Homeಮುಖಪುಟಕೇರಳ: ಗರ್ಭಿಣಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಮೂರು ಆಸ್ಪತ್ರೆಗಳು, ಮಗು ಸಾವು

ಕೇರಳ: ಗರ್ಭಿಣಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಮೂರು ಆಸ್ಪತ್ರೆಗಳು, ಮಗು ಸಾವು

- Advertisement -
- Advertisement -

ಕೇರಳದಲ್ಲಿ ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲು ಮೂರು ಆಸ್ಪತ್ರೆಗಳು ನಿರಾಕರಿಸಿದ್ದು, ಗರ್ಭದಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಕರಣದ ಬಗ್ಗೆ ಕೇರಳದ ಮಾನವ ಹಕ್ಕುಗಳ ಸಮಿತಿಯು ರಾಜ್ಯದ ಮೂರು ಆಸ್ಪತ್ರೆಗಳ ವಿರುದ್ಧ ಪ್ರಕರಣ ದಾಖಲಿಸಿದೆ.

ಶುಕ್ರವಾರ ಕೊಲ್ಲಂ ಜಿಲ್ಲೆಯ ಪರಿಪ್ಪಳ್ಳಿಯ ಗರ್ಭಿಣಿ ಮಹಿಳೆಯ ಕುಟುಂಬವು ಚಿಕಿತ್ಸೆಗಾಗಿ ಕೊಲ್ಲಂನಲ್ಲಿ ಎರಡು ಆಸ್ಪತ್ರೆಗಳು ಮತ್ತು ತಿರುವನಂತಪುರಂನಲ್ಲಿನ ಒಂದು ಆಸ್ಪತ್ರೆಗೆ ತೆರಳಿದೆ. ಮೂರು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಮಗು ಗರ್ಭದಲ್ಲಿಯೇ ಸಾವನ್ನಪ್ಪಿದೆ ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ಮಾಧ್ಯಮಗಳಲ್ಲಿ ವರದಿಯಾದ ನಂತರ ಕೊಲ್ಲಂ ಜಿಲ್ಲಾ ವೈದ್ಯಾಧಿಕಾರಿ ಘಟನೆಯ ತನಿಖೆಯನ್ನು ಆರಂಭಿಸಿದ್ದಾರೆ. ಮಾಧ್ಯಮಗಳ ವರದಿ ಆಧರಿಸಿ, ಕೇರಳದ ಮಾನವ ಹಕ್ಕುಗಳ ಸಮಿತಿಯು ರಾಜ್ಯದ ಮೂರು ಆಸ್ಪತ್ರೆಗಳ ವಿರುದ್ಧ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ಎಂಟು ತಿಂಗಳ ಗರ್ಭಿಣಿಯಾಗಿದ್ದ ಮೀರಾ ಅವರಿಗೆ ಗರ್ಭಾವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರೂ, ಪರವೂರಿನ ನೆಡುಂಗೋಲಂನಲ್ಲಿರುವ ರಾಮರಾವ್ ಸ್ಮಾರಕ ತಾಲೂಕು ಆಸ್ಪತ್ರೆ, ಕೊಲ್ಲಂನ ಸರ್ಕಾರಿ ವಿಕ್ಟೋರಿಯಾ ಮಹಿಳಾ ಆಸ್ಪತ್ರೆ ಮತ್ತು ತಿರುವನಂತಪುರಂನ ಎಸ್‌ಎಟಿ ಆಸ್ಪತ್ರೆ ಚಿಕಿತ್ಸೆಯನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ.

ಒಂದು ವಾರದ ಹಿಂದೆ ಗರ್ಭಿಣಿ ಮೀರಾ ಪರವೂರು ಆಸ್ಪತ್ರೆಯಿಂದ ಚಿಕಿತ್ಸೆ ಪಡೆದಿದ್ದರು ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ.

“ಮೊದಲು ಆಕೆ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಅಲ್ಲಿನ ವೈದ್ಯರು ಮತ್ತು ನರ್ಸ್‌‌ಗಳು ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಎಸ್‌ಎಟಿ ಆಸ್ಪತ್ರೆಗೆ ಹೋಗುವಂತೆ ತಿಳಿಸಿದ್ದರು. ಒಂದೆರಡು ದಿನಗಳ ನಂತರ ಅವರು ತಿರುವನಂತಪುರಂನ ಎಸ್‌ಎಟಿ ಆಸ್ಪತ್ರೆಗೆ ಹೋದಾಗ, ಅಲ್ಲಿ ಕೊಲ್ಲಂನ ಆಸ್ಪತ್ರೆಗಳಿಗೆ ವಾಪಸ್ ಹೋಗುವಂತೆ ಹೇಳಿದರು” ಎಂದು ಸಂಬಂಧಿ ಆರೋಪಿಸಿದ್ದಾರೆ.

ಕೊನೆಗೆ ನೋವಿನಿಂದ ಬಳಲುತ್ತಿದ್ದ ಅವರನ್ನು ಸೆಪ್ಟಂಬರ್‌ 15 ರಂದು ಕೊಲ್ಲಂ ಸರ್ಕಾರಿ ಎಂಸಿಎಚ್‌ಗೆ ಸೇರಿಸಲಾಯಿತು. ಹೆರಿಗೆ ಮಾಡಿಸಲಾಗಿದ್ದು, ಐದು ದಿನಗಳ ಹಿಂದೆ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವುದು ತಿಳಿದು ಬಂದಿದೆ.

ಈ ಬಗ್ಗೆ ಕೊಲ್ಲಂ ಜಿಲ್ಲಾ ವೈದ್ಯಾಧಿಕಾರಿ ಆರ್. ಶ್ರೀಲತಾ, ಆಸ್ಪತ್ರೆಗಳಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: 13,500 ಕುಟುಂಬಗಳಿಗೆ ಭೂಮಿ, ವಸತಿ ನೀಡಲು ಕೇರಳ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...