Homeಮುಖಪುಟಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

- Advertisement -
- Advertisement -

ಎಲ್‌ಡಿಎಫ್ (ಎಡಪಕ್ಷಗಳ ನೇತೃತ್ವದ ರಂಗ) ಮತ್ತು ಯುಡಿಎಫ್ (ಕಾಂಗ್ರೆಸ್ ನೇತೃತ್ವದ ರಂಗ) ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಾರದ ಅಂತ್ಯದ ವೇಳೆಗೆ ಆಯಾ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ನಂತರ ಎರಡು ರಂಗಗಳು ಕೇರಳದ 140 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೆಚ್ಚು ವಿವಾದಾತ್ಮಕ ಪ್ರಕ್ರಿಯೆಗೆ ಕೈ ಹಾಕಲಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಮಹಿಳೆಯರು ಮತ್ತು ಯುವಕರನ್ನು ಸೇರಿಸಲು ಎರಡೂ ರಂಗಗಳ ನಾಯಕತ್ವದ ಮೇಲೆ ಕಾರ್ಯಕರ್ತರ ಒತ್ತಡವಿದೆ.

ಎಲ್‌ಡಿಎಫ್‌ ಪರಿಸ್ಥಿತಿ

ಎಲ್‌ಡಿಎಫ್‌ಗೆ ಸೀಟು ವಿತರಣೆಯಲ್ಲಿನ ದೊಡ್ಡ ಸವಾಲು ಕೇರಳ ಕಾಂಗ್ರೆಸ್ (ಎಂ) ಪಕ್ಷ. ಜೋಸ್ ಕೆ ಮಣಿ ನೇತೃತ್ವದ ಪ್ರಾದೇಶಿಕ ಪಕ್ಷವು ಕೇಂದ್ರ ಕೇರಳದ ಕ್ಯಾಥೊಲಿಕ್ ಕ್ರಿಶ್ಚಿಯನ್ ಮತದಾರರಲ್ಲಿ ಪ್ರಭಾವ ಹೊಂದುತ್ತಿದೆ. ಕಾಂಗ್ರೆಸ್ಸಿನ ದೀರ್ಘಕಾಲದ ಮಿತ್ರಪಕ್ಷವಾಗಿದ್ದ ಕೆಸಿ (ಎಂ) ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಪಿಎಂ ನೇತೃತ್ವದ ಎಡರಂಗದೊಡನೆ ಸೇರಿದೆ.

ಕೆಸಿ (ಎಂ) 15 ಸ್ಥಾನಗಳಿಗೆ ಒತ್ತಡ ಹೇರಿದರೆ, ಒಕ್ಕೂಟದ ಪ್ರಧಾನ ಪಕ್ಷವಾದ ಸಿಪಿಎಂ ಅದನ್ನು 10 ಸ್ಥಾನಗಳಿಗಿಂತ ಕಡಿಮೆ ಮಾಡಲು ಬಯಸಿದೆ. ಸಿಪಿಎಂ, ಸಿಪಿಐ ಪಕ್ಷಗಳು ಕೆಸಿ (ಎಂ) ಗೆ ಸ್ಥಳಾವಕಾಶ ಕಲ್ಪಿಸಲು ತಮ್ಮದೇ ಆದ ಕೆಲವು ಕ್ಷೇತ್ರಗಳನ್ನು ಕೈ ಬಿಡಬೇಕಾಗುತ್ತದೆ. ಕಳೆದ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ್ದ ಕಾಂಜಿರಪ್ಪಲ್ಲಿ, ಇರಿಕೂರ್ ಮತ್ತು ಕಳೆದ ಬಾರಿ ಸಿಪಿಎಂ ವಲಯದಲ್ಲಿದ್ದ ಇರಿಂಜಲಕುಡ, ತಾಲಿಪರಂಬ, ಅಲತೂರ್ ಮತ್ತು ಎಟ್ಟುಮನೂರ್ ಮುಂತಾದ ಸ್ಥಾನಗಳು ಕೆಸಿ (ಎಂ) ಗೆ ಹೋಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಸಿಪಿಎಂ ಮತ್ತು ಸಿಪಿಐ 2016 ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳ ಮೇಲೆ ಹೋರಾಡುವ ಸಾಧ್ಯತೆಯಿದೆ.

ಹೊಸದಾಗಿ ಒಡಮೂಡಿರುವ ಮಿತ್ರಪಕ್ಷಗಳಾದ ಲೋಕ್ ತಾಂತ್ರಿಕ್ ಜನತಾದಳ (ಎಲ್‌ಜೆಡಿ), ಜನತಾದಳ (ಎಸ್) ಮತ್ತು ಎನ್‌ಸಿಪಿಯಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಪ್ರಶ್ನೆಯೂ ಇದೆ. ಅವರು ಸಾಮೂಹಿಕ ನೆಲೆ ಹೊಂದಿರುವ ಪಕ್ಷಗಳಲ್ಲ. ಆದರೆ ಆಯ್ದ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ವೈಯಕ್ತಿಕ ನಾಯಕರನ್ನು ಹೊಂದಿದ್ದಾರೆ.

ಸಿಪಿಎಂ ಪಕ್ಷವು ಎಲ್‌ಜೆಡಿ ಮತ್ತು ಜೆಡಿ (ಎಸ್) ಗಳನ್ನು ವಿಲೀನಗೊಳಿಸುವಂತೆ ನಿರ್ದೇಶಿಸಿತ್ತು. ಏಕೆಂದರೆ ಅವೆರಡೂ ಸಮಾಜವಾದಿ ಪಕ್ಷಗಳಾಗಿದ್ದು ಜನತಾದಳದಿಂದ ಹೊರಬಂದಿವೆ. ಆದರೆ ಎರಡು ಪಕ್ಷಗಳ ನಾಯಕತ್ವವು ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಈ ಪಕ್ಷಗಳಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಮತ್ತೊಮ್ಮೆ ಸಿಪಿಐ (ಎಂ) ವೆಚ್ಚದಲ್ಲಿ ನಡೆಯಲಿದೆ. ತಿರುವಲ್ಲಾ, ಅಂಬಲಪುಳ, ವಟಕರ ಮತ್ತು ಕೂತುಪರಂಬು ಮುಂತಾದ ಕ್ಷೇತ್ರಗಳಲ್ಲಿ ಇದಕ್ಕಾಗಿ ಚೌಕಾಶಿ ನಡೆಯಲಿದೆ.

ಯುಡಿಎಫ್‌ ಪರಿಸ್ಥಿತಿ

ಯುಡಿಎಫ್‌ಗೆ ಸಂಬಂಧಿಸಿದಂತೆ, ಸೀಟು ಹಂಚಿಕೆ ಕುರಿತು ಮಾತುಕತೆ ಮುಖ್ಯವಾಗಿ 15 ಸ್ಥಾನಗಳನ್ನು ಬಯಸುವ ಕೇರಳ ಕಾಂಗ್ರೆಸ್ (ಜೋಸೆಫ್) ಪಕ್ಷದೊಂದಿಗೆ ಅಡೆತಡೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ನಾಯಕತ್ವವು ಆ ಪಕ್ಷದ ಮಿತಿಗಳನ್ನು ಅರ್ಥಮಾಡಿಕೊಂಡಂತೆ 8 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಿರಲು ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.

ಕೆಲವು ಕೆಸಿ (ಜೆ) ಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಸ್ಥಾನಗಳನ್ನು ಗೆಲ್ಲಲು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕತ್ವದೊಳಗೆ ಆಲೋಚನೆ ಇವೆ.. ಅದೇ ಸಮಯದಲ್ಲಿ, ಕೆಸಿ (ಜೆ) ಮೈತ್ರಿ ಮುರಿದುಕೊಂಡು ಬಂಡಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಷ್ಟ ಎಂಬ ಅರಿವೂ ಯುಡಿಎಫ್‌ಗೆ ಇದೆ. ಇರಿಂಜಲಕುಡ, ಮುವಾಟ್ಟುಪುಳ ಮತ್ತು ಕೊಠಮಂಗಲಂ ಮುಂತಾದ ಸ್ಥಾನಗಳ ಬಗ್ಗೆ ವಿವಾದಗಳು ಉದ್ಭವಿಸುವ ನಿರೀಕ್ಷೆಯಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಅಂತಿಮಗೊಂಡಿದೆ, ಇದು ಹೆಚ್ಚಾಗಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಇದು 2016 ರಲ್ಲಿ ಹೋರಾಡಿದ್ದಕ್ಕಿಂತ ಮೂರು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಸ್ಥಾನ ಹಂಚಿಕೆ ಖಚಿತವಾದ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮುಂದಿನ ವಾರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಿದೆ. 14 ಜಿಲ್ಲೆಗಳಲ್ಲಿ ತಲಾ ಒಬ್ಬರು ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸುವಂತೆ ಎಐಸಿಸಿ ರಾಜ್ಯ ನಾಯಕತ್ವವನ್ನು ಕೇಳಿದೆ. ಪಕ್ಷದ ಒಳಗಿನವರ ಪ್ರಕಾರ ಹೆಚ್ಚಿನ ಯುವ ಪ್ರಾತಿನಿಧ್ಯ ಇರಲಿದೆ ಮತ್ತು ಕೆಲವು ಪ್ರಸಿದ್ಧ ಅಭ್ಯರ್ಥಿಗಳು ಸಹ ಇರುತ್ತಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತೊಮ್ಮೆ ಹರಿಪಾದ್‌ನಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ಪುತ್ತುಪ್ಪಳ್ಳಿಯಿಂದ ಹೋರಾಡುತ್ತಾರೆಯೇ ಅಥವಾ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಪಕ್ಷದಿಂದ ಕಸಿದುಕೊಳ್ಳುವ ಕಠಿಣ ಸ್ಥಾನಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಅಭ್ಯರ್ಥಿಯಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ದೃಢೀಕರಣ ಕಂಡುಬಂದಿಲ್ಲ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಕಾಂಗ್ರೆಸ್‌ನ ಅಮರಿಂದರ್ ಸಿಂಗ್ ಪರ ಮತ್ತೆ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...