Homeಮುಖಪುಟಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಈ ಆಘಾತಕಾರಿ ಘಟನೆಯ ಕುರಿತು ಕೇರಳ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

- Advertisement -
- Advertisement -

ತಿರುವನಂತಪುರಂ: ವಿದ್ಯಾರ್ಥಿನಿಯರಿಗೆ ನೀಡುವ ರಿಯಾಯಿತಿ ಕಾರ್ಡ್ಅನ್ನು ತನ್ನ ಮಗಳಿಗೂ ನೀಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಾಲ್ವರು ನೌಕರರನ್ನು ಅಮಾನತುಗೊಳಿಸಲಾಗಿದೆ.

‘ಕಟ್ಟಕ್ಕಡ ಕೆಎಸ್‌ಆರ್‌ಟಿಸಿ ಡಿಪೋದ ಸ್ಟೇಷನ್‌ ಮಾಸ್ಟರ್‌ ಸೇರಿದಂತೆ ನಾಲ್ವರು ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.

ಈ ಆಘಾತಕಾರಿ ಘಟನೆಯ ಕುರಿತು ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಬೆಳಿಗ್ಗೆ ಬಸ್ ಡಿಪೋದಲ್ಲಿ ಮಾತಿನ ಚಕಮಕಿ ನಡೆದಿದೆ. 55 ವರ್ಷ ವಯಸ್ಸಿನ ವ್ಯಕ್ತಿ ಹಾಗೂ ಕಾಲೇಜಿಗೆ ಹೋಗುತ್ತಿರುವ ಅವರ ಮಗಳನ್ನು ಸಾರ್ವಜನಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ತಳ್ಳಿ ಹಲ್ಲೆ ನಡೆಸಿದ್ದಾರೆ.

ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿಯಲಾದ ದೃಶ್ಯವು ವೈರಲ್ ಆದ ನಂತರ ಈ ಘಟನೆಗೆ ಸಾರ್ವಜನಿಕರು ಪ್ರತಿಕ್ರಿಯಿಸತೊಡಗಿದರು. ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿದವು. ಸಾರಿಗೆ ಸಿಬ್ಬಂದಿ ವ್ಯಕ್ತಿಯನ್ನು ಕೋಣೆಗೆ ತಳ್ಳಿ, ಆತನ ಮೇಲೆ ಹಲ್ಲೆ ನಡೆಸುವುದು ಮತ್ತು ತಡೆಯಲು ಪ್ರಯತ್ನಿಸಿದ ಹುಡುಗಿಯನ್ನು ಥಳಿಸುವುದು ವಿಡಿಯೊದಲ್ಲಿ ವರದಿಯಾಗಿದೆ.

ನೌಕರರಿಂದಾದ ಹಲ್ಲೆಯನ್ನು ಬಾಲಕಿ ಪ್ರಶ್ನಿಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಇನ್ನೊಬ್ಬ ವ್ಯಕ್ತಿ ಅವರನ್ನು ಹೊಡೆಯಬೇಡಿ ಎಂದು ಸಿಬ್ಬಂದಿಗೆ ಹೇಳುವುದನ್ನು ಕೇಳಬಹುದು. ಬಳಿಕ ಬಾಲಕಿಯ ತಂದೆ ಪ್ರೇಮನ್ ಅವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ತಿರುವನಂತಪುರಂ ಬಳಿಯ ಅಮಚಲ್ ಮೂಲದವರಾದ ಅವರು, ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ನೌಕರರೊಂದಿಗೆ ಮಾಡಿದ ಸಣ್ಣ ವಾಗ್ವಾದದ ಕಾರಣ ಹಲ್ಲೆಗೊಳಗಾದರು.

“ನನ್ನ ಮಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿನಿಯರ ರಿಯಾಯಿತಿ ಕಾರ್ಡ್ ನವೀಕರಿಸಲು ಡಿಪೋಗೆ ಹೋಗಿದ್ದೆವು. ಕೌಂಟರ್‌ನಲ್ಲಿದ್ದ ಸಿಬ್ಬಂದಿ ಕೋರ್ಸ್ ಪ್ರಮಾಣಪತ್ರವನ್ನು ತರುವಂತೆ ಹೇಳಿದರು. ಕಳೆದ ತಿಂಗಳು ಬಸ್ ಪಾಸ್ ನವೀಕರಣದ ಸಮಯದಲ್ಲಿ ಅದನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ನಾನು ಅವರಿಗೆ ಹೇಳಿದೆ. ಆದರೆ, ರಿಯಾಯಿತಿಯನ್ನು ನವೀಕರಿಸಲು ನೌಕರರು ಸಿದ್ಧರಿಲ್ಲದ ಕಾರಣ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ವ್ಯಕ್ತಿ ತಿಳಿಸಿದ್ದಾರೆ.

ಘಟನೆಯು ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಸಚಿವ ಆಂಟನಿ ರಾಜು ಮಧ್ಯಪ್ರವೇಶಿಸಿದರು. ಕೆಎಸ್‌ಆರ್‌ಟಿಸಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಂದ ತುರ್ತು ವರದಿ ಕೇಳಿದರು. “ಇದೊಂದು ಪ್ರತ್ಯೇಕ ಘಟನೆಯಾಗಿದ್ದರೂ ಕೆಎಸ್‌ಆರ್‌ಟಿಸಿಗೆ ಕಳಂಕ ತಂದಿದೆ. ಈ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಆ್ಯಂಟನಿ ರಾಜು ಹೇಳಿದ್ದಾರೆ.

ಇದನ್ನೂ ಓದಿರಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ಬಳಿಕ ಸಂಜೆ ವೇಳೆಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ನಾಲ್ವರು ನೌಕರರನ್ನು ವಿಚಾರಣೆಗೆ ಬಾಕಿ ಉಳಿಸಿ ಅಮಾನತು ಮಾಡಿದ್ದಾರೆ. 45 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ (ಸಿಎಂಡಿ) ಅವರು ಆದೇಶಿಸಿದ್ದಾರೆ.

ಇದರ ನಡುವೆ ಕೇರಳ ಹೈಕೋರ್ಟ್‌ ವರದಿ ಕೇಳಿದೆ. ಕೆಎಸ್‌ಆರ್‌ಟಿಸಿಯನ್ನು ಪ್ರತಿನಿಧಿಸುವ ವಕೀಲ ದೀಪು ತಂಕನ್ ಮಾಹಿತಿ ನೀಡಿದ್ದು, “ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು ಘಟನೆಯ ಕುರಿತು ವರದಿಯನ್ನು ಕೇಳಿದ್ದಾರೆ. ಮಾಧ್ಯಮ ವರದಿಗಳ ಆಧಾರದ ಮೇಲೆ ಘಟನೆಯ ಬಗ್ಗೆ ಹೈಕೋರ್ಟ್ ತನ್ನದೇ ಆದ ಪ್ರಕರಣವನ್ನು ದಾಖಲಿಸಿದೆ” ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಕೆಎಸ್‌ಆರ್‌ಟಿಸಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 143, 149, 323 ಸೇರಿದಂತೆ ವಿವಿಧ ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂದು ಕಟ್ಟಕ್ಕಡ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...