Homeಮುಖಪುಟಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

ಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

- Advertisement -
- Advertisement -

ಕೇರಳದ ಮುನ್ಸಿಪಲ್ ಕಾರ್ಪೋರೇಶನ್ ಒಂದರ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಒಬ್ಬರ ಅಪಹರಣ, ಆಸ್ಪತ್ರೆಗೆ ದಾಖಲು, ಪಕ್ಷಾಂತರ ಆಫರ್ ಹೀಗೆ ದೊಡ್ಡ ಹೈಡ್ರಾಮಕ್ಕೆ ಕಾರಣವಾಗಿದೆ.

ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂ ಮುನ್ಸಿಪಲ್ ಕಾರ್ಪೋರೇಶನ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತವಿದೆ. 13 ಮಂದಿ ಸದಸ್ಯರನ್ನು ಎಲ್‌ಡಿಎಫ್‌ ಹೊಂದಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇದ್ದು, 11 ಸದಸ್ಯರನ್ನು ಹೊಂದಿದೆ.

ಕೂತಟ್ಟುಕುಲಂ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಐಸೋಲೇಶನ್ ವಾರ್ಡ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಯಡಿಎಫ್‌, ಮುನ್ಸಿಪಲ್ ಕೌನ್ಸಿಲ್ ಆಡಳಿತದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಶನಿವಾರ (ಜ.18) ಅಣಿಯಾಗಿತ್ತು. ಆದರೆ, ಆಡಳಿತರೂಢ ಎಲ್‌ಡಿಎಫ್‌ ಮುನ್ಸಿಪಲ್ ಸಭೆಯನ್ನೇ ಬಹಿಷ್ಕರಿಸಿತ್ತು.

ಎಲ್‌ಡಿಎಫ್‌ ಆಡಳಿತದ ಕುರಿತು ಅಸಮಾಧಾನ ಹೊಂದಿದ್ದ ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಕಲಾ ರಾಜು ಎಂಬವರು ಪಕ್ಷ ತೊರೆದು ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದರು. ತಮ್ಮದೇ ಪಕ್ಷದ ವಿರುದ್ದ ಅವರು ಹೇಳಿಕೆಗಳನ್ನು ನೀಡುತ್ತಿದ್ದರು. ಅವಿಶ್ವಾಸ ನಿರ್ಣಯ ಮಂಡನೆಯ ಹಿನ್ನೆಲೆ ಶನಿವಾರ (ಜ.19) ಎಲ್‌ಡಿಎಫ್‌ ಕೌನ್ಸಿಲ್ ಸಭೆ ಬಹಿಷ್ಕರಿಸಿದ್ದರೂ, ಕಲಾ ರಾಜು ಮುನ್ಸಿಪಲ್ ಕಚೇರಿ ಬಳಿಗೆ ಬಂದಿದ್ದರು. ಈ ವೇಳೆ ಅವರನ್ನು ಅಪಹರಿಸಿ ಇಡೀ ದಿನ ಸಿಪಿಐ(ಎಂ) ಕಚೇರಿಯಲ್ಲಿ ಕೂಡಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಕಲಾ ರಾಜು ಅವರು, “ಮುನ್ಸಿಪಲ್ ಕಚೇರಿ ಬಳಿಗೆ ಬಂದಾಗ ಎಲ್ಲರೆದುರು ನನ್ನ ಬಟ್ಟೆಯನ್ನು ಎಳೆದಾಡಿ, ಬಲವಂತವಾಗಿ ಸಿಪಿಐ(ಎಂ) ಪ್ರಾದೇಶಿಕ ಕಚೇರಿಗೆ ಕರೆದೊಯ್ದರು. ಅವಿಶ್ವಾಸ ನಿರ್ಣಯವನ್ನು ಬೆಂಬಲಿಸದಂತೆ ಒತ್ತಡ ಹೇರಿದರು. ಪಕ್ಷಕ್ಕೆ ದ್ರೋಹ ಬಗೆದು ನೀನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಸಿಪಿಐ(ಎಂ) ಪಕ್ಷದ ಎಲ್ಲಾ ಪುರುಷರು ಅಲ್ಲಿದ್ದರು” ಎಂದು ಆರೋಪಿಸಿದ್ದಾರೆ.

“ನಾನು ಹಲವು ಗಂಟೆಗಳ ಕಾಲ ಸಿಪಿಐ(ಎಂ) ಕಚೇರಿಯಲ್ಲೇ ಇದ್ದೆ. ನಂತರ ಸಂಜೆ 4:30ಕ್ಕೆ ಮನೆಗೆ ಬಿಟ್ಟರು. ಅವರು ನನ್ನೊಂದಿಗೆ ಮಾತನಾಡಿದ ರೀತಿ ಮತ್ತು ಎಲ್ಲರ ಮುಂದೆ ನನ್ನ ಬಟ್ಟೆಗಳನ್ನು ಹಿಡಿದು ಎಳೆದು ಅವಮಾನಿಸಿದ ರೀತಿ ನನಗೆ ಹೆಚ್ಚು ನೋವುಂಟು ಮಾಡಿದೆ” ಎಂದು ಕಲಾ ರಾಜು ಹೇಳಿದ್ದಾರೆ.

ಆಪಾದಿತ ಅಪಹರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಲಾ ಅವರ ಕುಟುಂಬವು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೂತಟ್ಟುಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಲಾ ಅವರು ಪ್ರಸ್ತುತ ಕೊಚ್ಚಿಯ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಂಗ್ರೆಸ್‌ ಸೇರುವಂತೆ ಆಫರ್

ಮುನ್ಸಿಪಲ್ ಕೌನ್ಸಿಲ್ ಹೈಡ್ರಾಮದ ಬಳಿಕ ತಮ್ಮ ಪಕ್ಷಕ್ಕೆ ಸೇರುವಂತೆ ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಕಲಾ ರಾಜು ಅವರಿಗೆ ಆಫರ್ ಕೊಟ್ಟಿದೆ. ಕಲಾ ಅವರು ಕೂಡ ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದಾರೆ.

“ನನ್ನ ಜೀವನದ 25 ವರ್ಷಗಳನ್ನು ಸಿಪಿಎಂಗೆ ಅರ್ಪಿಸಿದ್ದೇನೆ. ನನ್ನ ಪತಿಯ ಮರಣದ ಆಘಾತದ ಹೊರತಾಗಿಯೂ, ನಾನು ಜನರು ಮತ್ತು ಪಕ್ಷ ಎರಡಕ್ಕೂ ಸೇವೆ ಸಲ್ಲಿಸಲು ಬದ್ಧಳಾಗಿದ್ದೆ. ಆದರೆ, ನಾನು ಅನುಭವಿಸಿದ ಅವಮಾನಕ್ಕೆ ಪಕ್ಷ ಬದಲಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಕಲಾ ಅವರು ಹೇಳಿದ್ದಾರೆ.

ಸಿಪಿಐ (ಎಂ) ಕಲಾ ಅವರನ್ನು ಏಕೆ ಗುರಿ ಮಾಡಿದೆ?

ಮಾಧ್ಯಮಗಳ ಜೊತೆ ಮಾತನಾಡಿರುವ ಕಲಾ ರಾಜು “ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಸನ್ನಿ ಕುರಿಯಕೋಸ್ ಅಧ್ಯಕ್ಷರಾಗಿದ್ದಾಗ, ಸಿಪಿಎಂ ನಿಯಂತ್ರಣದಲ್ಲಿರುವ ಸಹಕಾರಿ ಬ್ಯಾಂಕ್‌ನಿಂದ ನನ್ನ ಕುಟುಂಬ 10 ಲಕ್ಷ ರೂ. ಸಾಲ ಪಡೆದಿತ್ತು. ಕೂತ್ತಟ್ಟುಕುಲಂ ಪಟ್ಟಣದಲ್ಲಿರುವ ನಮ್ಮ ಭೂಮಿಯ ಒಂದು ಭಾಗವನ್ನು ಒತ್ತೆ ಇರಿಸಿ ಆ ಸಾಲವನ್ನು ಪಡೆಯಲಾಗಿತ್ತು.”

“ಕೋವಿಡ್‌ನಿಂದ ನನ್ನ ಪತಿ ನಿಧನರಾದರು. ಈ ನಡುವೆ ಸಾಲ ಮರು ಪಾವತಿಸದ ಕಾರಣ ಬ್ಯಾಂಕ್ ಮುಟ್ಟುಗೋಲು ನೋಟಿಸ್ ನೀಡಿತು. ರಿಯಾಯಿತಿ ನೀಡುವಂತೆ ಕೋರಿದ್ದ ನನ್ನ ಮನವಿಯನ್ನು ತಳ್ಳಿ ಹಾಕಿತ್ತು. ನಾನು ಪಕ್ಷದ ನಾಯಕರನ್ನು ಸಂಪರ್ಕಿಸಿ ನನ್ನ ಕಳವಳವನ್ನು ವ್ಯಕ್ತಪಡಿಸಿದೆ. ಸನ್ನಿ ಸೇರಿದಂತೆ ನಾಯಕರು ಮಧ್ಯಪ್ರವೇಶಿಸಿ, ಪಕ್ಷವು ನಮಗೆ ಸಹಾಯ ಮಾಡಲಿದೆ ಎಂದಿದ್ದರು”.

“ಅವರು ನಮ್ಮ ಭೂಮಿಯನ್ನು 22.5 ಲಕ್ಷ ರೂ.ಗೆ ಮಾರಾಟ ಮಾಡಿ, ಬಂದ ಹಣವನ್ನು ಬ್ಯಾಂಕ್ ಬಾಕಿ ಪಾವತಿಸಲು ಬಳಸಿಕೊಂಡರು”.

“ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಲು ನೀವು ಯುಡಿಎಫ್ ಜೊತೆ ಒಪ್ಪಂದ ಮಾಡಿಕೊಂಡಿದ್ದೀರಿ ಎಂದು ಸಿಪಿಎಂ ನಾಯಕರು ನನ್ನ ವಿರುದ್ದ ಆರೋಪ ಮಾಡಿದ್ದಾರೆ. ನನ್ನ ಮತ್ತು ಯುಡಿಎಫ್ ಕೌನ್ಸಿಲರ್‌ಗಳ ನಡುವೆ ಯಾವುದೇ ಒಪ್ಪಂದವಾಗಲಿ, ಮಾತಕತೆಯಾಗಲಿ ನಡೆದಿಲ್ಲ. ಸಿಪಿಎಂ ನೇತೃತ್ವದ ಆಡಳಿತ ಪಕ್ಷದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಲು ನಾನು ನಿರ್ಧರಿಸಿದ್ದೇನೆ. ಏಕೆಂದರೆ, ಪಕ್ಷವು ನನ್ನ ಮತ್ತು ನನ್ನ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ” ಎಂದು ಕಲಾ ಅವರು ವಿವರಿಸಿದ್ದಾರೆ.

ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...