Homeಮುಖಪುಟಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

ಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

- Advertisement -
- Advertisement -

ಕೇರಳದ ಮುನ್ಸಿಪಲ್ ಕಾರ್ಪೋರೇಶನ್ ಒಂದರ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಒಬ್ಬರ ಅಪಹರಣ, ಆಸ್ಪತ್ರೆಗೆ ದಾಖಲು, ಪಕ್ಷಾಂತರ ಆಫರ್ ಹೀಗೆ ದೊಡ್ಡ ಹೈಡ್ರಾಮಕ್ಕೆ ಕಾರಣವಾಗಿದೆ.

ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂ ಮುನ್ಸಿಪಲ್ ಕಾರ್ಪೋರೇಶನ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತವಿದೆ. 13 ಮಂದಿ ಸದಸ್ಯರನ್ನು ಎಲ್‌ಡಿಎಫ್‌ ಹೊಂದಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇದ್ದು, 11 ಸದಸ್ಯರನ್ನು ಹೊಂದಿದೆ.

ಕೂತಟ್ಟುಕುಲಂ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಐಸೋಲೇಶನ್ ವಾರ್ಡ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಯಡಿಎಫ್‌, ಮುನ್ಸಿಪಲ್ ಕೌನ್ಸಿಲ್ ಆಡಳಿತದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಶನಿವಾರ (ಜ.18) ಅಣಿಯಾಗಿತ್ತು. ಆದರೆ, ಆಡಳಿತರೂಢ ಎಲ್‌ಡಿಎಫ್‌ ಮುನ್ಸಿಪಲ್ ಸಭೆಯನ್ನೇ ಬಹಿಷ್ಕರಿಸಿತ್ತು.

ಎಲ್‌ಡಿಎಫ್‌ ಆಡಳಿತದ ಕುರಿತು ಅಸಮಾಧಾನ ಹೊಂದಿದ್ದ ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಕಲಾ ರಾಜು ಎಂಬವರು ಪಕ್ಷ ತೊರೆದು ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದರು. ತಮ್ಮದೇ ಪಕ್ಷದ ವಿರುದ್ದ ಅವರು ಹೇಳಿಕೆಗಳನ್ನು ನೀಡುತ್ತಿದ್ದರು. ಅವಿಶ್ವಾಸ ನಿರ್ಣಯ ಮಂಡನೆಯ ಹಿನ್ನೆಲೆ ಶನಿವಾರ (ಜ.19) ಎಲ್‌ಡಿಎಫ್‌ ಕೌನ್ಸಿಲ್ ಸಭೆ ಬಹಿಷ್ಕರಿಸಿದ್ದರೂ, ಕಲಾ ರಾಜು ಮುನ್ಸಿಪಲ್ ಕಚೇರಿ ಬಳಿಗೆ ಬಂದಿದ್ದರು. ಈ ವೇಳೆ ಅವರನ್ನು ಅಪಹರಿಸಿ ಇಡೀ ದಿನ ಸಿಪಿಐ(ಎಂ) ಕಚೇರಿಯಲ್ಲಿ ಕೂಡಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಕಲಾ ರಾಜು ಅವರು, “ಮುನ್ಸಿಪಲ್ ಕಚೇರಿ ಬಳಿಗೆ ಬಂದಾಗ ಎಲ್ಲರೆದುರು ನನ್ನ ಬಟ್ಟೆಯನ್ನು ಎಳೆದಾಡಿ, ಬಲವಂತವಾಗಿ ಸಿಪಿಐ(ಎಂ) ಪ್ರಾದೇಶಿಕ ಕಚೇರಿಗೆ ಕರೆದೊಯ್ದರು. ಅವಿಶ್ವಾಸ ನಿರ್ಣಯವನ್ನು ಬೆಂಬಲಿಸದಂತೆ ಒತ್ತಡ ಹೇರಿದರು. ಪಕ್ಷಕ್ಕೆ ದ್ರೋಹ ಬಗೆದು ನೀನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಸಿಪಿಐ(ಎಂ) ಪಕ್ಷದ ಎಲ್ಲಾ ಪುರುಷರು ಅಲ್ಲಿದ್ದರು” ಎಂದು ಆರೋಪಿಸಿದ್ದಾರೆ.

“ನಾನು ಹಲವು ಗಂಟೆಗಳ ಕಾಲ ಸಿಪಿಐ(ಎಂ) ಕಚೇರಿಯಲ್ಲೇ ಇದ್ದೆ. ನಂತರ ಸಂಜೆ 4:30ಕ್ಕೆ ಮನೆಗೆ ಬಿಟ್ಟರು. ಅವರು ನನ್ನೊಂದಿಗೆ ಮಾತನಾಡಿದ ರೀತಿ ಮತ್ತು ಎಲ್ಲರ ಮುಂದೆ ನನ್ನ ಬಟ್ಟೆಗಳನ್ನು ಹಿಡಿದು ಎಳೆದು ಅವಮಾನಿಸಿದ ರೀತಿ ನನಗೆ ಹೆಚ್ಚು ನೋವುಂಟು ಮಾಡಿದೆ” ಎಂದು ಕಲಾ ರಾಜು ಹೇಳಿದ್ದಾರೆ.

ಆಪಾದಿತ ಅಪಹರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಲಾ ಅವರ ಕುಟುಂಬವು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೂತಟ್ಟುಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಲಾ ಅವರು ಪ್ರಸ್ತುತ ಕೊಚ್ಚಿಯ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಂಗ್ರೆಸ್‌ ಸೇರುವಂತೆ ಆಫರ್

ಮುನ್ಸಿಪಲ್ ಕೌನ್ಸಿಲ್ ಹೈಡ್ರಾಮದ ಬಳಿಕ ತಮ್ಮ ಪಕ್ಷಕ್ಕೆ ಸೇರುವಂತೆ ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಕಲಾ ರಾಜು ಅವರಿಗೆ ಆಫರ್ ಕೊಟ್ಟಿದೆ. ಕಲಾ ಅವರು ಕೂಡ ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದಾರೆ.

“ನನ್ನ ಜೀವನದ 25 ವರ್ಷಗಳನ್ನು ಸಿಪಿಎಂಗೆ ಅರ್ಪಿಸಿದ್ದೇನೆ. ನನ್ನ ಪತಿಯ ಮರಣದ ಆಘಾತದ ಹೊರತಾಗಿಯೂ, ನಾನು ಜನರು ಮತ್ತು ಪಕ್ಷ ಎರಡಕ್ಕೂ ಸೇವೆ ಸಲ್ಲಿಸಲು ಬದ್ಧಳಾಗಿದ್ದೆ. ಆದರೆ, ನಾನು ಅನುಭವಿಸಿದ ಅವಮಾನಕ್ಕೆ ಪಕ್ಷ ಬದಲಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಕಲಾ ಅವರು ಹೇಳಿದ್ದಾರೆ.

ಸಿಪಿಐ (ಎಂ) ಕಲಾ ಅವರನ್ನು ಏಕೆ ಗುರಿ ಮಾಡಿದೆ?

ಮಾಧ್ಯಮಗಳ ಜೊತೆ ಮಾತನಾಡಿರುವ ಕಲಾ ರಾಜು “ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಸನ್ನಿ ಕುರಿಯಕೋಸ್ ಅಧ್ಯಕ್ಷರಾಗಿದ್ದಾಗ, ಸಿಪಿಎಂ ನಿಯಂತ್ರಣದಲ್ಲಿರುವ ಸಹಕಾರಿ ಬ್ಯಾಂಕ್‌ನಿಂದ ನನ್ನ ಕುಟುಂಬ 10 ಲಕ್ಷ ರೂ. ಸಾಲ ಪಡೆದಿತ್ತು. ಕೂತ್ತಟ್ಟುಕುಲಂ ಪಟ್ಟಣದಲ್ಲಿರುವ ನಮ್ಮ ಭೂಮಿಯ ಒಂದು ಭಾಗವನ್ನು ಒತ್ತೆ ಇರಿಸಿ ಆ ಸಾಲವನ್ನು ಪಡೆಯಲಾಗಿತ್ತು.”

“ಕೋವಿಡ್‌ನಿಂದ ನನ್ನ ಪತಿ ನಿಧನರಾದರು. ಈ ನಡುವೆ ಸಾಲ ಮರು ಪಾವತಿಸದ ಕಾರಣ ಬ್ಯಾಂಕ್ ಮುಟ್ಟುಗೋಲು ನೋಟಿಸ್ ನೀಡಿತು. ರಿಯಾಯಿತಿ ನೀಡುವಂತೆ ಕೋರಿದ್ದ ನನ್ನ ಮನವಿಯನ್ನು ತಳ್ಳಿ ಹಾಕಿತ್ತು. ನಾನು ಪಕ್ಷದ ನಾಯಕರನ್ನು ಸಂಪರ್ಕಿಸಿ ನನ್ನ ಕಳವಳವನ್ನು ವ್ಯಕ್ತಪಡಿಸಿದೆ. ಸನ್ನಿ ಸೇರಿದಂತೆ ನಾಯಕರು ಮಧ್ಯಪ್ರವೇಶಿಸಿ, ಪಕ್ಷವು ನಮಗೆ ಸಹಾಯ ಮಾಡಲಿದೆ ಎಂದಿದ್ದರು”.

“ಅವರು ನಮ್ಮ ಭೂಮಿಯನ್ನು 22.5 ಲಕ್ಷ ರೂ.ಗೆ ಮಾರಾಟ ಮಾಡಿ, ಬಂದ ಹಣವನ್ನು ಬ್ಯಾಂಕ್ ಬಾಕಿ ಪಾವತಿಸಲು ಬಳಸಿಕೊಂಡರು”.

“ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಲು ನೀವು ಯುಡಿಎಫ್ ಜೊತೆ ಒಪ್ಪಂದ ಮಾಡಿಕೊಂಡಿದ್ದೀರಿ ಎಂದು ಸಿಪಿಎಂ ನಾಯಕರು ನನ್ನ ವಿರುದ್ದ ಆರೋಪ ಮಾಡಿದ್ದಾರೆ. ನನ್ನ ಮತ್ತು ಯುಡಿಎಫ್ ಕೌನ್ಸಿಲರ್‌ಗಳ ನಡುವೆ ಯಾವುದೇ ಒಪ್ಪಂದವಾಗಲಿ, ಮಾತಕತೆಯಾಗಲಿ ನಡೆದಿಲ್ಲ. ಸಿಪಿಎಂ ನೇತೃತ್ವದ ಆಡಳಿತ ಪಕ್ಷದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಲು ನಾನು ನಿರ್ಧರಿಸಿದ್ದೇನೆ. ಏಕೆಂದರೆ, ಪಕ್ಷವು ನನ್ನ ಮತ್ತು ನನ್ನ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ” ಎಂದು ಕಲಾ ಅವರು ವಿವರಿಸಿದ್ದಾರೆ.

ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...