Homeಚಳವಳಿಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಪ್ರಾಧ್ಯಾಪಕರ ಜಾತಿ ತಾರತಮ್ಯದಿಂದಾಗಿ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೇರಳದ ದೀಪಾ ಕೆ ಮೋಹನನ್ ಎಂಬ ದಲಿತ ಸಂಶೋಧನಾ ವಿದ್ಯಾರ್ಥಿನಿ ಅಕ್ಟೋಬರ್ 29 ರಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಸಂಜೆ ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿನಿಯ ಹಕ್ಕೊತ್ತಾಯದಂತೆ ಜಾತಿ ತಾರತಮ್ಯವೆಸಗಿದ ಪ್ರಾಧ್ಯಾಪಕರನ್ನು ವಜಾಗೊಳಿಸುವುದಾಗಿ ವಿಶ್ವವಿದ್ಯಾಲಯ ತಿಳಿಸಿದ ನಂತರ ದೀಪಾ ತನ್ನ ಹೋರಾಟ ಅಂತ್ಯಗೊಳಿಸಿದ್ದು ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಂದ ಜಯ ಎಂದಿದ್ದಾರೆ.

ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಸಬು ಥಾಮಸ್‌ರವರು ಜಾತಿ ತಾರತಮ್ಯವೆಸಗಿದ ಡಾ. ನಂದಕುಮಾರ್ ಕಲರಿಕ್ಕಲ್ ರನ್ನು ವಿವಿಯಿಂದ ಕೈಬಿಡುವುದಾಗಿ ಘೋಷಿಸಿದ್ದಾರೆ. ಡಾ. ನಂದಕುಮಾರ್ ಕಲರಿಕ್ಕಲ್ ಅವರನ್ನು IIUCNN ನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂಬ ಪತ್ರಕ್ಕೆ ಸಹಿ ಕೂಡ ಮಾಡಿದ್ದಾರೆ.

ದೀಪಾರವರ ಪಿಎಚ್‌ಡಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ವಿವಿ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ಸ್ಥಗಿತಗೊಂಡಿರುವ ಅವರ ಫೆಲೋಶಿಪ್ ಅನ್ನು ಕೂಡಲೇ ಬಿಡುಗಡೆ ಮಾಡುತ್ತದೆ ಎಂದು ಉಪ ಕುಲಪತಿಗಳು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿವಿಯಲ್ಲಿ ನಡೆದ ಸಭೆಯಲ್ಲಿ ದೀಪಾ ಕೆ ಮೋಹನನ್ ರವರ ಮೂರು ಹಕ್ಕೊತ್ತಾಯಗಳು ಈಡೇರಿದ ಕಾರಣದಿಂದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುತ್ತಿದ್ದಾರೆ ಎಂದು ಭೀಮ್ ಆರ್ಮಿ ಕೇರಳ ಘಟಕ ತಿಳಿಸಿದೆ. ಆರಂಭದಿಂದಲೂ ವಿದ್ಯಾರ್ಥಿನಿಯ ಹೋರಾಟಕ್ಕೆ ಭೀಮ್ ಆರ್ಮಿ ಸಂಪೂರ್ಣ ಬೆಂಬಲ ಘೋಷಿಸಿತ್ತು.

ಹೋರಾಟದ ಹಿನ್ನೆಲೆ

ಇಂಟರ್ನ್ಯಾಷನಲ್ ಮತ್ತು ಇಂಟರ್ ಯೂನಿವರ್ಸಿಟಿ ಸೆಂಟರ್ ಫಾರ್ ನ್ಯಾನೊಸೈನ್ಸ್ ಮತ್ತು ನ್ಯಾನೊಟೆಕ್ನಾಲಜಿ (IIUCNN) ವಿಭಾಗದ ನಿರ್ದೇಶಕರಾದ ನಂದಕುಮಾರ್ ಕಲರಿಕಲ್ ಜಾತಿ ತಾರತಮ್ಯವೆಸಗಿ ತನ್ನ ಪಿಎಚ್‌ಡಿ ಪದವಿಗೆ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ದೀಪಾ ಕೆ ಮೋಹನನ್‌ರವರು ಅಕ್ಟೋಬರ್ 29 ರಿಂದ ವಿವಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರುವ ದೀಪಾ, ನಂತರ 2011 ರಲ್ಲಿ MG ಯುನಿವರ್ಸಿಟಿ (MGU) ಗೆ ಸೇರಿದರು. ಬಳಿಕ, ತಾವು ಯೂನಿವರ್ಸಿಟಿಗೆ ಸೇರಿದ ಮೊದಲ ವರ್ಷದಿಂದಲೂ ನಂದಕುಮಾರ್ ಕಲರಿಕಲ್ ಅವರು ದಲಿತೆ ಎಂಬ ಕಾರಣಕ್ಕೆ ತನ್ನ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ದೀಪಾ ಅವರು ಇನ್ಸ್ಟಿಟ್ಯೂಟ್‌ನಲ್ಲಿ ಸಂಶೋಧನೆ ಪ್ರಾರಂಭಿಸಿದಾಗ ಜಂಟಿ ನಿರ್ದೇಶಕರಾಗಿದ್ದ ಮತ್ತು ಈಗ IIUCNN ನಲ್ಲಿ ನಿರ್ದೇಶಕರಾಗಿರುವ ನಂದಕುಮಾರ್ ಆಕೆ ಲ್ಯಾಬ್‌ಗೆ ಪ್ರವೇಶಿಸುವುದನ್ನು, ಲ್ಯಾಬ್‌ನಲ್ಲಿ ಕೆಮಿಕಲ್‌ಗಳು ಮತ್ತು ಪಾಲಿಮರ್‌ಗಳನ್ನು ಬಳಸುವುದನ್ನು ನಿರಾಕರಿಸಿದ್ದರು. ಕೂರಲು ಕುರ್ಚಿ ಸಹ ನೀಡುತ್ತಿರಲಿಲ್ಲ ಮಾತ್ರವಲ್ಲದೆ ಅವರಿಗೆ ಬರುವ ಸ್ಟೈಫಂಡ್ ಅನ್ನು ಕೂಡ ತಡೆಹಿಡಿಯಲು ಮುಂದಾಗಿದ್ದರು ಎನ್ನಲಾಗಿದೆ.

ಒಮ್ಮೆ ತಾನು ಲ್ಯಾಬ್‌ನಲ್ಲಿ ಏಕಾಂಗಿಯಾಗಿದ್ದಾಗ, ತನ್ನನ್ನು ಕೂಡಿ ಹಾಕಿದ್ದರು. ತನ್ನ ಬ್ಯಾಚ್‌ನಲ್ಲಿರುವ ಏಕೈಕ ದಲಿತ ಸ್ಕಾಲರ್‌ ಆಗಿರುವ ತನ್ನೊಂದಿಗೆ ಅಸಭ್ಯವಾಗಿ ಮತ್ತು ನಿಂದನೀಯವಾಗಿ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪಿಎಚ್‌ಡಿ ಪಡೆಯದಂತೆ ತಡೆಯಲು ಎಲ್ಲಾ ರೀತಿಯಲ್ಲೂ ಯತ್ನಿಸುತ್ತಿದ್ದಾರೆ ಎಂದು ದೀಪಾ ಆರೋಪಿಸಿದ್ದರು.

ತನ್ನ ಸಂಶೋಧನಾ ಮಾರ್ಗದರ್ಶಿಯನ್ನು ಬದಲಾಯಿಸಬೇಕು, ಎಲ್ಲಾ ಇತರ ಪಿಎಚ್‌ಡಿ ವಿದ್ಯಾರ್ಥಿಗಳಂತೆ ತನಗೆ ಸಂಶೋಧನೆಯನ್ನು ಪೂರ್ಣಗೊಳಿಸಲು ಸಾಮಗ್ರಿಗಳನ್ನು ಒದಗಿಸಬೇಕು ಮತ್ತು ನನ್ನ ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ನಂದಕುಮಾರ್ ಕಲರಿಕಲ್ ಅವರನ್ನು ಸಂಸ್ಥೆಯಿಂದ ತೆಗೆದುಹಾಕಬೇಕು ಎಂಬ ಮೂರು ಹಕ್ಕೊತ್ತಾಯಗಳು ದೀಪಾರವರದ್ದಾಗಿದ್ದವು.

ನವೆಂಬರ್ 1 ರಂದು ವಿಶ್ವವಿದ್ಯಾನಿಲಯವು ದೀಪಾರೊಂದಿಗೆ ಸಭೆ ನಡೆಸಿ ಅವರ ಮೊದಲ ಎರಡು ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡದೆ. ಆದರೆ ತಾಂತ್ರಿಕ ಕಾರಣಗಳಿಂದ ನಂದಕುಮಾರ್ ಅವರನ್ನು IIUCNN ನಿಂದ ತೆಗೆದುಹಾಕಲು ನಿರಾಕರಿಸಿತ್ತು. ಪ್ರತಿಭಟನೆ ತೀವ್ರಗೊಂಡ ನಂತರ ಸೋಮವಾರ ಅವರ ಮೂರನೇ ಹಕ್ಕೊತ್ತಾಯವನ್ನು ವಿವಿ ಒಪ್ಪಿಕೊಂಡಿದೆ.

ದೀಪಾ ಅವರು 2015ರಲ್ಲಿ ನಂದಕುಮಾರ್ ವಿರುದ್ಧ ಜಾತಿ ತಾರತಮ್ಯದ ದೂರು ಸಲ್ಲಿಸಿದ್ದರು. ಆಗ ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಎನ್ ಜಯಕುಮಾರ್ ಮತ್ತು ಕೆಎಸ್ ಇಂದು ಅವರ ದ್ವಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ದೀಪಾ ಅವರ ಆರೋಪ ನಿಜವೆಂದು ವರದಿ ನೀಡಿತು. ಅಲ್ಲದೆ, ದೀಪಾ ಅವರ ಸಂಶೋಧನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿಶ್ವವಿದ್ಯಾಲಯವು ಒದಗಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಅದರ ನಂತರವೂ ಏನೂ ಬದಲಾಗಿಲ್ಲ. ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು. ನಂದಕುಮಾರ್ ಕೇರಳದ ಸಿಪಿಐ(ಎಂ)ನ ಉನ್ನತ ನಾಯಕರ ನಿಕಟವರ್ತಿಯಾಗಿರುವುದು ಇದಕ್ಕೆ ಕಾರಣ ಎಂದು ದೀಪಾ ಈ ಹಿಂದೆ ಆರೋಪಿಸಿದ್ದರು. ಇದಕ್ಕಾಗಿಯೇ, ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿದ್ಯಾರ್ಥಿ ಒಕ್ಕೂಟಗಳು ಸಹ ತನ್ನನ್ನು ಬೆಂಬಲಿಸಿಲ್ಲ ಎಂದು ದೀಪಾ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2016ರಲ್ಲಿ ನಂದಕುಮಾರ್ ವಿರುದ್ಧ ದೀಪಾ ಪೊಲೀಸ್ ದೂರು ದಾಖಲಿಸಿದ್ದರು. ತದನಂತರ, ಆತ ನನ್ನ ವಿರುದ್ಧ ಹೆಚ್ಚು ಸೇಡು ತೀರಿಸಿಕೊಂಡರು. ಅವರು ನನ್ನನ್ನು IIUCNN ನಿಂದ ವಜಾಗೊಳಿಸುವಂತೆ ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅಧ್ಯಯನ ಕೇಂದ್ರದಲ್ಲಿ ಎಲ್ಲವನ್ನೂ ನಿರ್ಧರಿಸುವವರು ಅವರೇ. ವಿಸಿ ಅವರನ್ನು ರಕ್ಷಿಸುತ್ತಿರುವುದರಿಂದ ನಾನು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದೇನೆ” ಎಂದು ದೀಪಾ ಹೇಳಿದ್ದಾರೆ.

ಭೀಮ್ ಆರ್ಮಿ ಕೇರಳ, ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಮತ್ತು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ​​ಸೇರಿದಂತೆ ಹಲವು ಸಂಘಟನೆಗಳು ದೀಪಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದವು.


ಇದನ್ನೂ ಓದಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...