Homeಮುಖಪುಟಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

- Advertisement -
- Advertisement -

ಎಲ್‌ಡಿಎಫ್ (ಎಡಪಕ್ಷಗಳ ನೇತೃತ್ವದ ರಂಗ) ಮತ್ತು ಯುಡಿಎಫ್ (ಕಾಂಗ್ರೆಸ್ ನೇತೃತ್ವದ ರಂಗ) ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಾರದ ಅಂತ್ಯದ ವೇಳೆಗೆ ಆಯಾ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ನಂತರ ಎರಡು ರಂಗಗಳು ಕೇರಳದ 140 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೆಚ್ಚು ವಿವಾದಾತ್ಮಕ ಪ್ರಕ್ರಿಯೆಗೆ ಕೈ ಹಾಕಲಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಮಹಿಳೆಯರು ಮತ್ತು ಯುವಕರನ್ನು ಸೇರಿಸಲು ಎರಡೂ ರಂಗಗಳ ನಾಯಕತ್ವದ ಮೇಲೆ ಕಾರ್ಯಕರ್ತರ ಒತ್ತಡವಿದೆ.

ಎಲ್‌ಡಿಎಫ್‌ ಪರಿಸ್ಥಿತಿ

ಎಲ್‌ಡಿಎಫ್‌ಗೆ ಸೀಟು ವಿತರಣೆಯಲ್ಲಿನ ದೊಡ್ಡ ಸವಾಲು ಕೇರಳ ಕಾಂಗ್ರೆಸ್ (ಎಂ) ಪಕ್ಷ. ಜೋಸ್ ಕೆ ಮಣಿ ನೇತೃತ್ವದ ಪ್ರಾದೇಶಿಕ ಪಕ್ಷವು ಕೇಂದ್ರ ಕೇರಳದ ಕ್ಯಾಥೊಲಿಕ್ ಕ್ರಿಶ್ಚಿಯನ್ ಮತದಾರರಲ್ಲಿ ಪ್ರಭಾವ ಹೊಂದುತ್ತಿದೆ. ಕಾಂಗ್ರೆಸ್ಸಿನ ದೀರ್ಘಕಾಲದ ಮಿತ್ರಪಕ್ಷವಾಗಿದ್ದ ಕೆಸಿ (ಎಂ) ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಪಿಎಂ ನೇತೃತ್ವದ ಎಡರಂಗದೊಡನೆ ಸೇರಿದೆ.

ಕೆಸಿ (ಎಂ) 15 ಸ್ಥಾನಗಳಿಗೆ ಒತ್ತಡ ಹೇರಿದರೆ, ಒಕ್ಕೂಟದ ಪ್ರಧಾನ ಪಕ್ಷವಾದ ಸಿಪಿಎಂ ಅದನ್ನು 10 ಸ್ಥಾನಗಳಿಗಿಂತ ಕಡಿಮೆ ಮಾಡಲು ಬಯಸಿದೆ. ಸಿಪಿಎಂ, ಸಿಪಿಐ ಪಕ್ಷಗಳು ಕೆಸಿ (ಎಂ) ಗೆ ಸ್ಥಳಾವಕಾಶ ಕಲ್ಪಿಸಲು ತಮ್ಮದೇ ಆದ ಕೆಲವು ಕ್ಷೇತ್ರಗಳನ್ನು ಕೈ ಬಿಡಬೇಕಾಗುತ್ತದೆ. ಕಳೆದ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ್ದ ಕಾಂಜಿರಪ್ಪಲ್ಲಿ, ಇರಿಕೂರ್ ಮತ್ತು ಕಳೆದ ಬಾರಿ ಸಿಪಿಎಂ ವಲಯದಲ್ಲಿದ್ದ ಇರಿಂಜಲಕುಡ, ತಾಲಿಪರಂಬ, ಅಲತೂರ್ ಮತ್ತು ಎಟ್ಟುಮನೂರ್ ಮುಂತಾದ ಸ್ಥಾನಗಳು ಕೆಸಿ (ಎಂ) ಗೆ ಹೋಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಸಿಪಿಎಂ ಮತ್ತು ಸಿಪಿಐ 2016 ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳ ಮೇಲೆ ಹೋರಾಡುವ ಸಾಧ್ಯತೆಯಿದೆ.

ಹೊಸದಾಗಿ ಒಡಮೂಡಿರುವ ಮಿತ್ರಪಕ್ಷಗಳಾದ ಲೋಕ್ ತಾಂತ್ರಿಕ್ ಜನತಾದಳ (ಎಲ್‌ಜೆಡಿ), ಜನತಾದಳ (ಎಸ್) ಮತ್ತು ಎನ್‌ಸಿಪಿಯಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಪ್ರಶ್ನೆಯೂ ಇದೆ. ಅವರು ಸಾಮೂಹಿಕ ನೆಲೆ ಹೊಂದಿರುವ ಪಕ್ಷಗಳಲ್ಲ. ಆದರೆ ಆಯ್ದ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ವೈಯಕ್ತಿಕ ನಾಯಕರನ್ನು ಹೊಂದಿದ್ದಾರೆ.

ಸಿಪಿಎಂ ಪಕ್ಷವು ಎಲ್‌ಜೆಡಿ ಮತ್ತು ಜೆಡಿ (ಎಸ್) ಗಳನ್ನು ವಿಲೀನಗೊಳಿಸುವಂತೆ ನಿರ್ದೇಶಿಸಿತ್ತು. ಏಕೆಂದರೆ ಅವೆರಡೂ ಸಮಾಜವಾದಿ ಪಕ್ಷಗಳಾಗಿದ್ದು ಜನತಾದಳದಿಂದ ಹೊರಬಂದಿವೆ. ಆದರೆ ಎರಡು ಪಕ್ಷಗಳ ನಾಯಕತ್ವವು ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಈ ಪಕ್ಷಗಳಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಮತ್ತೊಮ್ಮೆ ಸಿಪಿಐ (ಎಂ) ವೆಚ್ಚದಲ್ಲಿ ನಡೆಯಲಿದೆ. ತಿರುವಲ್ಲಾ, ಅಂಬಲಪುಳ, ವಟಕರ ಮತ್ತು ಕೂತುಪರಂಬು ಮುಂತಾದ ಕ್ಷೇತ್ರಗಳಲ್ಲಿ ಇದಕ್ಕಾಗಿ ಚೌಕಾಶಿ ನಡೆಯಲಿದೆ.

ಯುಡಿಎಫ್‌ ಪರಿಸ್ಥಿತಿ

ಯುಡಿಎಫ್‌ಗೆ ಸಂಬಂಧಿಸಿದಂತೆ, ಸೀಟು ಹಂಚಿಕೆ ಕುರಿತು ಮಾತುಕತೆ ಮುಖ್ಯವಾಗಿ 15 ಸ್ಥಾನಗಳನ್ನು ಬಯಸುವ ಕೇರಳ ಕಾಂಗ್ರೆಸ್ (ಜೋಸೆಫ್) ಪಕ್ಷದೊಂದಿಗೆ ಅಡೆತಡೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ನಾಯಕತ್ವವು ಆ ಪಕ್ಷದ ಮಿತಿಗಳನ್ನು ಅರ್ಥಮಾಡಿಕೊಂಡಂತೆ 8 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಿರಲು ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.

ಕೆಲವು ಕೆಸಿ (ಜೆ) ಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಸ್ಥಾನಗಳನ್ನು ಗೆಲ್ಲಲು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕತ್ವದೊಳಗೆ ಆಲೋಚನೆ ಇವೆ.. ಅದೇ ಸಮಯದಲ್ಲಿ, ಕೆಸಿ (ಜೆ) ಮೈತ್ರಿ ಮುರಿದುಕೊಂಡು ಬಂಡಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಷ್ಟ ಎಂಬ ಅರಿವೂ ಯುಡಿಎಫ್‌ಗೆ ಇದೆ. ಇರಿಂಜಲಕುಡ, ಮುವಾಟ್ಟುಪುಳ ಮತ್ತು ಕೊಠಮಂಗಲಂ ಮುಂತಾದ ಸ್ಥಾನಗಳ ಬಗ್ಗೆ ವಿವಾದಗಳು ಉದ್ಭವಿಸುವ ನಿರೀಕ್ಷೆಯಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಅಂತಿಮಗೊಂಡಿದೆ, ಇದು ಹೆಚ್ಚಾಗಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಇದು 2016 ರಲ್ಲಿ ಹೋರಾಡಿದ್ದಕ್ಕಿಂತ ಮೂರು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಸ್ಥಾನ ಹಂಚಿಕೆ ಖಚಿತವಾದ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮುಂದಿನ ವಾರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಿದೆ. 14 ಜಿಲ್ಲೆಗಳಲ್ಲಿ ತಲಾ ಒಬ್ಬರು ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸುವಂತೆ ಎಐಸಿಸಿ ರಾಜ್ಯ ನಾಯಕತ್ವವನ್ನು ಕೇಳಿದೆ. ಪಕ್ಷದ ಒಳಗಿನವರ ಪ್ರಕಾರ ಹೆಚ್ಚಿನ ಯುವ ಪ್ರಾತಿನಿಧ್ಯ ಇರಲಿದೆ ಮತ್ತು ಕೆಲವು ಪ್ರಸಿದ್ಧ ಅಭ್ಯರ್ಥಿಗಳು ಸಹ ಇರುತ್ತಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತೊಮ್ಮೆ ಹರಿಪಾದ್‌ನಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ಪುತ್ತುಪ್ಪಳ್ಳಿಯಿಂದ ಹೋರಾಡುತ್ತಾರೆಯೇ ಅಥವಾ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಪಕ್ಷದಿಂದ ಕಸಿದುಕೊಳ್ಳುವ ಕಠಿಣ ಸ್ಥಾನಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಅಭ್ಯರ್ಥಿಯಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ದೃಢೀಕರಣ ಕಂಡುಬಂದಿಲ್ಲ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಕಾಂಗ್ರೆಸ್‌ನ ಅಮರಿಂದರ್ ಸಿಂಗ್ ಪರ ಮತ್ತೆ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...