Homeಮುಖಪುಟಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಈ ಆಘಾತಕಾರಿ ಘಟನೆಯ ಕುರಿತು ಕೇರಳ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

- Advertisement -
- Advertisement -

ತಿರುವನಂತಪುರಂ: ವಿದ್ಯಾರ್ಥಿನಿಯರಿಗೆ ನೀಡುವ ರಿಯಾಯಿತಿ ಕಾರ್ಡ್ಅನ್ನು ತನ್ನ ಮಗಳಿಗೂ ನೀಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಾಲ್ವರು ನೌಕರರನ್ನು ಅಮಾನತುಗೊಳಿಸಲಾಗಿದೆ.

‘ಕಟ್ಟಕ್ಕಡ ಕೆಎಸ್‌ಆರ್‌ಟಿಸಿ ಡಿಪೋದ ಸ್ಟೇಷನ್‌ ಮಾಸ್ಟರ್‌ ಸೇರಿದಂತೆ ನಾಲ್ವರು ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.

ಈ ಆಘಾತಕಾರಿ ಘಟನೆಯ ಕುರಿತು ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಬೆಳಿಗ್ಗೆ ಬಸ್ ಡಿಪೋದಲ್ಲಿ ಮಾತಿನ ಚಕಮಕಿ ನಡೆದಿದೆ. 55 ವರ್ಷ ವಯಸ್ಸಿನ ವ್ಯಕ್ತಿ ಹಾಗೂ ಕಾಲೇಜಿಗೆ ಹೋಗುತ್ತಿರುವ ಅವರ ಮಗಳನ್ನು ಸಾರ್ವಜನಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ತಳ್ಳಿ ಹಲ್ಲೆ ನಡೆಸಿದ್ದಾರೆ.

ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿಯಲಾದ ದೃಶ್ಯವು ವೈರಲ್ ಆದ ನಂತರ ಈ ಘಟನೆಗೆ ಸಾರ್ವಜನಿಕರು ಪ್ರತಿಕ್ರಿಯಿಸತೊಡಗಿದರು. ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿದವು. ಸಾರಿಗೆ ಸಿಬ್ಬಂದಿ ವ್ಯಕ್ತಿಯನ್ನು ಕೋಣೆಗೆ ತಳ್ಳಿ, ಆತನ ಮೇಲೆ ಹಲ್ಲೆ ನಡೆಸುವುದು ಮತ್ತು ತಡೆಯಲು ಪ್ರಯತ್ನಿಸಿದ ಹುಡುಗಿಯನ್ನು ಥಳಿಸುವುದು ವಿಡಿಯೊದಲ್ಲಿ ವರದಿಯಾಗಿದೆ.

ನೌಕರರಿಂದಾದ ಹಲ್ಲೆಯನ್ನು ಬಾಲಕಿ ಪ್ರಶ್ನಿಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಇನ್ನೊಬ್ಬ ವ್ಯಕ್ತಿ ಅವರನ್ನು ಹೊಡೆಯಬೇಡಿ ಎಂದು ಸಿಬ್ಬಂದಿಗೆ ಹೇಳುವುದನ್ನು ಕೇಳಬಹುದು. ಬಳಿಕ ಬಾಲಕಿಯ ತಂದೆ ಪ್ರೇಮನ್ ಅವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ತಿರುವನಂತಪುರಂ ಬಳಿಯ ಅಮಚಲ್ ಮೂಲದವರಾದ ಅವರು, ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ನೌಕರರೊಂದಿಗೆ ಮಾಡಿದ ಸಣ್ಣ ವಾಗ್ವಾದದ ಕಾರಣ ಹಲ್ಲೆಗೊಳಗಾದರು.

“ನನ್ನ ಮಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿನಿಯರ ರಿಯಾಯಿತಿ ಕಾರ್ಡ್ ನವೀಕರಿಸಲು ಡಿಪೋಗೆ ಹೋಗಿದ್ದೆವು. ಕೌಂಟರ್‌ನಲ್ಲಿದ್ದ ಸಿಬ್ಬಂದಿ ಕೋರ್ಸ್ ಪ್ರಮಾಣಪತ್ರವನ್ನು ತರುವಂತೆ ಹೇಳಿದರು. ಕಳೆದ ತಿಂಗಳು ಬಸ್ ಪಾಸ್ ನವೀಕರಣದ ಸಮಯದಲ್ಲಿ ಅದನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ನಾನು ಅವರಿಗೆ ಹೇಳಿದೆ. ಆದರೆ, ರಿಯಾಯಿತಿಯನ್ನು ನವೀಕರಿಸಲು ನೌಕರರು ಸಿದ್ಧರಿಲ್ಲದ ಕಾರಣ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ವ್ಯಕ್ತಿ ತಿಳಿಸಿದ್ದಾರೆ.

ಘಟನೆಯು ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಸಚಿವ ಆಂಟನಿ ರಾಜು ಮಧ್ಯಪ್ರವೇಶಿಸಿದರು. ಕೆಎಸ್‌ಆರ್‌ಟಿಸಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಂದ ತುರ್ತು ವರದಿ ಕೇಳಿದರು. “ಇದೊಂದು ಪ್ರತ್ಯೇಕ ಘಟನೆಯಾಗಿದ್ದರೂ ಕೆಎಸ್‌ಆರ್‌ಟಿಸಿಗೆ ಕಳಂಕ ತಂದಿದೆ. ಈ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಆ್ಯಂಟನಿ ರಾಜು ಹೇಳಿದ್ದಾರೆ.

ಇದನ್ನೂ ಓದಿರಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ಬಳಿಕ ಸಂಜೆ ವೇಳೆಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ನಾಲ್ವರು ನೌಕರರನ್ನು ವಿಚಾರಣೆಗೆ ಬಾಕಿ ಉಳಿಸಿ ಅಮಾನತು ಮಾಡಿದ್ದಾರೆ. 45 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ (ಸಿಎಂಡಿ) ಅವರು ಆದೇಶಿಸಿದ್ದಾರೆ.

ಇದರ ನಡುವೆ ಕೇರಳ ಹೈಕೋರ್ಟ್‌ ವರದಿ ಕೇಳಿದೆ. ಕೆಎಸ್‌ಆರ್‌ಟಿಸಿಯನ್ನು ಪ್ರತಿನಿಧಿಸುವ ವಕೀಲ ದೀಪು ತಂಕನ್ ಮಾಹಿತಿ ನೀಡಿದ್ದು, “ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು ಘಟನೆಯ ಕುರಿತು ವರದಿಯನ್ನು ಕೇಳಿದ್ದಾರೆ. ಮಾಧ್ಯಮ ವರದಿಗಳ ಆಧಾರದ ಮೇಲೆ ಘಟನೆಯ ಬಗ್ಗೆ ಹೈಕೋರ್ಟ್ ತನ್ನದೇ ಆದ ಪ್ರಕರಣವನ್ನು ದಾಖಲಿಸಿದೆ” ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಕೆಎಸ್‌ಆರ್‌ಟಿಸಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 143, 149, 323 ಸೇರಿದಂತೆ ವಿವಿಧ ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂದು ಕಟ್ಟಕ್ಕಡ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...