Homeಮುಖಪುಟಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

- Advertisement -
- Advertisement -

ಎಲ್‌ಡಿಎಫ್ (ಎಡಪಕ್ಷಗಳ ನೇತೃತ್ವದ ರಂಗ) ಮತ್ತು ಯುಡಿಎಫ್ (ಕಾಂಗ್ರೆಸ್ ನೇತೃತ್ವದ ರಂಗ) ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಾರದ ಅಂತ್ಯದ ವೇಳೆಗೆ ಆಯಾ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ನಂತರ ಎರಡು ರಂಗಗಳು ಕೇರಳದ 140 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೆಚ್ಚು ವಿವಾದಾತ್ಮಕ ಪ್ರಕ್ರಿಯೆಗೆ ಕೈ ಹಾಕಲಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಮಹಿಳೆಯರು ಮತ್ತು ಯುವಕರನ್ನು ಸೇರಿಸಲು ಎರಡೂ ರಂಗಗಳ ನಾಯಕತ್ವದ ಮೇಲೆ ಕಾರ್ಯಕರ್ತರ ಒತ್ತಡವಿದೆ.

ಎಲ್‌ಡಿಎಫ್‌ ಪರಿಸ್ಥಿತಿ

ಎಲ್‌ಡಿಎಫ್‌ಗೆ ಸೀಟು ವಿತರಣೆಯಲ್ಲಿನ ದೊಡ್ಡ ಸವಾಲು ಕೇರಳ ಕಾಂಗ್ರೆಸ್ (ಎಂ) ಪಕ್ಷ. ಜೋಸ್ ಕೆ ಮಣಿ ನೇತೃತ್ವದ ಪ್ರಾದೇಶಿಕ ಪಕ್ಷವು ಕೇಂದ್ರ ಕೇರಳದ ಕ್ಯಾಥೊಲಿಕ್ ಕ್ರಿಶ್ಚಿಯನ್ ಮತದಾರರಲ್ಲಿ ಪ್ರಭಾವ ಹೊಂದುತ್ತಿದೆ. ಕಾಂಗ್ರೆಸ್ಸಿನ ದೀರ್ಘಕಾಲದ ಮಿತ್ರಪಕ್ಷವಾಗಿದ್ದ ಕೆಸಿ (ಎಂ) ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಪಿಎಂ ನೇತೃತ್ವದ ಎಡರಂಗದೊಡನೆ ಸೇರಿದೆ.

ಕೆಸಿ (ಎಂ) 15 ಸ್ಥಾನಗಳಿಗೆ ಒತ್ತಡ ಹೇರಿದರೆ, ಒಕ್ಕೂಟದ ಪ್ರಧಾನ ಪಕ್ಷವಾದ ಸಿಪಿಎಂ ಅದನ್ನು 10 ಸ್ಥಾನಗಳಿಗಿಂತ ಕಡಿಮೆ ಮಾಡಲು ಬಯಸಿದೆ. ಸಿಪಿಎಂ, ಸಿಪಿಐ ಪಕ್ಷಗಳು ಕೆಸಿ (ಎಂ) ಗೆ ಸ್ಥಳಾವಕಾಶ ಕಲ್ಪಿಸಲು ತಮ್ಮದೇ ಆದ ಕೆಲವು ಕ್ಷೇತ್ರಗಳನ್ನು ಕೈ ಬಿಡಬೇಕಾಗುತ್ತದೆ. ಕಳೆದ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ್ದ ಕಾಂಜಿರಪ್ಪಲ್ಲಿ, ಇರಿಕೂರ್ ಮತ್ತು ಕಳೆದ ಬಾರಿ ಸಿಪಿಎಂ ವಲಯದಲ್ಲಿದ್ದ ಇರಿಂಜಲಕುಡ, ತಾಲಿಪರಂಬ, ಅಲತೂರ್ ಮತ್ತು ಎಟ್ಟುಮನೂರ್ ಮುಂತಾದ ಸ್ಥಾನಗಳು ಕೆಸಿ (ಎಂ) ಗೆ ಹೋಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಸಿಪಿಎಂ ಮತ್ತು ಸಿಪಿಐ 2016 ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳ ಮೇಲೆ ಹೋರಾಡುವ ಸಾಧ್ಯತೆಯಿದೆ.

ಹೊಸದಾಗಿ ಒಡಮೂಡಿರುವ ಮಿತ್ರಪಕ್ಷಗಳಾದ ಲೋಕ್ ತಾಂತ್ರಿಕ್ ಜನತಾದಳ (ಎಲ್‌ಜೆಡಿ), ಜನತಾದಳ (ಎಸ್) ಮತ್ತು ಎನ್‌ಸಿಪಿಯಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಪ್ರಶ್ನೆಯೂ ಇದೆ. ಅವರು ಸಾಮೂಹಿಕ ನೆಲೆ ಹೊಂದಿರುವ ಪಕ್ಷಗಳಲ್ಲ. ಆದರೆ ಆಯ್ದ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ವೈಯಕ್ತಿಕ ನಾಯಕರನ್ನು ಹೊಂದಿದ್ದಾರೆ.

ಸಿಪಿಎಂ ಪಕ್ಷವು ಎಲ್‌ಜೆಡಿ ಮತ್ತು ಜೆಡಿ (ಎಸ್) ಗಳನ್ನು ವಿಲೀನಗೊಳಿಸುವಂತೆ ನಿರ್ದೇಶಿಸಿತ್ತು. ಏಕೆಂದರೆ ಅವೆರಡೂ ಸಮಾಜವಾದಿ ಪಕ್ಷಗಳಾಗಿದ್ದು ಜನತಾದಳದಿಂದ ಹೊರಬಂದಿವೆ. ಆದರೆ ಎರಡು ಪಕ್ಷಗಳ ನಾಯಕತ್ವವು ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಈ ಪಕ್ಷಗಳಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಮತ್ತೊಮ್ಮೆ ಸಿಪಿಐ (ಎಂ) ವೆಚ್ಚದಲ್ಲಿ ನಡೆಯಲಿದೆ. ತಿರುವಲ್ಲಾ, ಅಂಬಲಪುಳ, ವಟಕರ ಮತ್ತು ಕೂತುಪರಂಬು ಮುಂತಾದ ಕ್ಷೇತ್ರಗಳಲ್ಲಿ ಇದಕ್ಕಾಗಿ ಚೌಕಾಶಿ ನಡೆಯಲಿದೆ.

ಯುಡಿಎಫ್‌ ಪರಿಸ್ಥಿತಿ

ಯುಡಿಎಫ್‌ಗೆ ಸಂಬಂಧಿಸಿದಂತೆ, ಸೀಟು ಹಂಚಿಕೆ ಕುರಿತು ಮಾತುಕತೆ ಮುಖ್ಯವಾಗಿ 15 ಸ್ಥಾನಗಳನ್ನು ಬಯಸುವ ಕೇರಳ ಕಾಂಗ್ರೆಸ್ (ಜೋಸೆಫ್) ಪಕ್ಷದೊಂದಿಗೆ ಅಡೆತಡೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ನಾಯಕತ್ವವು ಆ ಪಕ್ಷದ ಮಿತಿಗಳನ್ನು ಅರ್ಥಮಾಡಿಕೊಂಡಂತೆ 8 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಿರಲು ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.

ಕೆಲವು ಕೆಸಿ (ಜೆ) ಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಸ್ಥಾನಗಳನ್ನು ಗೆಲ್ಲಲು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕತ್ವದೊಳಗೆ ಆಲೋಚನೆ ಇವೆ.. ಅದೇ ಸಮಯದಲ್ಲಿ, ಕೆಸಿ (ಜೆ) ಮೈತ್ರಿ ಮುರಿದುಕೊಂಡು ಬಂಡಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಷ್ಟ ಎಂಬ ಅರಿವೂ ಯುಡಿಎಫ್‌ಗೆ ಇದೆ. ಇರಿಂಜಲಕುಡ, ಮುವಾಟ್ಟುಪುಳ ಮತ್ತು ಕೊಠಮಂಗಲಂ ಮುಂತಾದ ಸ್ಥಾನಗಳ ಬಗ್ಗೆ ವಿವಾದಗಳು ಉದ್ಭವಿಸುವ ನಿರೀಕ್ಷೆಯಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಅಂತಿಮಗೊಂಡಿದೆ, ಇದು ಹೆಚ್ಚಾಗಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಇದು 2016 ರಲ್ಲಿ ಹೋರಾಡಿದ್ದಕ್ಕಿಂತ ಮೂರು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಸ್ಥಾನ ಹಂಚಿಕೆ ಖಚಿತವಾದ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮುಂದಿನ ವಾರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಿದೆ. 14 ಜಿಲ್ಲೆಗಳಲ್ಲಿ ತಲಾ ಒಬ್ಬರು ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸುವಂತೆ ಎಐಸಿಸಿ ರಾಜ್ಯ ನಾಯಕತ್ವವನ್ನು ಕೇಳಿದೆ. ಪಕ್ಷದ ಒಳಗಿನವರ ಪ್ರಕಾರ ಹೆಚ್ಚಿನ ಯುವ ಪ್ರಾತಿನಿಧ್ಯ ಇರಲಿದೆ ಮತ್ತು ಕೆಲವು ಪ್ರಸಿದ್ಧ ಅಭ್ಯರ್ಥಿಗಳು ಸಹ ಇರುತ್ತಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತೊಮ್ಮೆ ಹರಿಪಾದ್‌ನಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ಪುತ್ತುಪ್ಪಳ್ಳಿಯಿಂದ ಹೋರಾಡುತ್ತಾರೆಯೇ ಅಥವಾ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಪಕ್ಷದಿಂದ ಕಸಿದುಕೊಳ್ಳುವ ಕಠಿಣ ಸ್ಥಾನಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಅಭ್ಯರ್ಥಿಯಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ದೃಢೀಕರಣ ಕಂಡುಬಂದಿಲ್ಲ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಕಾಂಗ್ರೆಸ್‌ನ ಅಮರಿಂದರ್ ಸಿಂಗ್ ಪರ ಮತ್ತೆ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...