Homeಚಳವಳಿಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಪ್ರಾಧ್ಯಾಪಕರ ಜಾತಿ ತಾರತಮ್ಯದಿಂದಾಗಿ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೇರಳದ ದೀಪಾ ಕೆ ಮೋಹನನ್ ಎಂಬ ದಲಿತ ಸಂಶೋಧನಾ ವಿದ್ಯಾರ್ಥಿನಿ ಅಕ್ಟೋಬರ್ 29 ರಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಸಂಜೆ ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿನಿಯ ಹಕ್ಕೊತ್ತಾಯದಂತೆ ಜಾತಿ ತಾರತಮ್ಯವೆಸಗಿದ ಪ್ರಾಧ್ಯಾಪಕರನ್ನು ವಜಾಗೊಳಿಸುವುದಾಗಿ ವಿಶ್ವವಿದ್ಯಾಲಯ ತಿಳಿಸಿದ ನಂತರ ದೀಪಾ ತನ್ನ ಹೋರಾಟ ಅಂತ್ಯಗೊಳಿಸಿದ್ದು ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಂದ ಜಯ ಎಂದಿದ್ದಾರೆ.

ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಸಬು ಥಾಮಸ್‌ರವರು ಜಾತಿ ತಾರತಮ್ಯವೆಸಗಿದ ಡಾ. ನಂದಕುಮಾರ್ ಕಲರಿಕ್ಕಲ್ ರನ್ನು ವಿವಿಯಿಂದ ಕೈಬಿಡುವುದಾಗಿ ಘೋಷಿಸಿದ್ದಾರೆ. ಡಾ. ನಂದಕುಮಾರ್ ಕಲರಿಕ್ಕಲ್ ಅವರನ್ನು IIUCNN ನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂಬ ಪತ್ರಕ್ಕೆ ಸಹಿ ಕೂಡ ಮಾಡಿದ್ದಾರೆ.

ದೀಪಾರವರ ಪಿಎಚ್‌ಡಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ವಿವಿ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ಸ್ಥಗಿತಗೊಂಡಿರುವ ಅವರ ಫೆಲೋಶಿಪ್ ಅನ್ನು ಕೂಡಲೇ ಬಿಡುಗಡೆ ಮಾಡುತ್ತದೆ ಎಂದು ಉಪ ಕುಲಪತಿಗಳು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿವಿಯಲ್ಲಿ ನಡೆದ ಸಭೆಯಲ್ಲಿ ದೀಪಾ ಕೆ ಮೋಹನನ್ ರವರ ಮೂರು ಹಕ್ಕೊತ್ತಾಯಗಳು ಈಡೇರಿದ ಕಾರಣದಿಂದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುತ್ತಿದ್ದಾರೆ ಎಂದು ಭೀಮ್ ಆರ್ಮಿ ಕೇರಳ ಘಟಕ ತಿಳಿಸಿದೆ. ಆರಂಭದಿಂದಲೂ ವಿದ್ಯಾರ್ಥಿನಿಯ ಹೋರಾಟಕ್ಕೆ ಭೀಮ್ ಆರ್ಮಿ ಸಂಪೂರ್ಣ ಬೆಂಬಲ ಘೋಷಿಸಿತ್ತು.

ಹೋರಾಟದ ಹಿನ್ನೆಲೆ

ಇಂಟರ್ನ್ಯಾಷನಲ್ ಮತ್ತು ಇಂಟರ್ ಯೂನಿವರ್ಸಿಟಿ ಸೆಂಟರ್ ಫಾರ್ ನ್ಯಾನೊಸೈನ್ಸ್ ಮತ್ತು ನ್ಯಾನೊಟೆಕ್ನಾಲಜಿ (IIUCNN) ವಿಭಾಗದ ನಿರ್ದೇಶಕರಾದ ನಂದಕುಮಾರ್ ಕಲರಿಕಲ್ ಜಾತಿ ತಾರತಮ್ಯವೆಸಗಿ ತನ್ನ ಪಿಎಚ್‌ಡಿ ಪದವಿಗೆ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ದೀಪಾ ಕೆ ಮೋಹನನ್‌ರವರು ಅಕ್ಟೋಬರ್ 29 ರಿಂದ ವಿವಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರುವ ದೀಪಾ, ನಂತರ 2011 ರಲ್ಲಿ MG ಯುನಿವರ್ಸಿಟಿ (MGU) ಗೆ ಸೇರಿದರು. ಬಳಿಕ, ತಾವು ಯೂನಿವರ್ಸಿಟಿಗೆ ಸೇರಿದ ಮೊದಲ ವರ್ಷದಿಂದಲೂ ನಂದಕುಮಾರ್ ಕಲರಿಕಲ್ ಅವರು ದಲಿತೆ ಎಂಬ ಕಾರಣಕ್ಕೆ ತನ್ನ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ದೀಪಾ ಅವರು ಇನ್ಸ್ಟಿಟ್ಯೂಟ್‌ನಲ್ಲಿ ಸಂಶೋಧನೆ ಪ್ರಾರಂಭಿಸಿದಾಗ ಜಂಟಿ ನಿರ್ದೇಶಕರಾಗಿದ್ದ ಮತ್ತು ಈಗ IIUCNN ನಲ್ಲಿ ನಿರ್ದೇಶಕರಾಗಿರುವ ನಂದಕುಮಾರ್ ಆಕೆ ಲ್ಯಾಬ್‌ಗೆ ಪ್ರವೇಶಿಸುವುದನ್ನು, ಲ್ಯಾಬ್‌ನಲ್ಲಿ ಕೆಮಿಕಲ್‌ಗಳು ಮತ್ತು ಪಾಲಿಮರ್‌ಗಳನ್ನು ಬಳಸುವುದನ್ನು ನಿರಾಕರಿಸಿದ್ದರು. ಕೂರಲು ಕುರ್ಚಿ ಸಹ ನೀಡುತ್ತಿರಲಿಲ್ಲ ಮಾತ್ರವಲ್ಲದೆ ಅವರಿಗೆ ಬರುವ ಸ್ಟೈಫಂಡ್ ಅನ್ನು ಕೂಡ ತಡೆಹಿಡಿಯಲು ಮುಂದಾಗಿದ್ದರು ಎನ್ನಲಾಗಿದೆ.

ಒಮ್ಮೆ ತಾನು ಲ್ಯಾಬ್‌ನಲ್ಲಿ ಏಕಾಂಗಿಯಾಗಿದ್ದಾಗ, ತನ್ನನ್ನು ಕೂಡಿ ಹಾಕಿದ್ದರು. ತನ್ನ ಬ್ಯಾಚ್‌ನಲ್ಲಿರುವ ಏಕೈಕ ದಲಿತ ಸ್ಕಾಲರ್‌ ಆಗಿರುವ ತನ್ನೊಂದಿಗೆ ಅಸಭ್ಯವಾಗಿ ಮತ್ತು ನಿಂದನೀಯವಾಗಿ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪಿಎಚ್‌ಡಿ ಪಡೆಯದಂತೆ ತಡೆಯಲು ಎಲ್ಲಾ ರೀತಿಯಲ್ಲೂ ಯತ್ನಿಸುತ್ತಿದ್ದಾರೆ ಎಂದು ದೀಪಾ ಆರೋಪಿಸಿದ್ದರು.

ತನ್ನ ಸಂಶೋಧನಾ ಮಾರ್ಗದರ್ಶಿಯನ್ನು ಬದಲಾಯಿಸಬೇಕು, ಎಲ್ಲಾ ಇತರ ಪಿಎಚ್‌ಡಿ ವಿದ್ಯಾರ್ಥಿಗಳಂತೆ ತನಗೆ ಸಂಶೋಧನೆಯನ್ನು ಪೂರ್ಣಗೊಳಿಸಲು ಸಾಮಗ್ರಿಗಳನ್ನು ಒದಗಿಸಬೇಕು ಮತ್ತು ನನ್ನ ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ನಂದಕುಮಾರ್ ಕಲರಿಕಲ್ ಅವರನ್ನು ಸಂಸ್ಥೆಯಿಂದ ತೆಗೆದುಹಾಕಬೇಕು ಎಂಬ ಮೂರು ಹಕ್ಕೊತ್ತಾಯಗಳು ದೀಪಾರವರದ್ದಾಗಿದ್ದವು.

ನವೆಂಬರ್ 1 ರಂದು ವಿಶ್ವವಿದ್ಯಾನಿಲಯವು ದೀಪಾರೊಂದಿಗೆ ಸಭೆ ನಡೆಸಿ ಅವರ ಮೊದಲ ಎರಡು ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡದೆ. ಆದರೆ ತಾಂತ್ರಿಕ ಕಾರಣಗಳಿಂದ ನಂದಕುಮಾರ್ ಅವರನ್ನು IIUCNN ನಿಂದ ತೆಗೆದುಹಾಕಲು ನಿರಾಕರಿಸಿತ್ತು. ಪ್ರತಿಭಟನೆ ತೀವ್ರಗೊಂಡ ನಂತರ ಸೋಮವಾರ ಅವರ ಮೂರನೇ ಹಕ್ಕೊತ್ತಾಯವನ್ನು ವಿವಿ ಒಪ್ಪಿಕೊಂಡಿದೆ.

ದೀಪಾ ಅವರು 2015ರಲ್ಲಿ ನಂದಕುಮಾರ್ ವಿರುದ್ಧ ಜಾತಿ ತಾರತಮ್ಯದ ದೂರು ಸಲ್ಲಿಸಿದ್ದರು. ಆಗ ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಎನ್ ಜಯಕುಮಾರ್ ಮತ್ತು ಕೆಎಸ್ ಇಂದು ಅವರ ದ್ವಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ದೀಪಾ ಅವರ ಆರೋಪ ನಿಜವೆಂದು ವರದಿ ನೀಡಿತು. ಅಲ್ಲದೆ, ದೀಪಾ ಅವರ ಸಂಶೋಧನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿಶ್ವವಿದ್ಯಾಲಯವು ಒದಗಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಅದರ ನಂತರವೂ ಏನೂ ಬದಲಾಗಿಲ್ಲ. ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು. ನಂದಕುಮಾರ್ ಕೇರಳದ ಸಿಪಿಐ(ಎಂ)ನ ಉನ್ನತ ನಾಯಕರ ನಿಕಟವರ್ತಿಯಾಗಿರುವುದು ಇದಕ್ಕೆ ಕಾರಣ ಎಂದು ದೀಪಾ ಈ ಹಿಂದೆ ಆರೋಪಿಸಿದ್ದರು. ಇದಕ್ಕಾಗಿಯೇ, ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿದ್ಯಾರ್ಥಿ ಒಕ್ಕೂಟಗಳು ಸಹ ತನ್ನನ್ನು ಬೆಂಬಲಿಸಿಲ್ಲ ಎಂದು ದೀಪಾ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2016ರಲ್ಲಿ ನಂದಕುಮಾರ್ ವಿರುದ್ಧ ದೀಪಾ ಪೊಲೀಸ್ ದೂರು ದಾಖಲಿಸಿದ್ದರು. ತದನಂತರ, ಆತ ನನ್ನ ವಿರುದ್ಧ ಹೆಚ್ಚು ಸೇಡು ತೀರಿಸಿಕೊಂಡರು. ಅವರು ನನ್ನನ್ನು IIUCNN ನಿಂದ ವಜಾಗೊಳಿಸುವಂತೆ ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅಧ್ಯಯನ ಕೇಂದ್ರದಲ್ಲಿ ಎಲ್ಲವನ್ನೂ ನಿರ್ಧರಿಸುವವರು ಅವರೇ. ವಿಸಿ ಅವರನ್ನು ರಕ್ಷಿಸುತ್ತಿರುವುದರಿಂದ ನಾನು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದೇನೆ” ಎಂದು ದೀಪಾ ಹೇಳಿದ್ದಾರೆ.

ಭೀಮ್ ಆರ್ಮಿ ಕೇರಳ, ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಮತ್ತು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ​​ಸೇರಿದಂತೆ ಹಲವು ಸಂಘಟನೆಗಳು ದೀಪಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದವು.


ಇದನ್ನೂ ಓದಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...