Homeಮುಖಪುಟಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಈ ಆಘಾತಕಾರಿ ಘಟನೆಯ ಕುರಿತು ಕೇರಳ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

- Advertisement -
- Advertisement -

ತಿರುವನಂತಪುರಂ: ವಿದ್ಯಾರ್ಥಿನಿಯರಿಗೆ ನೀಡುವ ರಿಯಾಯಿತಿ ಕಾರ್ಡ್ಅನ್ನು ತನ್ನ ಮಗಳಿಗೂ ನೀಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಾಲ್ವರು ನೌಕರರನ್ನು ಅಮಾನತುಗೊಳಿಸಲಾಗಿದೆ.

‘ಕಟ್ಟಕ್ಕಡ ಕೆಎಸ್‌ಆರ್‌ಟಿಸಿ ಡಿಪೋದ ಸ್ಟೇಷನ್‌ ಮಾಸ್ಟರ್‌ ಸೇರಿದಂತೆ ನಾಲ್ವರು ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.

ಈ ಆಘಾತಕಾರಿ ಘಟನೆಯ ಕುರಿತು ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಬೆಳಿಗ್ಗೆ ಬಸ್ ಡಿಪೋದಲ್ಲಿ ಮಾತಿನ ಚಕಮಕಿ ನಡೆದಿದೆ. 55 ವರ್ಷ ವಯಸ್ಸಿನ ವ್ಯಕ್ತಿ ಹಾಗೂ ಕಾಲೇಜಿಗೆ ಹೋಗುತ್ತಿರುವ ಅವರ ಮಗಳನ್ನು ಸಾರ್ವಜನಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ತಳ್ಳಿ ಹಲ್ಲೆ ನಡೆಸಿದ್ದಾರೆ.

ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿಯಲಾದ ದೃಶ್ಯವು ವೈರಲ್ ಆದ ನಂತರ ಈ ಘಟನೆಗೆ ಸಾರ್ವಜನಿಕರು ಪ್ರತಿಕ್ರಿಯಿಸತೊಡಗಿದರು. ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿದವು. ಸಾರಿಗೆ ಸಿಬ್ಬಂದಿ ವ್ಯಕ್ತಿಯನ್ನು ಕೋಣೆಗೆ ತಳ್ಳಿ, ಆತನ ಮೇಲೆ ಹಲ್ಲೆ ನಡೆಸುವುದು ಮತ್ತು ತಡೆಯಲು ಪ್ರಯತ್ನಿಸಿದ ಹುಡುಗಿಯನ್ನು ಥಳಿಸುವುದು ವಿಡಿಯೊದಲ್ಲಿ ವರದಿಯಾಗಿದೆ.

ನೌಕರರಿಂದಾದ ಹಲ್ಲೆಯನ್ನು ಬಾಲಕಿ ಪ್ರಶ್ನಿಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಇನ್ನೊಬ್ಬ ವ್ಯಕ್ತಿ ಅವರನ್ನು ಹೊಡೆಯಬೇಡಿ ಎಂದು ಸಿಬ್ಬಂದಿಗೆ ಹೇಳುವುದನ್ನು ಕೇಳಬಹುದು. ಬಳಿಕ ಬಾಲಕಿಯ ತಂದೆ ಪ್ರೇಮನ್ ಅವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ತಿರುವನಂತಪುರಂ ಬಳಿಯ ಅಮಚಲ್ ಮೂಲದವರಾದ ಅವರು, ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ನೌಕರರೊಂದಿಗೆ ಮಾಡಿದ ಸಣ್ಣ ವಾಗ್ವಾದದ ಕಾರಣ ಹಲ್ಲೆಗೊಳಗಾದರು.

“ನನ್ನ ಮಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿನಿಯರ ರಿಯಾಯಿತಿ ಕಾರ್ಡ್ ನವೀಕರಿಸಲು ಡಿಪೋಗೆ ಹೋಗಿದ್ದೆವು. ಕೌಂಟರ್‌ನಲ್ಲಿದ್ದ ಸಿಬ್ಬಂದಿ ಕೋರ್ಸ್ ಪ್ರಮಾಣಪತ್ರವನ್ನು ತರುವಂತೆ ಹೇಳಿದರು. ಕಳೆದ ತಿಂಗಳು ಬಸ್ ಪಾಸ್ ನವೀಕರಣದ ಸಮಯದಲ್ಲಿ ಅದನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ನಾನು ಅವರಿಗೆ ಹೇಳಿದೆ. ಆದರೆ, ರಿಯಾಯಿತಿಯನ್ನು ನವೀಕರಿಸಲು ನೌಕರರು ಸಿದ್ಧರಿಲ್ಲದ ಕಾರಣ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ವ್ಯಕ್ತಿ ತಿಳಿಸಿದ್ದಾರೆ.

ಘಟನೆಯು ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಸಚಿವ ಆಂಟನಿ ರಾಜು ಮಧ್ಯಪ್ರವೇಶಿಸಿದರು. ಕೆಎಸ್‌ಆರ್‌ಟಿಸಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಂದ ತುರ್ತು ವರದಿ ಕೇಳಿದರು. “ಇದೊಂದು ಪ್ರತ್ಯೇಕ ಘಟನೆಯಾಗಿದ್ದರೂ ಕೆಎಸ್‌ಆರ್‌ಟಿಸಿಗೆ ಕಳಂಕ ತಂದಿದೆ. ಈ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಆ್ಯಂಟನಿ ರಾಜು ಹೇಳಿದ್ದಾರೆ.

ಇದನ್ನೂ ಓದಿರಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ಬಳಿಕ ಸಂಜೆ ವೇಳೆಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ನಾಲ್ವರು ನೌಕರರನ್ನು ವಿಚಾರಣೆಗೆ ಬಾಕಿ ಉಳಿಸಿ ಅಮಾನತು ಮಾಡಿದ್ದಾರೆ. 45 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ (ಸಿಎಂಡಿ) ಅವರು ಆದೇಶಿಸಿದ್ದಾರೆ.

ಇದರ ನಡುವೆ ಕೇರಳ ಹೈಕೋರ್ಟ್‌ ವರದಿ ಕೇಳಿದೆ. ಕೆಎಸ್‌ಆರ್‌ಟಿಸಿಯನ್ನು ಪ್ರತಿನಿಧಿಸುವ ವಕೀಲ ದೀಪು ತಂಕನ್ ಮಾಹಿತಿ ನೀಡಿದ್ದು, “ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು ಘಟನೆಯ ಕುರಿತು ವರದಿಯನ್ನು ಕೇಳಿದ್ದಾರೆ. ಮಾಧ್ಯಮ ವರದಿಗಳ ಆಧಾರದ ಮೇಲೆ ಘಟನೆಯ ಬಗ್ಗೆ ಹೈಕೋರ್ಟ್ ತನ್ನದೇ ಆದ ಪ್ರಕರಣವನ್ನು ದಾಖಲಿಸಿದೆ” ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಕೆಎಸ್‌ಆರ್‌ಟಿಸಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 143, 149, 323 ಸೇರಿದಂತೆ ವಿವಿಧ ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂದು ಕಟ್ಟಕ್ಕಡ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...