Homeಮುಖಪುಟಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಈ ಆಘಾತಕಾರಿ ಘಟನೆಯ ಕುರಿತು ಕೇರಳ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

- Advertisement -
- Advertisement -

ತಿರುವನಂತಪುರಂ: ವಿದ್ಯಾರ್ಥಿನಿಯರಿಗೆ ನೀಡುವ ರಿಯಾಯಿತಿ ಕಾರ್ಡ್ಅನ್ನು ತನ್ನ ಮಗಳಿಗೂ ನೀಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಾಲ್ವರು ನೌಕರರನ್ನು ಅಮಾನತುಗೊಳಿಸಲಾಗಿದೆ.

‘ಕಟ್ಟಕ್ಕಡ ಕೆಎಸ್‌ಆರ್‌ಟಿಸಿ ಡಿಪೋದ ಸ್ಟೇಷನ್‌ ಮಾಸ್ಟರ್‌ ಸೇರಿದಂತೆ ನಾಲ್ವರು ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.

ಈ ಆಘಾತಕಾರಿ ಘಟನೆಯ ಕುರಿತು ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಬೆಳಿಗ್ಗೆ ಬಸ್ ಡಿಪೋದಲ್ಲಿ ಮಾತಿನ ಚಕಮಕಿ ನಡೆದಿದೆ. 55 ವರ್ಷ ವಯಸ್ಸಿನ ವ್ಯಕ್ತಿ ಹಾಗೂ ಕಾಲೇಜಿಗೆ ಹೋಗುತ್ತಿರುವ ಅವರ ಮಗಳನ್ನು ಸಾರ್ವಜನಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ತಳ್ಳಿ ಹಲ್ಲೆ ನಡೆಸಿದ್ದಾರೆ.

ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿಯಲಾದ ದೃಶ್ಯವು ವೈರಲ್ ಆದ ನಂತರ ಈ ಘಟನೆಗೆ ಸಾರ್ವಜನಿಕರು ಪ್ರತಿಕ್ರಿಯಿಸತೊಡಗಿದರು. ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿದವು. ಸಾರಿಗೆ ಸಿಬ್ಬಂದಿ ವ್ಯಕ್ತಿಯನ್ನು ಕೋಣೆಗೆ ತಳ್ಳಿ, ಆತನ ಮೇಲೆ ಹಲ್ಲೆ ನಡೆಸುವುದು ಮತ್ತು ತಡೆಯಲು ಪ್ರಯತ್ನಿಸಿದ ಹುಡುಗಿಯನ್ನು ಥಳಿಸುವುದು ವಿಡಿಯೊದಲ್ಲಿ ವರದಿಯಾಗಿದೆ.

ನೌಕರರಿಂದಾದ ಹಲ್ಲೆಯನ್ನು ಬಾಲಕಿ ಪ್ರಶ್ನಿಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಇನ್ನೊಬ್ಬ ವ್ಯಕ್ತಿ ಅವರನ್ನು ಹೊಡೆಯಬೇಡಿ ಎಂದು ಸಿಬ್ಬಂದಿಗೆ ಹೇಳುವುದನ್ನು ಕೇಳಬಹುದು. ಬಳಿಕ ಬಾಲಕಿಯ ತಂದೆ ಪ್ರೇಮನ್ ಅವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ತಿರುವನಂತಪುರಂ ಬಳಿಯ ಅಮಚಲ್ ಮೂಲದವರಾದ ಅವರು, ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ನೌಕರರೊಂದಿಗೆ ಮಾಡಿದ ಸಣ್ಣ ವಾಗ್ವಾದದ ಕಾರಣ ಹಲ್ಲೆಗೊಳಗಾದರು.

“ನನ್ನ ಮಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿನಿಯರ ರಿಯಾಯಿತಿ ಕಾರ್ಡ್ ನವೀಕರಿಸಲು ಡಿಪೋಗೆ ಹೋಗಿದ್ದೆವು. ಕೌಂಟರ್‌ನಲ್ಲಿದ್ದ ಸಿಬ್ಬಂದಿ ಕೋರ್ಸ್ ಪ್ರಮಾಣಪತ್ರವನ್ನು ತರುವಂತೆ ಹೇಳಿದರು. ಕಳೆದ ತಿಂಗಳು ಬಸ್ ಪಾಸ್ ನವೀಕರಣದ ಸಮಯದಲ್ಲಿ ಅದನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ನಾನು ಅವರಿಗೆ ಹೇಳಿದೆ. ಆದರೆ, ರಿಯಾಯಿತಿಯನ್ನು ನವೀಕರಿಸಲು ನೌಕರರು ಸಿದ್ಧರಿಲ್ಲದ ಕಾರಣ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ವ್ಯಕ್ತಿ ತಿಳಿಸಿದ್ದಾರೆ.

ಘಟನೆಯು ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಸಚಿವ ಆಂಟನಿ ರಾಜು ಮಧ್ಯಪ್ರವೇಶಿಸಿದರು. ಕೆಎಸ್‌ಆರ್‌ಟಿಸಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಂದ ತುರ್ತು ವರದಿ ಕೇಳಿದರು. “ಇದೊಂದು ಪ್ರತ್ಯೇಕ ಘಟನೆಯಾಗಿದ್ದರೂ ಕೆಎಸ್‌ಆರ್‌ಟಿಸಿಗೆ ಕಳಂಕ ತಂದಿದೆ. ಈ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಆ್ಯಂಟನಿ ರಾಜು ಹೇಳಿದ್ದಾರೆ.

ಇದನ್ನೂ ಓದಿರಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ಬಳಿಕ ಸಂಜೆ ವೇಳೆಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ನಾಲ್ವರು ನೌಕರರನ್ನು ವಿಚಾರಣೆಗೆ ಬಾಕಿ ಉಳಿಸಿ ಅಮಾನತು ಮಾಡಿದ್ದಾರೆ. 45 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ (ಸಿಎಂಡಿ) ಅವರು ಆದೇಶಿಸಿದ್ದಾರೆ.

ಇದರ ನಡುವೆ ಕೇರಳ ಹೈಕೋರ್ಟ್‌ ವರದಿ ಕೇಳಿದೆ. ಕೆಎಸ್‌ಆರ್‌ಟಿಸಿಯನ್ನು ಪ್ರತಿನಿಧಿಸುವ ವಕೀಲ ದೀಪು ತಂಕನ್ ಮಾಹಿತಿ ನೀಡಿದ್ದು, “ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು ಘಟನೆಯ ಕುರಿತು ವರದಿಯನ್ನು ಕೇಳಿದ್ದಾರೆ. ಮಾಧ್ಯಮ ವರದಿಗಳ ಆಧಾರದ ಮೇಲೆ ಘಟನೆಯ ಬಗ್ಗೆ ಹೈಕೋರ್ಟ್ ತನ್ನದೇ ಆದ ಪ್ರಕರಣವನ್ನು ದಾಖಲಿಸಿದೆ” ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಕೆಎಸ್‌ಆರ್‌ಟಿಸಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 143, 149, 323 ಸೇರಿದಂತೆ ವಿವಿಧ ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂದು ಕಟ್ಟಕ್ಕಡ ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...