Homeಮುಖಪುಟಕೇರಳ ಸ್ಪೋಟ: ನಾಗರಿಕ ಸಮಾಜದಲ್ಲಿ ದ್ವೇಷ, ಹಿಂಸೆಗೆ ಜಾಗವಿಲ್ಲ- ರಾಹುಲ್ ಖಂಡನೆ

ಕೇರಳ ಸ್ಪೋಟ: ನಾಗರಿಕ ಸಮಾಜದಲ್ಲಿ ದ್ವೇಷ, ಹಿಂಸೆಗೆ ಜಾಗವಿಲ್ಲ- ರಾಹುಲ್ ಖಂಡನೆ

- Advertisement -
- Advertisement -

ಕೇರಳದ ಎರ್ನಾಕುಲಂನಲ್ಲಿರುವ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟದ ಘಟನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ”ಈ ಘಟನೆಯು ತುಂಬಾ ಪ್ರಕ್ಷುಬ್ಧಕಾರಿಯಾಗಿದೆ’ ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಚಾರವಾಗಿ ಎಕ್ಸಾನಲ್ಲಿ ಪೋಸ್ಟ್‌ ಮಾಡಿರುವ ಅವರು, ”ಗಾಯಾಳುಗಳು ಆದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ” ಎಂದು ಹಾರೈಸಿದ್ದಾರೆ.

ರ”ನಾಗರಿಕ ಸಮಾಜದಲ್ಲಿ ದ್ವೇಷ ಹಾಗೂ ಹಿಂಸೆಗೆ ಜಾಗವಿಲ್ಲ. ಸರ್ಕಾರವು ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕೇರಳದ ಕಳಮಶೆರಿಯ ಪ್ರಾರ್ಥನಾ ಕೇಂದ್ರವೊಂದರಲ್ಲಿ ರವಿವಾರ ಬೆಳಗ್ಗೆ ನಡೆದ ಸರಣಿ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ. ಈ ಸ್ಫೋಟಕ್ಕೆ ನಾನೇ ಕಾರಣ ಎಂದು ಡೊಮಿನಿಕ್ ಮಾರ್ಟಿನ್ ಎಂಬಾತ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿಕೊಂಡಿದ್ದು, ಆ ಬಳಿಕ ಆತ ಪೊಲೀಸರಿಗೆ ಶರಣಾಗಿದ್ದಾನೆ.

ಪೊಲೀಸರು ಹೆಸರಿಸದ ವ್ಯಕ್ತಿಗಳ ವಿರುದ್ಧ ಸೆಕ್ಷನ್ 302 ಮತ್ತು 307 ಅನ್ವಯ ಹಾಗೂ ಸ್ಫೋಟಕಗಳ ಕಾಯಿದೆ ಮತ್ತು ಅಕ್ರಮ ಚಟುವಟಿಕೆ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...