Homeಮುಖಪುಟಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

- Advertisement -
- Advertisement -

ಎಲ್‌ಡಿಎಫ್ (ಎಡಪಕ್ಷಗಳ ನೇತೃತ್ವದ ರಂಗ) ಮತ್ತು ಯುಡಿಎಫ್ (ಕಾಂಗ್ರೆಸ್ ನೇತೃತ್ವದ ರಂಗ) ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಾರದ ಅಂತ್ಯದ ವೇಳೆಗೆ ಆಯಾ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ನಂತರ ಎರಡು ರಂಗಗಳು ಕೇರಳದ 140 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೆಚ್ಚು ವಿವಾದಾತ್ಮಕ ಪ್ರಕ್ರಿಯೆಗೆ ಕೈ ಹಾಕಲಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಮಹಿಳೆಯರು ಮತ್ತು ಯುವಕರನ್ನು ಸೇರಿಸಲು ಎರಡೂ ರಂಗಗಳ ನಾಯಕತ್ವದ ಮೇಲೆ ಕಾರ್ಯಕರ್ತರ ಒತ್ತಡವಿದೆ.

ಎಲ್‌ಡಿಎಫ್‌ ಪರಿಸ್ಥಿತಿ

ಎಲ್‌ಡಿಎಫ್‌ಗೆ ಸೀಟು ವಿತರಣೆಯಲ್ಲಿನ ದೊಡ್ಡ ಸವಾಲು ಕೇರಳ ಕಾಂಗ್ರೆಸ್ (ಎಂ) ಪಕ್ಷ. ಜೋಸ್ ಕೆ ಮಣಿ ನೇತೃತ್ವದ ಪ್ರಾದೇಶಿಕ ಪಕ್ಷವು ಕೇಂದ್ರ ಕೇರಳದ ಕ್ಯಾಥೊಲಿಕ್ ಕ್ರಿಶ್ಚಿಯನ್ ಮತದಾರರಲ್ಲಿ ಪ್ರಭಾವ ಹೊಂದುತ್ತಿದೆ. ಕಾಂಗ್ರೆಸ್ಸಿನ ದೀರ್ಘಕಾಲದ ಮಿತ್ರಪಕ್ಷವಾಗಿದ್ದ ಕೆಸಿ (ಎಂ) ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಪಿಎಂ ನೇತೃತ್ವದ ಎಡರಂಗದೊಡನೆ ಸೇರಿದೆ.

ಕೆಸಿ (ಎಂ) 15 ಸ್ಥಾನಗಳಿಗೆ ಒತ್ತಡ ಹೇರಿದರೆ, ಒಕ್ಕೂಟದ ಪ್ರಧಾನ ಪಕ್ಷವಾದ ಸಿಪಿಎಂ ಅದನ್ನು 10 ಸ್ಥಾನಗಳಿಗಿಂತ ಕಡಿಮೆ ಮಾಡಲು ಬಯಸಿದೆ. ಸಿಪಿಎಂ, ಸಿಪಿಐ ಪಕ್ಷಗಳು ಕೆಸಿ (ಎಂ) ಗೆ ಸ್ಥಳಾವಕಾಶ ಕಲ್ಪಿಸಲು ತಮ್ಮದೇ ಆದ ಕೆಲವು ಕ್ಷೇತ್ರಗಳನ್ನು ಕೈ ಬಿಡಬೇಕಾಗುತ್ತದೆ. ಕಳೆದ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ್ದ ಕಾಂಜಿರಪ್ಪಲ್ಲಿ, ಇರಿಕೂರ್ ಮತ್ತು ಕಳೆದ ಬಾರಿ ಸಿಪಿಎಂ ವಲಯದಲ್ಲಿದ್ದ ಇರಿಂಜಲಕುಡ, ತಾಲಿಪರಂಬ, ಅಲತೂರ್ ಮತ್ತು ಎಟ್ಟುಮನೂರ್ ಮುಂತಾದ ಸ್ಥಾನಗಳು ಕೆಸಿ (ಎಂ) ಗೆ ಹೋಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಸಿಪಿಎಂ ಮತ್ತು ಸಿಪಿಐ 2016 ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳ ಮೇಲೆ ಹೋರಾಡುವ ಸಾಧ್ಯತೆಯಿದೆ.

ಹೊಸದಾಗಿ ಒಡಮೂಡಿರುವ ಮಿತ್ರಪಕ್ಷಗಳಾದ ಲೋಕ್ ತಾಂತ್ರಿಕ್ ಜನತಾದಳ (ಎಲ್‌ಜೆಡಿ), ಜನತಾದಳ (ಎಸ್) ಮತ್ತು ಎನ್‌ಸಿಪಿಯಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಪ್ರಶ್ನೆಯೂ ಇದೆ. ಅವರು ಸಾಮೂಹಿಕ ನೆಲೆ ಹೊಂದಿರುವ ಪಕ್ಷಗಳಲ್ಲ. ಆದರೆ ಆಯ್ದ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ವೈಯಕ್ತಿಕ ನಾಯಕರನ್ನು ಹೊಂದಿದ್ದಾರೆ.

ಸಿಪಿಎಂ ಪಕ್ಷವು ಎಲ್‌ಜೆಡಿ ಮತ್ತು ಜೆಡಿ (ಎಸ್) ಗಳನ್ನು ವಿಲೀನಗೊಳಿಸುವಂತೆ ನಿರ್ದೇಶಿಸಿತ್ತು. ಏಕೆಂದರೆ ಅವೆರಡೂ ಸಮಾಜವಾದಿ ಪಕ್ಷಗಳಾಗಿದ್ದು ಜನತಾದಳದಿಂದ ಹೊರಬಂದಿವೆ. ಆದರೆ ಎರಡು ಪಕ್ಷಗಳ ನಾಯಕತ್ವವು ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಈ ಪಕ್ಷಗಳಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಮತ್ತೊಮ್ಮೆ ಸಿಪಿಐ (ಎಂ) ವೆಚ್ಚದಲ್ಲಿ ನಡೆಯಲಿದೆ. ತಿರುವಲ್ಲಾ, ಅಂಬಲಪುಳ, ವಟಕರ ಮತ್ತು ಕೂತುಪರಂಬು ಮುಂತಾದ ಕ್ಷೇತ್ರಗಳಲ್ಲಿ ಇದಕ್ಕಾಗಿ ಚೌಕಾಶಿ ನಡೆಯಲಿದೆ.

ಯುಡಿಎಫ್‌ ಪರಿಸ್ಥಿತಿ

ಯುಡಿಎಫ್‌ಗೆ ಸಂಬಂಧಿಸಿದಂತೆ, ಸೀಟು ಹಂಚಿಕೆ ಕುರಿತು ಮಾತುಕತೆ ಮುಖ್ಯವಾಗಿ 15 ಸ್ಥಾನಗಳನ್ನು ಬಯಸುವ ಕೇರಳ ಕಾಂಗ್ರೆಸ್ (ಜೋಸೆಫ್) ಪಕ್ಷದೊಂದಿಗೆ ಅಡೆತಡೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ನಾಯಕತ್ವವು ಆ ಪಕ್ಷದ ಮಿತಿಗಳನ್ನು ಅರ್ಥಮಾಡಿಕೊಂಡಂತೆ 8 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಿರಲು ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.

ಕೆಲವು ಕೆಸಿ (ಜೆ) ಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಸ್ಥಾನಗಳನ್ನು ಗೆಲ್ಲಲು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕತ್ವದೊಳಗೆ ಆಲೋಚನೆ ಇವೆ.. ಅದೇ ಸಮಯದಲ್ಲಿ, ಕೆಸಿ (ಜೆ) ಮೈತ್ರಿ ಮುರಿದುಕೊಂಡು ಬಂಡಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಷ್ಟ ಎಂಬ ಅರಿವೂ ಯುಡಿಎಫ್‌ಗೆ ಇದೆ. ಇರಿಂಜಲಕುಡ, ಮುವಾಟ್ಟುಪುಳ ಮತ್ತು ಕೊಠಮಂಗಲಂ ಮುಂತಾದ ಸ್ಥಾನಗಳ ಬಗ್ಗೆ ವಿವಾದಗಳು ಉದ್ಭವಿಸುವ ನಿರೀಕ್ಷೆಯಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಅಂತಿಮಗೊಂಡಿದೆ, ಇದು ಹೆಚ್ಚಾಗಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಇದು 2016 ರಲ್ಲಿ ಹೋರಾಡಿದ್ದಕ್ಕಿಂತ ಮೂರು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಸ್ಥಾನ ಹಂಚಿಕೆ ಖಚಿತವಾದ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮುಂದಿನ ವಾರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಿದೆ. 14 ಜಿಲ್ಲೆಗಳಲ್ಲಿ ತಲಾ ಒಬ್ಬರು ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸುವಂತೆ ಎಐಸಿಸಿ ರಾಜ್ಯ ನಾಯಕತ್ವವನ್ನು ಕೇಳಿದೆ. ಪಕ್ಷದ ಒಳಗಿನವರ ಪ್ರಕಾರ ಹೆಚ್ಚಿನ ಯುವ ಪ್ರಾತಿನಿಧ್ಯ ಇರಲಿದೆ ಮತ್ತು ಕೆಲವು ಪ್ರಸಿದ್ಧ ಅಭ್ಯರ್ಥಿಗಳು ಸಹ ಇರುತ್ತಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತೊಮ್ಮೆ ಹರಿಪಾದ್‌ನಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ಪುತ್ತುಪ್ಪಳ್ಳಿಯಿಂದ ಹೋರಾಡುತ್ತಾರೆಯೇ ಅಥವಾ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಪಕ್ಷದಿಂದ ಕಸಿದುಕೊಳ್ಳುವ ಕಠಿಣ ಸ್ಥಾನಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಅಭ್ಯರ್ಥಿಯಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ದೃಢೀಕರಣ ಕಂಡುಬಂದಿಲ್ಲ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಕಾಂಗ್ರೆಸ್‌ನ ಅಮರಿಂದರ್ ಸಿಂಗ್ ಪರ ಮತ್ತೆ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...