Homeಮುಖಪುಟಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

ಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

- Advertisement -
- Advertisement -

ಕೇರಳದ ಮುನ್ಸಿಪಲ್ ಕಾರ್ಪೋರೇಶನ್ ಒಂದರ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಒಬ್ಬರ ಅಪಹರಣ, ಆಸ್ಪತ್ರೆಗೆ ದಾಖಲು, ಪಕ್ಷಾಂತರ ಆಫರ್ ಹೀಗೆ ದೊಡ್ಡ ಹೈಡ್ರಾಮಕ್ಕೆ ಕಾರಣವಾಗಿದೆ.

ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂ ಮುನ್ಸಿಪಲ್ ಕಾರ್ಪೋರೇಶನ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತವಿದೆ. 13 ಮಂದಿ ಸದಸ್ಯರನ್ನು ಎಲ್‌ಡಿಎಫ್‌ ಹೊಂದಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇದ್ದು, 11 ಸದಸ್ಯರನ್ನು ಹೊಂದಿದೆ.

ಕೂತಟ್ಟುಕುಲಂ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಐಸೋಲೇಶನ್ ವಾರ್ಡ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಯಡಿಎಫ್‌, ಮುನ್ಸಿಪಲ್ ಕೌನ್ಸಿಲ್ ಆಡಳಿತದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಶನಿವಾರ (ಜ.18) ಅಣಿಯಾಗಿತ್ತು. ಆದರೆ, ಆಡಳಿತರೂಢ ಎಲ್‌ಡಿಎಫ್‌ ಮುನ್ಸಿಪಲ್ ಸಭೆಯನ್ನೇ ಬಹಿಷ್ಕರಿಸಿತ್ತು.

ಎಲ್‌ಡಿಎಫ್‌ ಆಡಳಿತದ ಕುರಿತು ಅಸಮಾಧಾನ ಹೊಂದಿದ್ದ ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಕಲಾ ರಾಜು ಎಂಬವರು ಪಕ್ಷ ತೊರೆದು ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದರು. ತಮ್ಮದೇ ಪಕ್ಷದ ವಿರುದ್ದ ಅವರು ಹೇಳಿಕೆಗಳನ್ನು ನೀಡುತ್ತಿದ್ದರು. ಅವಿಶ್ವಾಸ ನಿರ್ಣಯ ಮಂಡನೆಯ ಹಿನ್ನೆಲೆ ಶನಿವಾರ (ಜ.19) ಎಲ್‌ಡಿಎಫ್‌ ಕೌನ್ಸಿಲ್ ಸಭೆ ಬಹಿಷ್ಕರಿಸಿದ್ದರೂ, ಕಲಾ ರಾಜು ಮುನ್ಸಿಪಲ್ ಕಚೇರಿ ಬಳಿಗೆ ಬಂದಿದ್ದರು. ಈ ವೇಳೆ ಅವರನ್ನು ಅಪಹರಿಸಿ ಇಡೀ ದಿನ ಸಿಪಿಐ(ಎಂ) ಕಚೇರಿಯಲ್ಲಿ ಕೂಡಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಕಲಾ ರಾಜು ಅವರು, “ಮುನ್ಸಿಪಲ್ ಕಚೇರಿ ಬಳಿಗೆ ಬಂದಾಗ ಎಲ್ಲರೆದುರು ನನ್ನ ಬಟ್ಟೆಯನ್ನು ಎಳೆದಾಡಿ, ಬಲವಂತವಾಗಿ ಸಿಪಿಐ(ಎಂ) ಪ್ರಾದೇಶಿಕ ಕಚೇರಿಗೆ ಕರೆದೊಯ್ದರು. ಅವಿಶ್ವಾಸ ನಿರ್ಣಯವನ್ನು ಬೆಂಬಲಿಸದಂತೆ ಒತ್ತಡ ಹೇರಿದರು. ಪಕ್ಷಕ್ಕೆ ದ್ರೋಹ ಬಗೆದು ನೀನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಸಿಪಿಐ(ಎಂ) ಪಕ್ಷದ ಎಲ್ಲಾ ಪುರುಷರು ಅಲ್ಲಿದ್ದರು” ಎಂದು ಆರೋಪಿಸಿದ್ದಾರೆ.

“ನಾನು ಹಲವು ಗಂಟೆಗಳ ಕಾಲ ಸಿಪಿಐ(ಎಂ) ಕಚೇರಿಯಲ್ಲೇ ಇದ್ದೆ. ನಂತರ ಸಂಜೆ 4:30ಕ್ಕೆ ಮನೆಗೆ ಬಿಟ್ಟರು. ಅವರು ನನ್ನೊಂದಿಗೆ ಮಾತನಾಡಿದ ರೀತಿ ಮತ್ತು ಎಲ್ಲರ ಮುಂದೆ ನನ್ನ ಬಟ್ಟೆಗಳನ್ನು ಹಿಡಿದು ಎಳೆದು ಅವಮಾನಿಸಿದ ರೀತಿ ನನಗೆ ಹೆಚ್ಚು ನೋವುಂಟು ಮಾಡಿದೆ” ಎಂದು ಕಲಾ ರಾಜು ಹೇಳಿದ್ದಾರೆ.

ಆಪಾದಿತ ಅಪಹರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಲಾ ಅವರ ಕುಟುಂಬವು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೂತಟ್ಟುಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಲಾ ಅವರು ಪ್ರಸ್ತುತ ಕೊಚ್ಚಿಯ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಂಗ್ರೆಸ್‌ ಸೇರುವಂತೆ ಆಫರ್

ಮುನ್ಸಿಪಲ್ ಕೌನ್ಸಿಲ್ ಹೈಡ್ರಾಮದ ಬಳಿಕ ತಮ್ಮ ಪಕ್ಷಕ್ಕೆ ಸೇರುವಂತೆ ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಕಲಾ ರಾಜು ಅವರಿಗೆ ಆಫರ್ ಕೊಟ್ಟಿದೆ. ಕಲಾ ಅವರು ಕೂಡ ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದಾರೆ.

“ನನ್ನ ಜೀವನದ 25 ವರ್ಷಗಳನ್ನು ಸಿಪಿಎಂಗೆ ಅರ್ಪಿಸಿದ್ದೇನೆ. ನನ್ನ ಪತಿಯ ಮರಣದ ಆಘಾತದ ಹೊರತಾಗಿಯೂ, ನಾನು ಜನರು ಮತ್ತು ಪಕ್ಷ ಎರಡಕ್ಕೂ ಸೇವೆ ಸಲ್ಲಿಸಲು ಬದ್ಧಳಾಗಿದ್ದೆ. ಆದರೆ, ನಾನು ಅನುಭವಿಸಿದ ಅವಮಾನಕ್ಕೆ ಪಕ್ಷ ಬದಲಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಕಲಾ ಅವರು ಹೇಳಿದ್ದಾರೆ.

ಸಿಪಿಐ (ಎಂ) ಕಲಾ ಅವರನ್ನು ಏಕೆ ಗುರಿ ಮಾಡಿದೆ?

ಮಾಧ್ಯಮಗಳ ಜೊತೆ ಮಾತನಾಡಿರುವ ಕಲಾ ರಾಜು “ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಸನ್ನಿ ಕುರಿಯಕೋಸ್ ಅಧ್ಯಕ್ಷರಾಗಿದ್ದಾಗ, ಸಿಪಿಎಂ ನಿಯಂತ್ರಣದಲ್ಲಿರುವ ಸಹಕಾರಿ ಬ್ಯಾಂಕ್‌ನಿಂದ ನನ್ನ ಕುಟುಂಬ 10 ಲಕ್ಷ ರೂ. ಸಾಲ ಪಡೆದಿತ್ತು. ಕೂತ್ತಟ್ಟುಕುಲಂ ಪಟ್ಟಣದಲ್ಲಿರುವ ನಮ್ಮ ಭೂಮಿಯ ಒಂದು ಭಾಗವನ್ನು ಒತ್ತೆ ಇರಿಸಿ ಆ ಸಾಲವನ್ನು ಪಡೆಯಲಾಗಿತ್ತು.”

“ಕೋವಿಡ್‌ನಿಂದ ನನ್ನ ಪತಿ ನಿಧನರಾದರು. ಈ ನಡುವೆ ಸಾಲ ಮರು ಪಾವತಿಸದ ಕಾರಣ ಬ್ಯಾಂಕ್ ಮುಟ್ಟುಗೋಲು ನೋಟಿಸ್ ನೀಡಿತು. ರಿಯಾಯಿತಿ ನೀಡುವಂತೆ ಕೋರಿದ್ದ ನನ್ನ ಮನವಿಯನ್ನು ತಳ್ಳಿ ಹಾಕಿತ್ತು. ನಾನು ಪಕ್ಷದ ನಾಯಕರನ್ನು ಸಂಪರ್ಕಿಸಿ ನನ್ನ ಕಳವಳವನ್ನು ವ್ಯಕ್ತಪಡಿಸಿದೆ. ಸನ್ನಿ ಸೇರಿದಂತೆ ನಾಯಕರು ಮಧ್ಯಪ್ರವೇಶಿಸಿ, ಪಕ್ಷವು ನಮಗೆ ಸಹಾಯ ಮಾಡಲಿದೆ ಎಂದಿದ್ದರು”.

“ಅವರು ನಮ್ಮ ಭೂಮಿಯನ್ನು 22.5 ಲಕ್ಷ ರೂ.ಗೆ ಮಾರಾಟ ಮಾಡಿ, ಬಂದ ಹಣವನ್ನು ಬ್ಯಾಂಕ್ ಬಾಕಿ ಪಾವತಿಸಲು ಬಳಸಿಕೊಂಡರು”.

“ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಲು ನೀವು ಯುಡಿಎಫ್ ಜೊತೆ ಒಪ್ಪಂದ ಮಾಡಿಕೊಂಡಿದ್ದೀರಿ ಎಂದು ಸಿಪಿಎಂ ನಾಯಕರು ನನ್ನ ವಿರುದ್ದ ಆರೋಪ ಮಾಡಿದ್ದಾರೆ. ನನ್ನ ಮತ್ತು ಯುಡಿಎಫ್ ಕೌನ್ಸಿಲರ್‌ಗಳ ನಡುವೆ ಯಾವುದೇ ಒಪ್ಪಂದವಾಗಲಿ, ಮಾತಕತೆಯಾಗಲಿ ನಡೆದಿಲ್ಲ. ಸಿಪಿಎಂ ನೇತೃತ್ವದ ಆಡಳಿತ ಪಕ್ಷದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಲು ನಾನು ನಿರ್ಧರಿಸಿದ್ದೇನೆ. ಏಕೆಂದರೆ, ಪಕ್ಷವು ನನ್ನ ಮತ್ತು ನನ್ನ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ” ಎಂದು ಕಲಾ ಅವರು ವಿವರಿಸಿದ್ದಾರೆ.

ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...