಿ ಮೊಕದ್ದಮೆ ಹೂಡಿದ್ದಾರೆ ಎಂದು ಇನ್ಸ್‌ಟ್ರಾಗ್ರಾಂ ಪೋಸ್ಟ್ ಹೇಳಿದೆ. ಇನ್ನು ಮುಂದಕ್ಕೆ ವರಾಹ ರೂಪಂ ಹಾಡನ್ನು ಪ್ಲೇ ಮಾಡಬೇಕಾದರೆ ಕಾಂತಾರ ಚಿತ್ರ ತಂಡವೂ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ‘ಥೈಕ್ಕುಡಂ ಬ್ರಿಡ್ಜ್’ ಈ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿತ್ತು. ಈ ಬಗ್ಗೆ ಬರೆದುಕೊಂಡಿದ್ದ ಅದು,“‘ಥೈಕ್ಕುಡಂ ಬ್ರಿಡ್ಜ್’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ತಿಳಿಸಿತ್ತು.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ. ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ಥೈಕ್ಕುಡಂ ಬ್ರಿಡ್ಜ್ ತಿಳಿಸಿತ್ತು.

ಇದನ್ನ ಓದಿ: Film Review| ಜನ ಗಣ ಮನ: ಸಮೂಹ ಸನ್ನಿಗೊಂದು ಮದ್ದು

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಹಲವಾರು ಪ್ರೇಕ್ಷಕರು ಈ ಹಿಂದೆಯೆ ಮಾಡಿದ್ದರು. ಅಲ್ಲದೆ ಚಿತ್ರದ ‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ಇದನ್ನ ಓದಿ: ಕಾಂತಾರ ಮತ್ತು ಭಾರತದ ಪ್ರಜೆಗಳಾದ ನಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...