Homeಮುಖಪುಟಪಿಣರಾಯಿ ವಿಜಯನ್ ಸಂಪುಟಕ್ಕೆ ಕೇರಳ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌‌ ರಾಜೀನಾಮೆ!

ಪಿಣರಾಯಿ ವಿಜಯನ್ ಸಂಪುಟಕ್ಕೆ ಕೇರಳ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌‌ ರಾಜೀನಾಮೆ!

- Advertisement -
- Advertisement -

ಕೇರಳ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ಅವರು ಮಂಗಳವಾರ ಪಿಣರಾಯಿ ವಿಜಯನ್ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ಸಂಬಂಧಿಕರ ಪರವಾಗಿ ಕೆಲಸಗಳನ್ನು ಮಾಡಿ ಕೊಟ್ಟಿದ್ದಾರೆ ಎಂದು ರಾಜ್ಯ ಲೋಕಾಯುಕ್ತವು ಹೇಳಿದ ನಂತರ ಅವರು ರಾಜೀನಾಮೆ ನೀಡಿದ್ದಾರೆ.

ಸಚಿವ ಜಲೀಲ್ ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿಗೆ ಕಳುಹಿಸಿದ್ದಾರೆ ಮತ್ತು ಅದನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ಜೊತೆಗೆ ಈ ಬೆಳವಣಿಗೆಯನ್ನು ಸಚಿವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಮೇ 2 ರೊಳಗೆ ರಾಜ್ಯಸಭಾ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಕೇರಳ ಹೈಕೋರ್ಟ್ ಆದೇಶ

ಜಲೀಲ್ ಅವರು ತಮ್ಮ ವಿರುದ್ದದ ಲೋಕಾಯುಕ್ತ ಆದೇಶವನ್ನು ತಡೆಹಿಡಿಯಬೇಕೆಂದು ಕೋರಿ ಕೇರಳ ಹೈಕೋರ್ಟ್‌ಗೆ ತೆರಳಿದ ಒಂದು ದಿನದ ನಂತರ ರಾಜೀನಾಮೆ ನೀಡಲಾಗಿದೆ.

ಲೋಕಾಯುಕ್ತ ವಿಭಾಗೀಯ ಪೀಠವು ಶುಕ್ರವಾರ ಜಲೀಲ್ ವಿರುದ್ಧದ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿ, ಸಚಿವರು ತಮ್ಮ ಹುದ್ದೆಯಲ್ಲಿ ಮುಂದುವರಿಯಬಾರದು ಎಂದು ಹೇಳಿದ್ದರು.

ಸಚಿವರ ವಿರುದ್ಧ ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಆರೋಪ ಸಾಬೀತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.

ಜಲೀಲ್ ಅವರ ಸೋದರ ಸಂಬಂಧಿ ಆದೀಬ್ ಅವರನ್ನು ಕೇರಳ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ಹಣಕಾಸು ನಿಗಮದಲ್ಲಿ ಜನರಲ್ ಮ್ಯಾನೇಜರ್ ಆಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಮುಸ್ಲಿಂ ಯೂತ್ ಲೀಗ್ ಮುಖಂಡರು 2018 ರ ನವೆಂಬರ್‌ನಲ್ಲಿ ಸಲ್ಲಿಸಿದ್ದ ದೂರಿನ ಮೇರೆಗೆ ಲೋಕಾಯುಕ್ತ ತೀರ್ಪು ನೀಡಿತ್ತು.

ನೇಮಕಾತಿ ಮಾಡಿದಾಗ ಆದೀಬ್ ಖಾಸಗಿ ಬ್ಯಾಂಕಿನ ವ್ಯವಸ್ಥಾಪಕರಾಗಿದ್ದರು.

ಇದನ್ನೂ ಓದಿ: ಕೊರೊನಾ ಉಲ್ಬಣ: ನಿರ್ಬಂಧಗಳನ್ನು ಹೆಚ್ಚಿಸಿದ ಕೇರಳ ಸರ್ಕಾರ

ವಿದ್ಯಾರ್ಥಿಗಳಿಬ್ಬರ ನೃತ್ಯಕ್ಕೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರಿಗೆ ಕೇರಳ ಪ್ರತಿರೋಧಿಸಿದ್ದು ಹೇಗೆ ಗೊತ್ತೇ? ವಿಡಿಯೋ ನೋಡಿ>>

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...