Homeಚಳವಳಿಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಪ್ರಾಧ್ಯಾಪಕರ ಜಾತಿ ತಾರತಮ್ಯದಿಂದಾಗಿ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೇರಳದ ದೀಪಾ ಕೆ ಮೋಹನನ್ ಎಂಬ ದಲಿತ ಸಂಶೋಧನಾ ವಿದ್ಯಾರ್ಥಿನಿ ಅಕ್ಟೋಬರ್ 29 ರಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಸಂಜೆ ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿನಿಯ ಹಕ್ಕೊತ್ತಾಯದಂತೆ ಜಾತಿ ತಾರತಮ್ಯವೆಸಗಿದ ಪ್ರಾಧ್ಯಾಪಕರನ್ನು ವಜಾಗೊಳಿಸುವುದಾಗಿ ವಿಶ್ವವಿದ್ಯಾಲಯ ತಿಳಿಸಿದ ನಂತರ ದೀಪಾ ತನ್ನ ಹೋರಾಟ ಅಂತ್ಯಗೊಳಿಸಿದ್ದು ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಂದ ಜಯ ಎಂದಿದ್ದಾರೆ.

ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಸಬು ಥಾಮಸ್‌ರವರು ಜಾತಿ ತಾರತಮ್ಯವೆಸಗಿದ ಡಾ. ನಂದಕುಮಾರ್ ಕಲರಿಕ್ಕಲ್ ರನ್ನು ವಿವಿಯಿಂದ ಕೈಬಿಡುವುದಾಗಿ ಘೋಷಿಸಿದ್ದಾರೆ. ಡಾ. ನಂದಕುಮಾರ್ ಕಲರಿಕ್ಕಲ್ ಅವರನ್ನು IIUCNN ನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂಬ ಪತ್ರಕ್ಕೆ ಸಹಿ ಕೂಡ ಮಾಡಿದ್ದಾರೆ.

ದೀಪಾರವರ ಪಿಎಚ್‌ಡಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ವಿವಿ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ಸ್ಥಗಿತಗೊಂಡಿರುವ ಅವರ ಫೆಲೋಶಿಪ್ ಅನ್ನು ಕೂಡಲೇ ಬಿಡುಗಡೆ ಮಾಡುತ್ತದೆ ಎಂದು ಉಪ ಕುಲಪತಿಗಳು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಬಳಿಕ ವಿವಿ ಮುಂದೆ ಜೈಭೀಮ್ ಘೋಷಣೆಗಳು ಮೊಳಗಿವೆ. ಯಾವುದೇ ರೀತಿಯ ಜಾತಿ ತಾರತಮ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿವಿಯಲ್ಲಿ ನಡೆದ ಸಭೆಯಲ್ಲಿ ದೀಪಾ ಕೆ ಮೋಹನನ್ ರವರ ಮೂರು ಹಕ್ಕೊತ್ತಾಯಗಳು ಈಡೇರಿದ ಕಾರಣದಿಂದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುತ್ತಿದ್ದಾರೆ ಎಂದು ಭೀಮ್ ಆರ್ಮಿ ಕೇರಳ ಘಟಕ ತಿಳಿಸಿದೆ. ಆರಂಭದಿಂದಲೂ ವಿದ್ಯಾರ್ಥಿನಿಯ ಹೋರಾಟಕ್ಕೆ ಭೀಮ್ ಆರ್ಮಿ ಸಂಪೂರ್ಣ ಬೆಂಬಲ ಘೋಷಿಸಿತ್ತು.

ಹೋರಾಟದ ಹಿನ್ನೆಲೆ

ಇಂಟರ್ನ್ಯಾಷನಲ್ ಮತ್ತು ಇಂಟರ್ ಯೂನಿವರ್ಸಿಟಿ ಸೆಂಟರ್ ಫಾರ್ ನ್ಯಾನೊಸೈನ್ಸ್ ಮತ್ತು ನ್ಯಾನೊಟೆಕ್ನಾಲಜಿ (IIUCNN) ವಿಭಾಗದ ನಿರ್ದೇಶಕರಾದ ನಂದಕುಮಾರ್ ಕಲರಿಕಲ್ ಜಾತಿ ತಾರತಮ್ಯವೆಸಗಿ ತನ್ನ ಪಿಎಚ್‌ಡಿ ಪದವಿಗೆ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ದೀಪಾ ಕೆ ಮೋಹನನ್‌ರವರು ಅಕ್ಟೋಬರ್ 29 ರಿಂದ ವಿವಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರುವ ದೀಪಾ, ನಂತರ 2011 ರಲ್ಲಿ MG ಯುನಿವರ್ಸಿಟಿ (MGU) ಗೆ ಸೇರಿದರು. ಬಳಿಕ, ತಾವು ಯೂನಿವರ್ಸಿಟಿಗೆ ಸೇರಿದ ಮೊದಲ ವರ್ಷದಿಂದಲೂ ನಂದಕುಮಾರ್ ಕಲರಿಕಲ್ ಅವರು ದಲಿತೆ ಎಂಬ ಕಾರಣಕ್ಕೆ ತನ್ನ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ದೀಪಾ ಅವರು ಇನ್ಸ್ಟಿಟ್ಯೂಟ್‌ನಲ್ಲಿ ಸಂಶೋಧನೆ ಪ್ರಾರಂಭಿಸಿದಾಗ ಜಂಟಿ ನಿರ್ದೇಶಕರಾಗಿದ್ದ ಮತ್ತು ಈಗ IIUCNN ನಲ್ಲಿ ನಿರ್ದೇಶಕರಾಗಿರುವ ನಂದಕುಮಾರ್ ಆಕೆ ಲ್ಯಾಬ್‌ಗೆ ಪ್ರವೇಶಿಸುವುದನ್ನು, ಲ್ಯಾಬ್‌ನಲ್ಲಿ ಕೆಮಿಕಲ್‌ಗಳು ಮತ್ತು ಪಾಲಿಮರ್‌ಗಳನ್ನು ಬಳಸುವುದನ್ನು ನಿರಾಕರಿಸಿದ್ದರು. ಕೂರಲು ಕುರ್ಚಿ ಸಹ ನೀಡುತ್ತಿರಲಿಲ್ಲ ಮಾತ್ರವಲ್ಲದೆ ಅವರಿಗೆ ಬರುವ ಸ್ಟೈಫಂಡ್ ಅನ್ನು ಕೂಡ ತಡೆಹಿಡಿಯಲು ಮುಂದಾಗಿದ್ದರು ಎನ್ನಲಾಗಿದೆ.

ಒಮ್ಮೆ ತಾನು ಲ್ಯಾಬ್‌ನಲ್ಲಿ ಏಕಾಂಗಿಯಾಗಿದ್ದಾಗ, ತನ್ನನ್ನು ಕೂಡಿ ಹಾಕಿದ್ದರು. ತನ್ನ ಬ್ಯಾಚ್‌ನಲ್ಲಿರುವ ಏಕೈಕ ದಲಿತ ಸ್ಕಾಲರ್‌ ಆಗಿರುವ ತನ್ನೊಂದಿಗೆ ಅಸಭ್ಯವಾಗಿ ಮತ್ತು ನಿಂದನೀಯವಾಗಿ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪಿಎಚ್‌ಡಿ ಪಡೆಯದಂತೆ ತಡೆಯಲು ಎಲ್ಲಾ ರೀತಿಯಲ್ಲೂ ಯತ್ನಿಸುತ್ತಿದ್ದಾರೆ ಎಂದು ದೀಪಾ ಆರೋಪಿಸಿದ್ದರು.

ತನ್ನ ಸಂಶೋಧನಾ ಮಾರ್ಗದರ್ಶಿಯನ್ನು ಬದಲಾಯಿಸಬೇಕು, ಎಲ್ಲಾ ಇತರ ಪಿಎಚ್‌ಡಿ ವಿದ್ಯಾರ್ಥಿಗಳಂತೆ ತನಗೆ ಸಂಶೋಧನೆಯನ್ನು ಪೂರ್ಣಗೊಳಿಸಲು ಸಾಮಗ್ರಿಗಳನ್ನು ಒದಗಿಸಬೇಕು ಮತ್ತು ನನ್ನ ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ನಂದಕುಮಾರ್ ಕಲರಿಕಲ್ ಅವರನ್ನು ಸಂಸ್ಥೆಯಿಂದ ತೆಗೆದುಹಾಕಬೇಕು ಎಂಬ ಮೂರು ಹಕ್ಕೊತ್ತಾಯಗಳು ದೀಪಾರವರದ್ದಾಗಿದ್ದವು.

ನವೆಂಬರ್ 1 ರಂದು ವಿಶ್ವವಿದ್ಯಾನಿಲಯವು ದೀಪಾರೊಂದಿಗೆ ಸಭೆ ನಡೆಸಿ ಅವರ ಮೊದಲ ಎರಡು ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡದೆ. ಆದರೆ ತಾಂತ್ರಿಕ ಕಾರಣಗಳಿಂದ ನಂದಕುಮಾರ್ ಅವರನ್ನು IIUCNN ನಿಂದ ತೆಗೆದುಹಾಕಲು ನಿರಾಕರಿಸಿತ್ತು. ಪ್ರತಿಭಟನೆ ತೀವ್ರಗೊಂಡ ನಂತರ ಸೋಮವಾರ ಅವರ ಮೂರನೇ ಹಕ್ಕೊತ್ತಾಯವನ್ನು ವಿವಿ ಒಪ್ಪಿಕೊಂಡಿದೆ.

ದೀಪಾ ಅವರು 2015ರಲ್ಲಿ ನಂದಕುಮಾರ್ ವಿರುದ್ಧ ಜಾತಿ ತಾರತಮ್ಯದ ದೂರು ಸಲ್ಲಿಸಿದ್ದರು. ಆಗ ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಎನ್ ಜಯಕುಮಾರ್ ಮತ್ತು ಕೆಎಸ್ ಇಂದು ಅವರ ದ್ವಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ದೀಪಾ ಅವರ ಆರೋಪ ನಿಜವೆಂದು ವರದಿ ನೀಡಿತು. ಅಲ್ಲದೆ, ದೀಪಾ ಅವರ ಸಂಶೋಧನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿಶ್ವವಿದ್ಯಾಲಯವು ಒದಗಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಅದರ ನಂತರವೂ ಏನೂ ಬದಲಾಗಿಲ್ಲ. ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು. ನಂದಕುಮಾರ್ ಕೇರಳದ ಸಿಪಿಐ(ಎಂ)ನ ಉನ್ನತ ನಾಯಕರ ನಿಕಟವರ್ತಿಯಾಗಿರುವುದು ಇದಕ್ಕೆ ಕಾರಣ ಎಂದು ದೀಪಾ ಈ ಹಿಂದೆ ಆರೋಪಿಸಿದ್ದರು. ಇದಕ್ಕಾಗಿಯೇ, ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿದ್ಯಾರ್ಥಿ ಒಕ್ಕೂಟಗಳು ಸಹ ತನ್ನನ್ನು ಬೆಂಬಲಿಸಿಲ್ಲ ಎಂದು ದೀಪಾ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2016ರಲ್ಲಿ ನಂದಕುಮಾರ್ ವಿರುದ್ಧ ದೀಪಾ ಪೊಲೀಸ್ ದೂರು ದಾಖಲಿಸಿದ್ದರು. ತದನಂತರ, ಆತ ನನ್ನ ವಿರುದ್ಧ ಹೆಚ್ಚು ಸೇಡು ತೀರಿಸಿಕೊಂಡರು. ಅವರು ನನ್ನನ್ನು IIUCNN ನಿಂದ ವಜಾಗೊಳಿಸುವಂತೆ ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅಧ್ಯಯನ ಕೇಂದ್ರದಲ್ಲಿ ಎಲ್ಲವನ್ನೂ ನಿರ್ಧರಿಸುವವರು ಅವರೇ. ವಿಸಿ ಅವರನ್ನು ರಕ್ಷಿಸುತ್ತಿರುವುದರಿಂದ ನಾನು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದೇನೆ” ಎಂದು ದೀಪಾ ಹೇಳಿದ್ದಾರೆ.

ಭೀಮ್ ಆರ್ಮಿ ಕೇರಳ, ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಮತ್ತು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ​​ಸೇರಿದಂತೆ ಹಲವು ಸಂಘಟನೆಗಳು ದೀಪಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದವು.


ಇದನ್ನೂ ಓದಿ: ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...