Homeಮುಖಪುಟಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

ಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

- Advertisement -
- Advertisement -

ಅವೈಜ್ಞಾನಿಕ ಮತ್ತು ಅಸುರಕ್ಷಿತ ಮನೆ ಹೆರಿಗೆಗಳನ್ನು ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡುವಂತೆ ಕೇರಳದ ವೈದ್ಯರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.

ಏಪ್ರಿಲ್ 5 ರಂದು ಮಲಪ್ಪುರಂ ಜಿಲ್ಲೆಯ ಬಾಡಿಗೆ ಮನೆಯಲ್ಲಿ ಹೆರಿಗೆಯ ಸಮಯದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ ಈ ಬೇಡಿಕೆ ಬಂದಿದೆ. ಹೆರಿಗೆ ನಂತರದ ಅತಿಯಾದ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿದರು.

ರಾಜ್ಯದ ಆರೋಗ್ಯ ಸೇವೆಗಳಲ್ಲಿ ಕೆಲಸ ಮಾಡುವ ವೈದ್ಯರನ್ನು ಪ್ರತಿನಿಧಿಸುವ ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ) ಈ ಘಟನೆಯನ್ನು ಬಲವಾಗಿ ಖಂಡಿಸಿದೆ. ವೈದ್ಯಕೀಯ ಬೆಂಬಲವಿಲ್ಲದೆ ಮನೆ ಹೆರಿಗೆಗಳನ್ನು ‘ಕ್ರಿಮಿನಲ್ ಪದ್ಧತಿ’ ಎಂದು ಸಂಸ್ಥೆ ಬಣ್ಣಿಸಿದೆ. ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಆಧುನಿಕ ವೈದ್ಯಕೀಯ ವಿಜ್ಞಾನವು ಇಷ್ಟೊಂದು ಮುಂದುವರೆದಿದ್ದರೂ ಸಹ, ಜನರು ಇನ್ನೂ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದ ಚಿಕಿತ್ಸಾ ವಿಧಾನಗಳನ್ನು ಅನುಸರಿಸುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕೆಜಿಎಂಒಎ ಹೇಳಿದೆ.

ಈ ಬಗ್ಗೆ ಸಾರ್ವಜನಿಕ ಹೇಳಿಕೆ ನೀಡಿರುವ ಕೆಜಿಎಂಒಎ, ಕೇರಳವು ಸಾರ್ವಜನಿಕ ಆರೋಗ್ಯದಲ್ಲಿ, ವಿಶೇಷವಾಗಿ ತಾಯಿ ಮತ್ತು ಶಿಶು ಮರಣಗಳನ್ನು ಕಡಿಮೆ ಮಾಡುವಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸರ್ಕಾರ ಮತ್ತು ಆರೋಗ್ಯ ಕಾರ್ಯಕರ್ತರ ಹಲವು ವರ್ಷಗಳ ಕಠಿಣ ಪರಿಶ್ರಮದ ಮೂಲಕ ಈ ಸಾಧನೆಗಳು ಸಾಧ್ಯವಾಗಿವೆ ಎಂದಿದೆ.

“ಈ ಬೆಳವಣಿಗೆಗಳಿಂದ ಪ್ರತಿಯೊಬ್ಬ ನಾಗರಿಕನೂ ಪ್ರಯೋಜನ ಪಡೆಯಲು ಅರ್ಹ. ಆದರೆ, ಕೆಲವು ಜನರು ಜೀವಗಳನ್ನು ಅಪಾಯಕ್ಕೆ ಸಿಲುಕಿಸುವ ಹಿಂದುಳಿದ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆಜಿಎಂಒಎ ಪ್ರಕಾರ, ಕೇರಳದಲ್ಲಿ ಪ್ರತಿ ವರ್ಷ ಸುಮಾರು 3,00,000 ಹೆರಿಗೆಗಳು ನಡೆಯುತ್ತವೆ. ಅವುಗಳಲ್ಲಿ ಹೆಚ್ಚಿನವು ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದರೂ, ಸುಮಾರು 500 ಹೆರಿಗೆಗಳು ಇನ್ನೂ ಮನೆಯಲ್ಲಿಯೇ ಸಂಭವಿಸುತ್ತವೆ. ಇದರ ಹಿಂದಿನ ಕಾರಣವೆಂದರೆ ಅವೈಜ್ಞಾನಿಕ ಚಿಕಿತ್ಸಾ ವಿಧಾನಗಳಲ್ಲಿ ಕುರುಡು ನಂಬಿಕೆ ಅಥವಾ ಕೆಲವು ಗುಂಪುಗಳು ಅಥವಾ ವ್ಯಕ್ತಿಗಳು ಹರಡುವ ತಪ್ಪು ಮಾಹಿತಿ ಎಂದು ಅವರು ಹೇಳಿದರು.

ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರ ಪ್ರತಿ ಮಗು ಮತ್ತು ತಾಯಿಗೆ ಸರಿಯಾದ ವೈದ್ಯಕೀಯ ಆರೈಕೆ ಪಡೆಯುವ ಹಕ್ಕಿದೆ. ಅವರ ಈ ಹಕ್ಕನ್ನು ನಿರಾಕರಿಸುವುದನ್ನು ಗಂಭೀರ ಅಪರಾಧವೆಂದು ನೋಡಬೇಕು ಎಂದು ಸಂಘವು ಹೇಳಿದೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ಮನೆ ಹೆರಿಗೆಗಳನ್ನು ಪ್ರಚಾರ ಮಾಡುವ ಜನರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಅಂತಹ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಮಹಿಳೆಯ ಗಂಡನನ್ನು ವಶಕ್ಕೆ ತೆಗೆದುಕೊಂಡು ಅಪರಾಧಿಕ ನರಹತ್ಯೆಯ ಆರೋಪ ಹೊರಿಸಲಾಗಿದೆ ಎಂದು ಸಚಿವರು ದೃಢಪಡಿಸಿದರು.

ಈ ವರ್ಷ ಇಲ್ಲಿಯವರೆಗೆ, ಕೇರಳವು ಸುಮಾರು ಎರಡು ಲಕ್ಷ ಹೆರಿಗೆಗಳನ್ನು ದಾಖಲಿಸಿದೆ. ಅವುಗಳಲ್ಲಿ 382 ಮನೆಯಲ್ಲಿಯೇ ನಡೆದಿವೆ. ಅಸುರಕ್ಷಿತ ಮತ್ತು ಅವೈಜ್ಞಾನಿಕ ಮನೆ ಹೆರಿಗೆಗಳನ್ನು ತಡೆಯುವ ಜೊತೆಗೆ, ತಾಯಂದಿರು ಮತ್ತು ಮಕ್ಕಳ ಜೀವಗಳನ್ನು ರಕ್ಷಿಸಲು ಸರ್ಕಾರವು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಈಗ ಸಂಘ ಒತ್ತಾಯಿಸಲಾಗುತ್ತಿದೆ.

‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...