Homeಮುಖಪುಟಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ, ಇತ್ತ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳ ಚುನಾವಣಾ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 06 ರಂದು ಚುನಾವಣೆ ನಡೆಯಲಿದ್ದು, ತಲಶೇರಿ, ಗುರುವಾಯೂರು ಮತ್ತು ದೇವಿಕುಳಂ ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರಗಳು ಅಂತಿಮ ಪರಿಶೀಲನೆಯಲ್ಲಿ ತಿರಸ್ಕೃತವಾಗಿವೆ.

ತಲಶೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ಜಿಲ್ಲಾಧ್ಯಕ್ಷ ಎನ್ ಹರಿದಾಸ್ ಅವರ ನಾಮಪತ್ರವನ್ನು ಅಂತಿಮ ಪರಿಶೀಲನೆಯಲ್ಲಿ ತಿರಸ್ಕರಿಸಲಾಗಿದೆ. ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಫಾರ್ಮ್ ಎ (ಅಭ್ಯರ್ಥಿ ಸ್ಫರ್ಧಿಸುವ ರಾಜಕೀಯ ಪಕ್ಷ), ಪಕ್ಷದ ರಾಜ್ಯ ಅಧ್ಯಕ್ಷರ ಕಡ್ಡಾಯ ಸಹಿ ಹೊಂದಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಗುರುವಾಯೂರು ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ನಿವೇದಿತಾ ಸುಬ್ರಮಣ್ಯಂ ಅವರ ನಾಮಪತ್ರವನ್ನು ಕೂಡ ಅಗತ್ಯ ದಾಖಲೆಪತ್ರಗಳನ್ನು ಸಲ್ಲಿಸದ ಕಾರಣ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ನಿವೇದಿತಾ ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷರಾಗಿದ್ದಾರೆ.

ದೇವಿಕುಲಂ ಕ್ಷೇತ್ರದಲ್ಲಿ ಬಿಜೆಪಿ ಮಿತ್ರಪಕ್ಷ ಎಐಎಡಿಎಂಕೆ ಅಭ್ಯರ್ಥಿ ಆರ್ ಧನಲಕ್ಷ್ಮಿ ಅವರ ನಾಮಪತ್ರ ಅಪೂರ್ಣ ನಾಮಪತ್ರ ಎಂದು ತಿರಸ್ಕರಿಸಲ್ಪಟ್ಟಿದೆ.

ಗುರುವಾಯೂರ್ ಮತ್ತು ದೇವಿಕುಲಂ ಕ್ಷೇತ್ರಗಳಲ್ಲಿ ಸದ್ಯ ಎನ್‌ಡಿಎಗೆ ಬೇರೆ ಅಭ್ಯರ್ಥಿಗಳು ಇಲ್ಲ. ಆದರೆ, ದೇವಿಕುಲಂನಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಗಣೇಶ್ ಅವರನ್ನು ಬೆಂಬಲಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

ಸಿಪಿಐ (ಎಂ) ಒತ್ತಡದಿಂದಾಗಿ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ. “ನಾವು ಇದರ ವಿರುದ್ಧ ಕಾನೂನುಬದ್ಧವಾಗಿ ಹೋರಾಡುತ್ತೇವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಈ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಹಾಕುತ್ತದೆ ”ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

ನಾಮಪತ್ರಗಳ ತಿರಸ್ಕಾರವು ಸಿಪಿಐ (ಎಂ) ಮತ್ತು ಕಾಂಗ್ರೆಸ್  ಪಕ್ಷಗಳ ನಡುವೆಯೂ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಈ ನಾಮಪತ್ರಗಳ ತಿರಸ್ಕರಿಸುವುದರಿಂದ ಸಿಪಿಐ (ಎಂ) ಬಿಜೆಪಿಯೊಂದಿಗೆ ಹೊಂದಿರುವ ರಹಸ್ಯ ಮೈತ್ರಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಹೇಳಿದ್ದಾರೆ. “ಅಧಿಕಾರವನ್ನು ಉಳಿಸಿಕೊಳ್ಳಲು, ಸಿಪಿಐ (ಎಂ) ಕೋಮು ಶಕ್ತಿಗಳೊಂದಿಗೆ ಕೈಜೋಡಿಸಲು ಹಿಂದೆ ಸರಿಯುವುದಿಲ್ಲ. ಪ್ರಮುಖ ಸಿಪಿಐ (ಎಂ) ನಾಯಕರು ಕಣದಲ್ಲಿರುವ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ” ಎಂದು ಆರೋಪಿಸಿದ್ದಾರೆ.

ಸಿಪಿಐ (ಎಂ) ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಎಂ.ವಿ ಜಯರಾಜನ್, ಈ ಒಪ್ಪಂದವು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇದೆ ಎಂದು ಆರೋಪಿಸಿದ್ದಾರೆ. “ದೋಷಯುಕ್ತ ನಾಮನಿರ್ದೇಶನಗಳು ಮತ್ತು ನಂತರದ ನಾಮಪತ್ರ ತಿರಸ್ಕಾರವು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಒಪ್ಪಂದವನ್ನು ಬಹಿರಂಗಪಡಿಸಿದೆ. ತಲಶೇರಿಯಲ್ಲಿ ಬಿಜೆಪಿ ಅಭ್ಯರ್ಥಿಯ ರೂಪದಲ್ಲಿ ಪಕ್ಷದ ರಾಜ್ಯ ಅಧ್ಯಕ್ಷರ ಸಹಿ ಏಕೆ ಇರಲಿಲ್ಲ? ಇದು ಇನ್ನೂ ನಿಗೂಢವಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...