Homeಮುಖಪುಟಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

ಅವೈಜ್ಞಾನಿಕ-ಅಸುರಕ್ಷಿತ ಮನೆ ಹೆರಿಗೆ ನಿಷೇಧಕ್ಕೆ ಕೇರಳ ವೈದ್ಯರ ಸಂಘ ಆಗ್ರಹ

- Advertisement -
- Advertisement -

ಅವೈಜ್ಞಾನಿಕ ಮತ್ತು ಅಸುರಕ್ಷಿತ ಮನೆ ಹೆರಿಗೆಗಳನ್ನು ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡುವಂತೆ ಕೇರಳದ ವೈದ್ಯರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.

ಏಪ್ರಿಲ್ 5 ರಂದು ಮಲಪ್ಪುರಂ ಜಿಲ್ಲೆಯ ಬಾಡಿಗೆ ಮನೆಯಲ್ಲಿ ಹೆರಿಗೆಯ ಸಮಯದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ ಈ ಬೇಡಿಕೆ ಬಂದಿದೆ. ಹೆರಿಗೆ ನಂತರದ ಅತಿಯಾದ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿದರು.

ರಾಜ್ಯದ ಆರೋಗ್ಯ ಸೇವೆಗಳಲ್ಲಿ ಕೆಲಸ ಮಾಡುವ ವೈದ್ಯರನ್ನು ಪ್ರತಿನಿಧಿಸುವ ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ) ಈ ಘಟನೆಯನ್ನು ಬಲವಾಗಿ ಖಂಡಿಸಿದೆ. ವೈದ್ಯಕೀಯ ಬೆಂಬಲವಿಲ್ಲದೆ ಮನೆ ಹೆರಿಗೆಗಳನ್ನು ‘ಕ್ರಿಮಿನಲ್ ಪದ್ಧತಿ’ ಎಂದು ಸಂಸ್ಥೆ ಬಣ್ಣಿಸಿದೆ. ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಆಧುನಿಕ ವೈದ್ಯಕೀಯ ವಿಜ್ಞಾನವು ಇಷ್ಟೊಂದು ಮುಂದುವರೆದಿದ್ದರೂ ಸಹ, ಜನರು ಇನ್ನೂ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲದ ಚಿಕಿತ್ಸಾ ವಿಧಾನಗಳನ್ನು ಅನುಸರಿಸುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕೆಜಿಎಂಒಎ ಹೇಳಿದೆ.

ಈ ಬಗ್ಗೆ ಸಾರ್ವಜನಿಕ ಹೇಳಿಕೆ ನೀಡಿರುವ ಕೆಜಿಎಂಒಎ, ಕೇರಳವು ಸಾರ್ವಜನಿಕ ಆರೋಗ್ಯದಲ್ಲಿ, ವಿಶೇಷವಾಗಿ ತಾಯಿ ಮತ್ತು ಶಿಶು ಮರಣಗಳನ್ನು ಕಡಿಮೆ ಮಾಡುವಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸರ್ಕಾರ ಮತ್ತು ಆರೋಗ್ಯ ಕಾರ್ಯಕರ್ತರ ಹಲವು ವರ್ಷಗಳ ಕಠಿಣ ಪರಿಶ್ರಮದ ಮೂಲಕ ಈ ಸಾಧನೆಗಳು ಸಾಧ್ಯವಾಗಿವೆ ಎಂದಿದೆ.

“ಈ ಬೆಳವಣಿಗೆಗಳಿಂದ ಪ್ರತಿಯೊಬ್ಬ ನಾಗರಿಕನೂ ಪ್ರಯೋಜನ ಪಡೆಯಲು ಅರ್ಹ. ಆದರೆ, ಕೆಲವು ಜನರು ಜೀವಗಳನ್ನು ಅಪಾಯಕ್ಕೆ ಸಿಲುಕಿಸುವ ಹಿಂದುಳಿದ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆಜಿಎಂಒಎ ಪ್ರಕಾರ, ಕೇರಳದಲ್ಲಿ ಪ್ರತಿ ವರ್ಷ ಸುಮಾರು 3,00,000 ಹೆರಿಗೆಗಳು ನಡೆಯುತ್ತವೆ. ಅವುಗಳಲ್ಲಿ ಹೆಚ್ಚಿನವು ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದರೂ, ಸುಮಾರು 500 ಹೆರಿಗೆಗಳು ಇನ್ನೂ ಮನೆಯಲ್ಲಿಯೇ ಸಂಭವಿಸುತ್ತವೆ. ಇದರ ಹಿಂದಿನ ಕಾರಣವೆಂದರೆ ಅವೈಜ್ಞಾನಿಕ ಚಿಕಿತ್ಸಾ ವಿಧಾನಗಳಲ್ಲಿ ಕುರುಡು ನಂಬಿಕೆ ಅಥವಾ ಕೆಲವು ಗುಂಪುಗಳು ಅಥವಾ ವ್ಯಕ್ತಿಗಳು ಹರಡುವ ತಪ್ಪು ಮಾಹಿತಿ ಎಂದು ಅವರು ಹೇಳಿದರು.

ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರ ಪ್ರತಿ ಮಗು ಮತ್ತು ತಾಯಿಗೆ ಸರಿಯಾದ ವೈದ್ಯಕೀಯ ಆರೈಕೆ ಪಡೆಯುವ ಹಕ್ಕಿದೆ. ಅವರ ಈ ಹಕ್ಕನ್ನು ನಿರಾಕರಿಸುವುದನ್ನು ಗಂಭೀರ ಅಪರಾಧವೆಂದು ನೋಡಬೇಕು ಎಂದು ಸಂಘವು ಹೇಳಿದೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ಮನೆ ಹೆರಿಗೆಗಳನ್ನು ಪ್ರಚಾರ ಮಾಡುವ ಜನರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಅಂತಹ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಮಹಿಳೆಯ ಗಂಡನನ್ನು ವಶಕ್ಕೆ ತೆಗೆದುಕೊಂಡು ಅಪರಾಧಿಕ ನರಹತ್ಯೆಯ ಆರೋಪ ಹೊರಿಸಲಾಗಿದೆ ಎಂದು ಸಚಿವರು ದೃಢಪಡಿಸಿದರು.

ಈ ವರ್ಷ ಇಲ್ಲಿಯವರೆಗೆ, ಕೇರಳವು ಸುಮಾರು ಎರಡು ಲಕ್ಷ ಹೆರಿಗೆಗಳನ್ನು ದಾಖಲಿಸಿದೆ. ಅವುಗಳಲ್ಲಿ 382 ಮನೆಯಲ್ಲಿಯೇ ನಡೆದಿವೆ. ಅಸುರಕ್ಷಿತ ಮತ್ತು ಅವೈಜ್ಞಾನಿಕ ಮನೆ ಹೆರಿಗೆಗಳನ್ನು ತಡೆಯುವ ಜೊತೆಗೆ, ತಾಯಂದಿರು ಮತ್ತು ಮಕ್ಕಳ ಜೀವಗಳನ್ನು ರಕ್ಷಿಸಲು ಸರ್ಕಾರವು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಈಗ ಸಂಘ ಒತ್ತಾಯಿಸಲಾಗುತ್ತಿದೆ.

‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...