Homeಮುಖಪುಟಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

ಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

- Advertisement -
- Advertisement -

ಕೇರಳದ ಮುನ್ಸಿಪಲ್ ಕಾರ್ಪೋರೇಶನ್ ಒಂದರ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಒಬ್ಬರ ಅಪಹರಣ, ಆಸ್ಪತ್ರೆಗೆ ದಾಖಲು, ಪಕ್ಷಾಂತರ ಆಫರ್ ಹೀಗೆ ದೊಡ್ಡ ಹೈಡ್ರಾಮಕ್ಕೆ ಕಾರಣವಾಗಿದೆ.

ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂ ಮುನ್ಸಿಪಲ್ ಕಾರ್ಪೋರೇಶನ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತವಿದೆ. 13 ಮಂದಿ ಸದಸ್ಯರನ್ನು ಎಲ್‌ಡಿಎಫ್‌ ಹೊಂದಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇದ್ದು, 11 ಸದಸ್ಯರನ್ನು ಹೊಂದಿದೆ.

ಕೂತಟ್ಟುಕುಲಂ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಐಸೋಲೇಶನ್ ವಾರ್ಡ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಯಡಿಎಫ್‌, ಮುನ್ಸಿಪಲ್ ಕೌನ್ಸಿಲ್ ಆಡಳಿತದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಶನಿವಾರ (ಜ.18) ಅಣಿಯಾಗಿತ್ತು. ಆದರೆ, ಆಡಳಿತರೂಢ ಎಲ್‌ಡಿಎಫ್‌ ಮುನ್ಸಿಪಲ್ ಸಭೆಯನ್ನೇ ಬಹಿಷ್ಕರಿಸಿತ್ತು.

ಎಲ್‌ಡಿಎಫ್‌ ಆಡಳಿತದ ಕುರಿತು ಅಸಮಾಧಾನ ಹೊಂದಿದ್ದ ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಕಲಾ ರಾಜು ಎಂಬವರು ಪಕ್ಷ ತೊರೆದು ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದರು. ತಮ್ಮದೇ ಪಕ್ಷದ ವಿರುದ್ದ ಅವರು ಹೇಳಿಕೆಗಳನ್ನು ನೀಡುತ್ತಿದ್ದರು. ಅವಿಶ್ವಾಸ ನಿರ್ಣಯ ಮಂಡನೆಯ ಹಿನ್ನೆಲೆ ಶನಿವಾರ (ಜ.19) ಎಲ್‌ಡಿಎಫ್‌ ಕೌನ್ಸಿಲ್ ಸಭೆ ಬಹಿಷ್ಕರಿಸಿದ್ದರೂ, ಕಲಾ ರಾಜು ಮುನ್ಸಿಪಲ್ ಕಚೇರಿ ಬಳಿಗೆ ಬಂದಿದ್ದರು. ಈ ವೇಳೆ ಅವರನ್ನು ಅಪಹರಿಸಿ ಇಡೀ ದಿನ ಸಿಪಿಐ(ಎಂ) ಕಚೇರಿಯಲ್ಲಿ ಕೂಡಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಕಲಾ ರಾಜು ಅವರು, “ಮುನ್ಸಿಪಲ್ ಕಚೇರಿ ಬಳಿಗೆ ಬಂದಾಗ ಎಲ್ಲರೆದುರು ನನ್ನ ಬಟ್ಟೆಯನ್ನು ಎಳೆದಾಡಿ, ಬಲವಂತವಾಗಿ ಸಿಪಿಐ(ಎಂ) ಪ್ರಾದೇಶಿಕ ಕಚೇರಿಗೆ ಕರೆದೊಯ್ದರು. ಅವಿಶ್ವಾಸ ನಿರ್ಣಯವನ್ನು ಬೆಂಬಲಿಸದಂತೆ ಒತ್ತಡ ಹೇರಿದರು. ಪಕ್ಷಕ್ಕೆ ದ್ರೋಹ ಬಗೆದು ನೀನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಸಿಪಿಐ(ಎಂ) ಪಕ್ಷದ ಎಲ್ಲಾ ಪುರುಷರು ಅಲ್ಲಿದ್ದರು” ಎಂದು ಆರೋಪಿಸಿದ್ದಾರೆ.

“ನಾನು ಹಲವು ಗಂಟೆಗಳ ಕಾಲ ಸಿಪಿಐ(ಎಂ) ಕಚೇರಿಯಲ್ಲೇ ಇದ್ದೆ. ನಂತರ ಸಂಜೆ 4:30ಕ್ಕೆ ಮನೆಗೆ ಬಿಟ್ಟರು. ಅವರು ನನ್ನೊಂದಿಗೆ ಮಾತನಾಡಿದ ರೀತಿ ಮತ್ತು ಎಲ್ಲರ ಮುಂದೆ ನನ್ನ ಬಟ್ಟೆಗಳನ್ನು ಹಿಡಿದು ಎಳೆದು ಅವಮಾನಿಸಿದ ರೀತಿ ನನಗೆ ಹೆಚ್ಚು ನೋವುಂಟು ಮಾಡಿದೆ” ಎಂದು ಕಲಾ ರಾಜು ಹೇಳಿದ್ದಾರೆ.

ಆಪಾದಿತ ಅಪಹರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಲಾ ಅವರ ಕುಟುಂಬವು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೂತಟ್ಟುಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಲಾ ಅವರು ಪ್ರಸ್ತುತ ಕೊಚ್ಚಿಯ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಂಗ್ರೆಸ್‌ ಸೇರುವಂತೆ ಆಫರ್

ಮುನ್ಸಿಪಲ್ ಕೌನ್ಸಿಲ್ ಹೈಡ್ರಾಮದ ಬಳಿಕ ತಮ್ಮ ಪಕ್ಷಕ್ಕೆ ಸೇರುವಂತೆ ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಕಲಾ ರಾಜು ಅವರಿಗೆ ಆಫರ್ ಕೊಟ್ಟಿದೆ. ಕಲಾ ಅವರು ಕೂಡ ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದಾರೆ.

“ನನ್ನ ಜೀವನದ 25 ವರ್ಷಗಳನ್ನು ಸಿಪಿಎಂಗೆ ಅರ್ಪಿಸಿದ್ದೇನೆ. ನನ್ನ ಪತಿಯ ಮರಣದ ಆಘಾತದ ಹೊರತಾಗಿಯೂ, ನಾನು ಜನರು ಮತ್ತು ಪಕ್ಷ ಎರಡಕ್ಕೂ ಸೇವೆ ಸಲ್ಲಿಸಲು ಬದ್ಧಳಾಗಿದ್ದೆ. ಆದರೆ, ನಾನು ಅನುಭವಿಸಿದ ಅವಮಾನಕ್ಕೆ ಪಕ್ಷ ಬದಲಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಕಲಾ ಅವರು ಹೇಳಿದ್ದಾರೆ.

ಸಿಪಿಐ (ಎಂ) ಕಲಾ ಅವರನ್ನು ಏಕೆ ಗುರಿ ಮಾಡಿದೆ?

ಮಾಧ್ಯಮಗಳ ಜೊತೆ ಮಾತನಾಡಿರುವ ಕಲಾ ರಾಜು “ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಸನ್ನಿ ಕುರಿಯಕೋಸ್ ಅಧ್ಯಕ್ಷರಾಗಿದ್ದಾಗ, ಸಿಪಿಎಂ ನಿಯಂತ್ರಣದಲ್ಲಿರುವ ಸಹಕಾರಿ ಬ್ಯಾಂಕ್‌ನಿಂದ ನನ್ನ ಕುಟುಂಬ 10 ಲಕ್ಷ ರೂ. ಸಾಲ ಪಡೆದಿತ್ತು. ಕೂತ್ತಟ್ಟುಕುಲಂ ಪಟ್ಟಣದಲ್ಲಿರುವ ನಮ್ಮ ಭೂಮಿಯ ಒಂದು ಭಾಗವನ್ನು ಒತ್ತೆ ಇರಿಸಿ ಆ ಸಾಲವನ್ನು ಪಡೆಯಲಾಗಿತ್ತು.”

“ಕೋವಿಡ್‌ನಿಂದ ನನ್ನ ಪತಿ ನಿಧನರಾದರು. ಈ ನಡುವೆ ಸಾಲ ಮರು ಪಾವತಿಸದ ಕಾರಣ ಬ್ಯಾಂಕ್ ಮುಟ್ಟುಗೋಲು ನೋಟಿಸ್ ನೀಡಿತು. ರಿಯಾಯಿತಿ ನೀಡುವಂತೆ ಕೋರಿದ್ದ ನನ್ನ ಮನವಿಯನ್ನು ತಳ್ಳಿ ಹಾಕಿತ್ತು. ನಾನು ಪಕ್ಷದ ನಾಯಕರನ್ನು ಸಂಪರ್ಕಿಸಿ ನನ್ನ ಕಳವಳವನ್ನು ವ್ಯಕ್ತಪಡಿಸಿದೆ. ಸನ್ನಿ ಸೇರಿದಂತೆ ನಾಯಕರು ಮಧ್ಯಪ್ರವೇಶಿಸಿ, ಪಕ್ಷವು ನಮಗೆ ಸಹಾಯ ಮಾಡಲಿದೆ ಎಂದಿದ್ದರು”.

“ಅವರು ನಮ್ಮ ಭೂಮಿಯನ್ನು 22.5 ಲಕ್ಷ ರೂ.ಗೆ ಮಾರಾಟ ಮಾಡಿ, ಬಂದ ಹಣವನ್ನು ಬ್ಯಾಂಕ್ ಬಾಕಿ ಪಾವತಿಸಲು ಬಳಸಿಕೊಂಡರು”.

“ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಲು ನೀವು ಯುಡಿಎಫ್ ಜೊತೆ ಒಪ್ಪಂದ ಮಾಡಿಕೊಂಡಿದ್ದೀರಿ ಎಂದು ಸಿಪಿಎಂ ನಾಯಕರು ನನ್ನ ವಿರುದ್ದ ಆರೋಪ ಮಾಡಿದ್ದಾರೆ. ನನ್ನ ಮತ್ತು ಯುಡಿಎಫ್ ಕೌನ್ಸಿಲರ್‌ಗಳ ನಡುವೆ ಯಾವುದೇ ಒಪ್ಪಂದವಾಗಲಿ, ಮಾತಕತೆಯಾಗಲಿ ನಡೆದಿಲ್ಲ. ಸಿಪಿಎಂ ನೇತೃತ್ವದ ಆಡಳಿತ ಪಕ್ಷದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಲು ನಾನು ನಿರ್ಧರಿಸಿದ್ದೇನೆ. ಏಕೆಂದರೆ, ಪಕ್ಷವು ನನ್ನ ಮತ್ತು ನನ್ನ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ” ಎಂದು ಕಲಾ ಅವರು ವಿವರಿಸಿದ್ದಾರೆ.

ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...