Homeಚಳವಳಿಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಪ್ರಾಧ್ಯಾಪಕರ ಜಾತಿ ತಾರತಮ್ಯದಿಂದಾಗಿ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೇರಳದ ದೀಪಾ ಕೆ ಮೋಹನನ್ ಎಂಬ ದಲಿತ ಸಂಶೋಧನಾ ವಿದ್ಯಾರ್ಥಿನಿ ಅಕ್ಟೋಬರ್ 29 ರಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಸಂಜೆ ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿನಿಯ ಹಕ್ಕೊತ್ತಾಯದಂತೆ ಜಾತಿ ತಾರತಮ್ಯವೆಸಗಿದ ಪ್ರಾಧ್ಯಾಪಕರನ್ನು ವಜಾಗೊಳಿಸುವುದಾಗಿ ವಿಶ್ವವಿದ್ಯಾಲಯ ತಿಳಿಸಿದ ನಂತರ ದೀಪಾ ತನ್ನ ಹೋರಾಟ ಅಂತ್ಯಗೊಳಿಸಿದ್ದು ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಂದ ಜಯ ಎಂದಿದ್ದಾರೆ.

ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಸಬು ಥಾಮಸ್‌ರವರು ಜಾತಿ ತಾರತಮ್ಯವೆಸಗಿದ ಡಾ. ನಂದಕುಮಾರ್ ಕಲರಿಕ್ಕಲ್ ರನ್ನು ವಿವಿಯಿಂದ ಕೈಬಿಡುವುದಾಗಿ ಘೋಷಿಸಿದ್ದಾರೆ. ಡಾ. ನಂದಕುಮಾರ್ ಕಲರಿಕ್ಕಲ್ ಅವರನ್ನು IIUCNN ನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂಬ ಪತ್ರಕ್ಕೆ ಸಹಿ ಕೂಡ ಮಾಡಿದ್ದಾರೆ.

ದೀಪಾರವರ ಪಿಎಚ್‌ಡಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ವಿವಿ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ಸ್ಥಗಿತಗೊಂಡಿರುವ ಅವರ ಫೆಲೋಶಿಪ್ ಅನ್ನು ಕೂಡಲೇ ಬಿಡುಗಡೆ ಮಾಡುತ್ತದೆ ಎಂದು ಉಪ ಕುಲಪತಿಗಳು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿವಿಯಲ್ಲಿ ನಡೆದ ಸಭೆಯಲ್ಲಿ ದೀಪಾ ಕೆ ಮೋಹನನ್ ರವರ ಮೂರು ಹಕ್ಕೊತ್ತಾಯಗಳು ಈಡೇರಿದ ಕಾರಣದಿಂದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುತ್ತಿದ್ದಾರೆ ಎಂದು ಭೀಮ್ ಆರ್ಮಿ ಕೇರಳ ಘಟಕ ತಿಳಿಸಿದೆ. ಆರಂಭದಿಂದಲೂ ವಿದ್ಯಾರ್ಥಿನಿಯ ಹೋರಾಟಕ್ಕೆ ಭೀಮ್ ಆರ್ಮಿ ಸಂಪೂರ್ಣ ಬೆಂಬಲ ಘೋಷಿಸಿತ್ತು.

ಹೋರಾಟದ ಹಿನ್ನೆಲೆ

ಇಂಟರ್ನ್ಯಾಷನಲ್ ಮತ್ತು ಇಂಟರ್ ಯೂನಿವರ್ಸಿಟಿ ಸೆಂಟರ್ ಫಾರ್ ನ್ಯಾನೊಸೈನ್ಸ್ ಮತ್ತು ನ್ಯಾನೊಟೆಕ್ನಾಲಜಿ (IIUCNN) ವಿಭಾಗದ ನಿರ್ದೇಶಕರಾದ ನಂದಕುಮಾರ್ ಕಲರಿಕಲ್ ಜಾತಿ ತಾರತಮ್ಯವೆಸಗಿ ತನ್ನ ಪಿಎಚ್‌ಡಿ ಪದವಿಗೆ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ದೀಪಾ ಕೆ ಮೋಹನನ್‌ರವರು ಅಕ್ಟೋಬರ್ 29 ರಿಂದ ವಿವಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರುವ ದೀಪಾ, ನಂತರ 2011 ರಲ್ಲಿ MG ಯುನಿವರ್ಸಿಟಿ (MGU) ಗೆ ಸೇರಿದರು. ಬಳಿಕ, ತಾವು ಯೂನಿವರ್ಸಿಟಿಗೆ ಸೇರಿದ ಮೊದಲ ವರ್ಷದಿಂದಲೂ ನಂದಕುಮಾರ್ ಕಲರಿಕಲ್ ಅವರು ದಲಿತೆ ಎಂಬ ಕಾರಣಕ್ಕೆ ತನ್ನ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ದೀಪಾ ಅವರು ಇನ್ಸ್ಟಿಟ್ಯೂಟ್‌ನಲ್ಲಿ ಸಂಶೋಧನೆ ಪ್ರಾರಂಭಿಸಿದಾಗ ಜಂಟಿ ನಿರ್ದೇಶಕರಾಗಿದ್ದ ಮತ್ತು ಈಗ IIUCNN ನಲ್ಲಿ ನಿರ್ದೇಶಕರಾಗಿರುವ ನಂದಕುಮಾರ್ ಆಕೆ ಲ್ಯಾಬ್‌ಗೆ ಪ್ರವೇಶಿಸುವುದನ್ನು, ಲ್ಯಾಬ್‌ನಲ್ಲಿ ಕೆಮಿಕಲ್‌ಗಳು ಮತ್ತು ಪಾಲಿಮರ್‌ಗಳನ್ನು ಬಳಸುವುದನ್ನು ನಿರಾಕರಿಸಿದ್ದರು. ಕೂರಲು ಕುರ್ಚಿ ಸಹ ನೀಡುತ್ತಿರಲಿಲ್ಲ ಮಾತ್ರವಲ್ಲದೆ ಅವರಿಗೆ ಬರುವ ಸ್ಟೈಫಂಡ್ ಅನ್ನು ಕೂಡ ತಡೆಹಿಡಿಯಲು ಮುಂದಾಗಿದ್ದರು ಎನ್ನಲಾಗಿದೆ.

ಒಮ್ಮೆ ತಾನು ಲ್ಯಾಬ್‌ನಲ್ಲಿ ಏಕಾಂಗಿಯಾಗಿದ್ದಾಗ, ತನ್ನನ್ನು ಕೂಡಿ ಹಾಕಿದ್ದರು. ತನ್ನ ಬ್ಯಾಚ್‌ನಲ್ಲಿರುವ ಏಕೈಕ ದಲಿತ ಸ್ಕಾಲರ್‌ ಆಗಿರುವ ತನ್ನೊಂದಿಗೆ ಅಸಭ್ಯವಾಗಿ ಮತ್ತು ನಿಂದನೀಯವಾಗಿ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪಿಎಚ್‌ಡಿ ಪಡೆಯದಂತೆ ತಡೆಯಲು ಎಲ್ಲಾ ರೀತಿಯಲ್ಲೂ ಯತ್ನಿಸುತ್ತಿದ್ದಾರೆ ಎಂದು ದೀಪಾ ಆರೋಪಿಸಿದ್ದರು.

ತನ್ನ ಸಂಶೋಧನಾ ಮಾರ್ಗದರ್ಶಿಯನ್ನು ಬದಲಾಯಿಸಬೇಕು, ಎಲ್ಲಾ ಇತರ ಪಿಎಚ್‌ಡಿ ವಿದ್ಯಾರ್ಥಿಗಳಂತೆ ತನಗೆ ಸಂಶೋಧನೆಯನ್ನು ಪೂರ್ಣಗೊಳಿಸಲು ಸಾಮಗ್ರಿಗಳನ್ನು ಒದಗಿಸಬೇಕು ಮತ್ತು ನನ್ನ ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ನಂದಕುಮಾರ್ ಕಲರಿಕಲ್ ಅವರನ್ನು ಸಂಸ್ಥೆಯಿಂದ ತೆಗೆದುಹಾಕಬೇಕು ಎಂಬ ಮೂರು ಹಕ್ಕೊತ್ತಾಯಗಳು ದೀಪಾರವರದ್ದಾಗಿದ್ದವು.

ನವೆಂಬರ್ 1 ರಂದು ವಿಶ್ವವಿದ್ಯಾನಿಲಯವು ದೀಪಾರೊಂದಿಗೆ ಸಭೆ ನಡೆಸಿ ಅವರ ಮೊದಲ ಎರಡು ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡದೆ. ಆದರೆ ತಾಂತ್ರಿಕ ಕಾರಣಗಳಿಂದ ನಂದಕುಮಾರ್ ಅವರನ್ನು IIUCNN ನಿಂದ ತೆಗೆದುಹಾಕಲು ನಿರಾಕರಿಸಿತ್ತು. ಪ್ರತಿಭಟನೆ ತೀವ್ರಗೊಂಡ ನಂತರ ಸೋಮವಾರ ಅವರ ಮೂರನೇ ಹಕ್ಕೊತ್ತಾಯವನ್ನು ವಿವಿ ಒಪ್ಪಿಕೊಂಡಿದೆ.

ದೀಪಾ ಅವರು 2015ರಲ್ಲಿ ನಂದಕುಮಾರ್ ವಿರುದ್ಧ ಜಾತಿ ತಾರತಮ್ಯದ ದೂರು ಸಲ್ಲಿಸಿದ್ದರು. ಆಗ ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಎನ್ ಜಯಕುಮಾರ್ ಮತ್ತು ಕೆಎಸ್ ಇಂದು ಅವರ ದ್ವಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ದೀಪಾ ಅವರ ಆರೋಪ ನಿಜವೆಂದು ವರದಿ ನೀಡಿತು. ಅಲ್ಲದೆ, ದೀಪಾ ಅವರ ಸಂಶೋಧನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿಶ್ವವಿದ್ಯಾಲಯವು ಒದಗಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಅದರ ನಂತರವೂ ಏನೂ ಬದಲಾಗಿಲ್ಲ. ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು. ನಂದಕುಮಾರ್ ಕೇರಳದ ಸಿಪಿಐ(ಎಂ)ನ ಉನ್ನತ ನಾಯಕರ ನಿಕಟವರ್ತಿಯಾಗಿರುವುದು ಇದಕ್ಕೆ ಕಾರಣ ಎಂದು ದೀಪಾ ಈ ಹಿಂದೆ ಆರೋಪಿಸಿದ್ದರು. ಇದಕ್ಕಾಗಿಯೇ, ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿದ್ಯಾರ್ಥಿ ಒಕ್ಕೂಟಗಳು ಸಹ ತನ್ನನ್ನು ಬೆಂಬಲಿಸಿಲ್ಲ ಎಂದು ದೀಪಾ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2016ರಲ್ಲಿ ನಂದಕುಮಾರ್ ವಿರುದ್ಧ ದೀಪಾ ಪೊಲೀಸ್ ದೂರು ದಾಖಲಿಸಿದ್ದರು. ತದನಂತರ, ಆತ ನನ್ನ ವಿರುದ್ಧ ಹೆಚ್ಚು ಸೇಡು ತೀರಿಸಿಕೊಂಡರು. ಅವರು ನನ್ನನ್ನು IIUCNN ನಿಂದ ವಜಾಗೊಳಿಸುವಂತೆ ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅಧ್ಯಯನ ಕೇಂದ್ರದಲ್ಲಿ ಎಲ್ಲವನ್ನೂ ನಿರ್ಧರಿಸುವವರು ಅವರೇ. ವಿಸಿ ಅವರನ್ನು ರಕ್ಷಿಸುತ್ತಿರುವುದರಿಂದ ನಾನು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದೇನೆ” ಎಂದು ದೀಪಾ ಹೇಳಿದ್ದಾರೆ.

ಭೀಮ್ ಆರ್ಮಿ ಕೇರಳ, ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಮತ್ತು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ​​ಸೇರಿದಂತೆ ಹಲವು ಸಂಘಟನೆಗಳು ದೀಪಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದವು.


ಇದನ್ನೂ ಓದಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...