Homeಮುಖಪುಟಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

- Advertisement -
- Advertisement -

ಎಲ್‌ಡಿಎಫ್ (ಎಡಪಕ್ಷಗಳ ನೇತೃತ್ವದ ರಂಗ) ಮತ್ತು ಯುಡಿಎಫ್ (ಕಾಂಗ್ರೆಸ್ ನೇತೃತ್ವದ ರಂಗ) ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಾರದ ಅಂತ್ಯದ ವೇಳೆಗೆ ಆಯಾ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

ನಂತರ ಎರಡು ರಂಗಗಳು ಕೇರಳದ 140 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೆಚ್ಚು ವಿವಾದಾತ್ಮಕ ಪ್ರಕ್ರಿಯೆಗೆ ಕೈ ಹಾಕಲಿವೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚಿನ ಮಹಿಳೆಯರು ಮತ್ತು ಯುವಕರನ್ನು ಸೇರಿಸಲು ಎರಡೂ ರಂಗಗಳ ನಾಯಕತ್ವದ ಮೇಲೆ ಕಾರ್ಯಕರ್ತರ ಒತ್ತಡವಿದೆ.

ಎಲ್‌ಡಿಎಫ್‌ ಪರಿಸ್ಥಿತಿ

ಎಲ್‌ಡಿಎಫ್‌ಗೆ ಸೀಟು ವಿತರಣೆಯಲ್ಲಿನ ದೊಡ್ಡ ಸವಾಲು ಕೇರಳ ಕಾಂಗ್ರೆಸ್ (ಎಂ) ಪಕ್ಷ. ಜೋಸ್ ಕೆ ಮಣಿ ನೇತೃತ್ವದ ಪ್ರಾದೇಶಿಕ ಪಕ್ಷವು ಕೇಂದ್ರ ಕೇರಳದ ಕ್ಯಾಥೊಲಿಕ್ ಕ್ರಿಶ್ಚಿಯನ್ ಮತದಾರರಲ್ಲಿ ಪ್ರಭಾವ ಹೊಂದುತ್ತಿದೆ. ಕಾಂಗ್ರೆಸ್ಸಿನ ದೀರ್ಘಕಾಲದ ಮಿತ್ರಪಕ್ಷವಾಗಿದ್ದ ಕೆಸಿ (ಎಂ) ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಿಪಿಎಂ ನೇತೃತ್ವದ ಎಡರಂಗದೊಡನೆ ಸೇರಿದೆ.

ಕೆಸಿ (ಎಂ) 15 ಸ್ಥಾನಗಳಿಗೆ ಒತ್ತಡ ಹೇರಿದರೆ, ಒಕ್ಕೂಟದ ಪ್ರಧಾನ ಪಕ್ಷವಾದ ಸಿಪಿಎಂ ಅದನ್ನು 10 ಸ್ಥಾನಗಳಿಗಿಂತ ಕಡಿಮೆ ಮಾಡಲು ಬಯಸಿದೆ. ಸಿಪಿಎಂ, ಸಿಪಿಐ ಪಕ್ಷಗಳು ಕೆಸಿ (ಎಂ) ಗೆ ಸ್ಥಳಾವಕಾಶ ಕಲ್ಪಿಸಲು ತಮ್ಮದೇ ಆದ ಕೆಲವು ಕ್ಷೇತ್ರಗಳನ್ನು ಕೈ ಬಿಡಬೇಕಾಗುತ್ತದೆ. ಕಳೆದ ಚುನಾವಣೆಯಲ್ಲಿ ಸಿಪಿಐ ಸ್ಪರ್ಧಿಸಿದ್ದ ಕಾಂಜಿರಪ್ಪಲ್ಲಿ, ಇರಿಕೂರ್ ಮತ್ತು ಕಳೆದ ಬಾರಿ ಸಿಪಿಎಂ ವಲಯದಲ್ಲಿದ್ದ ಇರಿಂಜಲಕುಡ, ತಾಲಿಪರಂಬ, ಅಲತೂರ್ ಮತ್ತು ಎಟ್ಟುಮನೂರ್ ಮುಂತಾದ ಸ್ಥಾನಗಳು ಕೆಸಿ (ಎಂ) ಗೆ ಹೋಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ, ಸಿಪಿಎಂ ಮತ್ತು ಸಿಪಿಐ 2016 ಕ್ಕೆ ಹೋಲಿಸಿದರೆ ಕಡಿಮೆ ಸ್ಥಾನಗಳ ಮೇಲೆ ಹೋರಾಡುವ ಸಾಧ್ಯತೆಯಿದೆ.

ಹೊಸದಾಗಿ ಒಡಮೂಡಿರುವ ಮಿತ್ರಪಕ್ಷಗಳಾದ ಲೋಕ್ ತಾಂತ್ರಿಕ್ ಜನತಾದಳ (ಎಲ್‌ಜೆಡಿ), ಜನತಾದಳ (ಎಸ್) ಮತ್ತು ಎನ್‌ಸಿಪಿಯಂತಹ ಸಣ್ಣ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಪ್ರಶ್ನೆಯೂ ಇದೆ. ಅವರು ಸಾಮೂಹಿಕ ನೆಲೆ ಹೊಂದಿರುವ ಪಕ್ಷಗಳಲ್ಲ. ಆದರೆ ಆಯ್ದ ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯವಿರುವ ವೈಯಕ್ತಿಕ ನಾಯಕರನ್ನು ಹೊಂದಿದ್ದಾರೆ.

ಸಿಪಿಎಂ ಪಕ್ಷವು ಎಲ್‌ಜೆಡಿ ಮತ್ತು ಜೆಡಿ (ಎಸ್) ಗಳನ್ನು ವಿಲೀನಗೊಳಿಸುವಂತೆ ನಿರ್ದೇಶಿಸಿತ್ತು. ಏಕೆಂದರೆ ಅವೆರಡೂ ಸಮಾಜವಾದಿ ಪಕ್ಷಗಳಾಗಿದ್ದು ಜನತಾದಳದಿಂದ ಹೊರಬಂದಿವೆ. ಆದರೆ ಎರಡು ಪಕ್ಷಗಳ ನಾಯಕತ್ವವು ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಈ ಪಕ್ಷಗಳಿಗೆ ಸ್ಥಾನಗಳನ್ನು ಹಂಚಿಕೆ ಮಾಡುವುದು ಮತ್ತೊಮ್ಮೆ ಸಿಪಿಐ (ಎಂ) ವೆಚ್ಚದಲ್ಲಿ ನಡೆಯಲಿದೆ. ತಿರುವಲ್ಲಾ, ಅಂಬಲಪುಳ, ವಟಕರ ಮತ್ತು ಕೂತುಪರಂಬು ಮುಂತಾದ ಕ್ಷೇತ್ರಗಳಲ್ಲಿ ಇದಕ್ಕಾಗಿ ಚೌಕಾಶಿ ನಡೆಯಲಿದೆ.

ಯುಡಿಎಫ್‌ ಪರಿಸ್ಥಿತಿ

ಯುಡಿಎಫ್‌ಗೆ ಸಂಬಂಧಿಸಿದಂತೆ, ಸೀಟು ಹಂಚಿಕೆ ಕುರಿತು ಮಾತುಕತೆ ಮುಖ್ಯವಾಗಿ 15 ಸ್ಥಾನಗಳನ್ನು ಬಯಸುವ ಕೇರಳ ಕಾಂಗ್ರೆಸ್ (ಜೋಸೆಫ್) ಪಕ್ಷದೊಂದಿಗೆ ಅಡೆತಡೆಗಳನ್ನು ಎದುರಿಸಲಿದೆ. ಕಾಂಗ್ರೆಸ್ ನಾಯಕತ್ವವು ಆ ಪಕ್ಷದ ಮಿತಿಗಳನ್ನು ಅರ್ಥಮಾಡಿಕೊಂಡಂತೆ 8 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡದಿರಲು ಉತ್ಸುಕವಾಗಿದೆ ಎಂದು ತಿಳಿದುಬಂದಿದೆ.

ಕೆಲವು ಕೆಸಿ (ಜೆ) ಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಆ ಸ್ಥಾನಗಳನ್ನು ಗೆಲ್ಲಲು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕತ್ವದೊಳಗೆ ಆಲೋಚನೆ ಇವೆ.. ಅದೇ ಸಮಯದಲ್ಲಿ, ಕೆಸಿ (ಜೆ) ಮೈತ್ರಿ ಮುರಿದುಕೊಂಡು ಬಂಡಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಷ್ಟ ಎಂಬ ಅರಿವೂ ಯುಡಿಎಫ್‌ಗೆ ಇದೆ. ಇರಿಂಜಲಕುಡ, ಮುವಾಟ್ಟುಪುಳ ಮತ್ತು ಕೊಠಮಂಗಲಂ ಮುಂತಾದ ಸ್ಥಾನಗಳ ಬಗ್ಗೆ ವಿವಾದಗಳು ಉದ್ಭವಿಸುವ ನಿರೀಕ್ಷೆಯಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಅಂತಿಮಗೊಂಡಿದೆ, ಇದು ಹೆಚ್ಚಾಗಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ, ಇದು 2016 ರಲ್ಲಿ ಹೋರಾಡಿದ್ದಕ್ಕಿಂತ ಮೂರು ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಸ್ಥಾನ ಹಂಚಿಕೆ ಖಚಿತವಾದ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮುಂದಿನ ವಾರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಮಾಡಲಿದೆ. 14 ಜಿಲ್ಲೆಗಳಲ್ಲಿ ತಲಾ ಒಬ್ಬರು ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸುವಂತೆ ಎಐಸಿಸಿ ರಾಜ್ಯ ನಾಯಕತ್ವವನ್ನು ಕೇಳಿದೆ. ಪಕ್ಷದ ಒಳಗಿನವರ ಪ್ರಕಾರ ಹೆಚ್ಚಿನ ಯುವ ಪ್ರಾತಿನಿಧ್ಯ ಇರಲಿದೆ ಮತ್ತು ಕೆಲವು ಪ್ರಸಿದ್ಧ ಅಭ್ಯರ್ಥಿಗಳು ಸಹ ಇರುತ್ತಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತೊಮ್ಮೆ ಹರಿಪಾದ್‌ನಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸಲಿದ್ದರೆ, ಮಾಜಿ ಸಿಎಂ ಉಮ್ಮನ್ ಚಾಂಡಿ ಅವರು ಪುತ್ತುಪ್ಪಳ್ಳಿಯಿಂದ ಹೋರಾಡುತ್ತಾರೆಯೇ ಅಥವಾ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಪಕ್ಷದಿಂದ ಕಸಿದುಕೊಳ್ಳುವ ಕಠಿಣ ಸ್ಥಾನಕ್ಕೆ ಹೋಗುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಅಭ್ಯರ್ಥಿಯಾಗಲಿದ್ದಾರೆ ಎಂಬುದರ ಬಗ್ಗೆ ಯಾವುದೇ ದೃಢೀಕರಣ ಕಂಡುಬಂದಿಲ್ಲ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಕಾಂಗ್ರೆಸ್‌ನ ಅಮರಿಂದರ್ ಸಿಂಗ್ ಪರ ಮತ್ತೆ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...