Homeಮುಖಪುಟಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

ಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

- Advertisement -
- Advertisement -

ಅವೈಜ್ಞಾನಿಕ ಮತ್ತು ಅಸುರಕ್ಷಿತ ಮನೆ ಹೆರಿಗೆಗಳನ್ನು ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡುವಂತೆ ಕೇರಳದ ವೈದ್ಯರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.

ಏಪ್ರಿಲ್ 5 ರಂದು ಮಲಪ್ಪುರಂ ಜಿಲ್ಲೆಯ ಬಾಡಿಗೆ ಮನೆಯಲ್ಲಿ ಹೆರಿಗೆಯ ಸಮಯದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ ಈ ಬೇಡಿಕೆ ಬಂದಿದೆ. ಹೆರಿಗೆ ನಂತರದ ಅತಿಯಾದ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿದರು.

ರಾಜ್ಯದ ಆರೋಗ್ಯ ಸೇವೆಗಳಲ್ಲಿ ಕೆಲಸ ಮಾಡುವ ವೈದ್ಯರನ್ನು ಪ್ರತಿನಿಧಿಸುವ ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ) ಈ ಘಟನೆಯನ್ನು ಬಲವಾಗಿ ಖಂಡಿಸಿದೆ. ವೈದ್ಯಕೀಯ ಬೆಂಬಲವಿಲ್ಲದೆ ಮನೆ ಹೆರಿಗೆಗಳನ್ನು ‘ಕ್ರಿಮಿನಲ್ ಪದ್ಧತಿ’ ಎಂದು ಸಂಸ್ಥೆ ಬಣ್ಣಿಸಿದೆ. ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಆಧುನಿಕ ವೈದ್ಯಕೀಯ ವಿಜ್ಞಾನವು ಇಷ್ಟೊಂದು ಮುಂದುವರೆದಿದ್ದರೂ ಸಹ, ಜನರು ಇನ್ನೂ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದ ಚಿಕಿತ್ಸಾ ವಿಧಾನಗಳನ್ನು ಅನುಸರಿಸುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕೆಜಿಎಂಒಎ ಹೇಳಿದೆ.

ಈ ಬಗ್ಗೆ ಸಾರ್ವಜನಿಕ ಹೇಳಿಕೆ ನೀಡಿರುವ ಕೆಜಿಎಂಒಎ, ಕೇರಳವು ಸಾರ್ವಜನಿಕ ಆರೋಗ್ಯದಲ್ಲಿ, ವಿಶೇಷವಾಗಿ ತಾಯಿ ಮತ್ತು ಶಿಶು ಮರಣಗಳನ್ನು ಕಡಿಮೆ ಮಾಡುವಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸರ್ಕಾರ ಮತ್ತು ಆರೋಗ್ಯ ಕಾರ್ಯಕರ್ತರ ಹಲವು ವರ್ಷಗಳ ಕಠಿಣ ಪರಿಶ್ರಮದ ಮೂಲಕ ಈ ಸಾಧನೆಗಳು ಸಾಧ್ಯವಾಗಿವೆ ಎಂದಿದೆ.

“ಈ ಬೆಳವಣಿಗೆಗಳಿಂದ ಪ್ರತಿಯೊಬ್ಬ ನಾಗರಿಕನೂ ಪ್ರಯೋಜನ ಪಡೆಯಲು ಅರ್ಹ. ಆದರೆ, ಕೆಲವು ಜನರು ಜೀವಗಳನ್ನು ಅಪಾಯಕ್ಕೆ ಸಿಲುಕಿಸುವ ಹಿಂದುಳಿದ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆಜಿಎಂಒಎ ಪ್ರಕಾರ, ಕೇರಳದಲ್ಲಿ ಪ್ರತಿ ವರ್ಷ ಸುಮಾರು 3,00,000 ಹೆರಿಗೆಗಳು ನಡೆಯುತ್ತವೆ. ಅವುಗಳಲ್ಲಿ ಹೆಚ್ಚಿನವು ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದರೂ, ಸುಮಾರು 500 ಹೆರಿಗೆಗಳು ಇನ್ನೂ ಮನೆಯಲ್ಲಿಯೇ ಸಂಭವಿಸುತ್ತವೆ. ಇದರ ಹಿಂದಿನ ಕಾರಣವೆಂದರೆ ಅವೈಜ್ಞಾನಿಕ ಚಿಕಿತ್ಸಾ ವಿಧಾನಗಳಲ್ಲಿ ಕುರುಡು ನಂಬಿಕೆ ಅಥವಾ ಕೆಲವು ಗುಂಪುಗಳು ಅಥವಾ ವ್ಯಕ್ತಿಗಳು ಹರಡುವ ತಪ್ಪು ಮಾಹಿತಿ ಎಂದು ಅವರು ಹೇಳಿದರು.

ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರ ಪ್ರತಿ ಮಗು ಮತ್ತು ತಾಯಿಗೆ ಸರಿಯಾದ ವೈದ್ಯಕೀಯ ಆರೈಕೆ ಪಡೆಯುವ ಹಕ್ಕಿದೆ. ಅವರ ಈ ಹಕ್ಕನ್ನು ನಿರಾಕರಿಸುವುದನ್ನು ಗಂಭೀರ ಅಪರಾಧವೆಂದು ನೋಡಬೇಕು ಎಂದು ಸಂಘವು ಹೇಳಿದೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ಮನೆ ಹೆರಿಗೆಗಳನ್ನು ಪ್ರಚಾರ ಮಾಡುವ ಜನರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಅಂತಹ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಮಹಿಳೆಯ ಗಂಡನನ್ನು ವಶಕ್ಕೆ ತೆಗೆದುಕೊಂಡು ಅಪರಾಧಿಕ ನರಹತ್ಯೆಯ ಆರೋಪ ಹೊರಿಸಲಾಗಿದೆ ಎಂದು ಸಚಿವರು ದೃಢಪಡಿಸಿದರು.

ಈ ವರ್ಷ ಇಲ್ಲಿಯವರೆಗೆ, ಕೇರಳವು ಸುಮಾರು ಎರಡು ಲಕ್ಷ ಹೆರಿಗೆಗಳನ್ನು ದಾಖಲಿಸಿದೆ. ಅವುಗಳಲ್ಲಿ 382 ಮನೆಯಲ್ಲಿಯೇ ನಡೆದಿವೆ. ಅಸುರಕ್ಷಿತ ಮತ್ತು ಅವೈಜ್ಞಾನಿಕ ಮನೆ ಹೆರಿಗೆಗಳನ್ನು ತಡೆಯುವ ಜೊತೆಗೆ, ತಾಯಂದಿರು ಮತ್ತು ಮಕ್ಕಳ ಜೀವಗಳನ್ನು ರಕ್ಷಿಸಲು ಸರ್ಕಾರವು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಈಗ ಸಂಘ ಒತ್ತಾಯಿಸಲಾಗುತ್ತಿದೆ.

‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...