Homeಮುಖಪುಟಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

ಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

- Advertisement -
- Advertisement -

ಅವೈಜ್ಞಾನಿಕ ಮತ್ತು ಅಸುರಕ್ಷಿತ ಮನೆ ಹೆರಿಗೆಗಳನ್ನು ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡುವಂತೆ ಕೇರಳದ ವೈದ್ಯರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.

ಏಪ್ರಿಲ್ 5 ರಂದು ಮಲಪ್ಪುರಂ ಜಿಲ್ಲೆಯ ಬಾಡಿಗೆ ಮನೆಯಲ್ಲಿ ಹೆರಿಗೆಯ ಸಮಯದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ ಈ ಬೇಡಿಕೆ ಬಂದಿದೆ. ಹೆರಿಗೆ ನಂತರದ ಅತಿಯಾದ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿದರು.

ರಾಜ್ಯದ ಆರೋಗ್ಯ ಸೇವೆಗಳಲ್ಲಿ ಕೆಲಸ ಮಾಡುವ ವೈದ್ಯರನ್ನು ಪ್ರತಿನಿಧಿಸುವ ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ) ಈ ಘಟನೆಯನ್ನು ಬಲವಾಗಿ ಖಂಡಿಸಿದೆ. ವೈದ್ಯಕೀಯ ಬೆಂಬಲವಿಲ್ಲದೆ ಮನೆ ಹೆರಿಗೆಗಳನ್ನು ‘ಕ್ರಿಮಿನಲ್ ಪದ್ಧತಿ’ ಎಂದು ಸಂಸ್ಥೆ ಬಣ್ಣಿಸಿದೆ. ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಆಧುನಿಕ ವೈದ್ಯಕೀಯ ವಿಜ್ಞಾನವು ಇಷ್ಟೊಂದು ಮುಂದುವರೆದಿದ್ದರೂ ಸಹ, ಜನರು ಇನ್ನೂ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದ ಚಿಕಿತ್ಸಾ ವಿಧಾನಗಳನ್ನು ಅನುಸರಿಸುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕೆಜಿಎಂಒಎ ಹೇಳಿದೆ.

ಈ ಬಗ್ಗೆ ಸಾರ್ವಜನಿಕ ಹೇಳಿಕೆ ನೀಡಿರುವ ಕೆಜಿಎಂಒಎ, ಕೇರಳವು ಸಾರ್ವಜನಿಕ ಆರೋಗ್ಯದಲ್ಲಿ, ವಿಶೇಷವಾಗಿ ತಾಯಿ ಮತ್ತು ಶಿಶು ಮರಣಗಳನ್ನು ಕಡಿಮೆ ಮಾಡುವಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸರ್ಕಾರ ಮತ್ತು ಆರೋಗ್ಯ ಕಾರ್ಯಕರ್ತರ ಹಲವು ವರ್ಷಗಳ ಕಠಿಣ ಪರಿಶ್ರಮದ ಮೂಲಕ ಈ ಸಾಧನೆಗಳು ಸಾಧ್ಯವಾಗಿವೆ ಎಂದಿದೆ.

“ಈ ಬೆಳವಣಿಗೆಗಳಿಂದ ಪ್ರತಿಯೊಬ್ಬ ನಾಗರಿಕನೂ ಪ್ರಯೋಜನ ಪಡೆಯಲು ಅರ್ಹ. ಆದರೆ, ಕೆಲವು ಜನರು ಜೀವಗಳನ್ನು ಅಪಾಯಕ್ಕೆ ಸಿಲುಕಿಸುವ ಹಿಂದುಳಿದ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆಜಿಎಂಒಎ ಪ್ರಕಾರ, ಕೇರಳದಲ್ಲಿ ಪ್ರತಿ ವರ್ಷ ಸುಮಾರು 3,00,000 ಹೆರಿಗೆಗಳು ನಡೆಯುತ್ತವೆ. ಅವುಗಳಲ್ಲಿ ಹೆಚ್ಚಿನವು ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದರೂ, ಸುಮಾರು 500 ಹೆರಿಗೆಗಳು ಇನ್ನೂ ಮನೆಯಲ್ಲಿಯೇ ಸಂಭವಿಸುತ್ತವೆ. ಇದರ ಹಿಂದಿನ ಕಾರಣವೆಂದರೆ ಅವೈಜ್ಞಾನಿಕ ಚಿಕಿತ್ಸಾ ವಿಧಾನಗಳಲ್ಲಿ ಕುರುಡು ನಂಬಿಕೆ ಅಥವಾ ಕೆಲವು ಗುಂಪುಗಳು ಅಥವಾ ವ್ಯಕ್ತಿಗಳು ಹರಡುವ ತಪ್ಪು ಮಾಹಿತಿ ಎಂದು ಅವರು ಹೇಳಿದರು.

ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರ ಪ್ರತಿ ಮಗು ಮತ್ತು ತಾಯಿಗೆ ಸರಿಯಾದ ವೈದ್ಯಕೀಯ ಆರೈಕೆ ಪಡೆಯುವ ಹಕ್ಕಿದೆ. ಅವರ ಈ ಹಕ್ಕನ್ನು ನಿರಾಕರಿಸುವುದನ್ನು ಗಂಭೀರ ಅಪರಾಧವೆಂದು ನೋಡಬೇಕು ಎಂದು ಸಂಘವು ಹೇಳಿದೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ಮನೆ ಹೆರಿಗೆಗಳನ್ನು ಪ್ರಚಾರ ಮಾಡುವ ಜನರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಅಂತಹ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಮಹಿಳೆಯ ಗಂಡನನ್ನು ವಶಕ್ಕೆ ತೆಗೆದುಕೊಂಡು ಅಪರಾಧಿಕ ನರಹತ್ಯೆಯ ಆರೋಪ ಹೊರಿಸಲಾಗಿದೆ ಎಂದು ಸಚಿವರು ದೃಢಪಡಿಸಿದರು.

ಈ ವರ್ಷ ಇಲ್ಲಿಯವರೆಗೆ, ಕೇರಳವು ಸುಮಾರು ಎರಡು ಲಕ್ಷ ಹೆರಿಗೆಗಳನ್ನು ದಾಖಲಿಸಿದೆ. ಅವುಗಳಲ್ಲಿ 382 ಮನೆಯಲ್ಲಿಯೇ ನಡೆದಿವೆ. ಅಸುರಕ್ಷಿತ ಮತ್ತು ಅವೈಜ್ಞಾನಿಕ ಮನೆ ಹೆರಿಗೆಗಳನ್ನು ತಡೆಯುವ ಜೊತೆಗೆ, ತಾಯಂದಿರು ಮತ್ತು ಮಕ್ಕಳ ಜೀವಗಳನ್ನು ರಕ್ಷಿಸಲು ಸರ್ಕಾರವು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಈಗ ಸಂಘ ಒತ್ತಾಯಿಸಲಾಗುತ್ತಿದೆ.

‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...