Homeಮುಖಪುಟಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಈ ಆಘಾತಕಾರಿ ಘಟನೆಯ ಕುರಿತು ಕೇರಳ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

- Advertisement -
- Advertisement -

ತಿರುವನಂತಪುರಂ: ವಿದ್ಯಾರ್ಥಿನಿಯರಿಗೆ ನೀಡುವ ರಿಯಾಯಿತಿ ಕಾರ್ಡ್ಅನ್ನು ತನ್ನ ಮಗಳಿಗೂ ನೀಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಾಲ್ವರು ನೌಕರರನ್ನು ಅಮಾನತುಗೊಳಿಸಲಾಗಿದೆ.

‘ಕಟ್ಟಕ್ಕಡ ಕೆಎಸ್‌ಆರ್‌ಟಿಸಿ ಡಿಪೋದ ಸ್ಟೇಷನ್‌ ಮಾಸ್ಟರ್‌ ಸೇರಿದಂತೆ ನಾಲ್ವರು ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.

ಈ ಆಘಾತಕಾರಿ ಘಟನೆಯ ಕುರಿತು ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಬೆಳಿಗ್ಗೆ ಬಸ್ ಡಿಪೋದಲ್ಲಿ ಮಾತಿನ ಚಕಮಕಿ ನಡೆದಿದೆ. 55 ವರ್ಷ ವಯಸ್ಸಿನ ವ್ಯಕ್ತಿ ಹಾಗೂ ಕಾಲೇಜಿಗೆ ಹೋಗುತ್ತಿರುವ ಅವರ ಮಗಳನ್ನು ಸಾರ್ವಜನಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ತಳ್ಳಿ ಹಲ್ಲೆ ನಡೆಸಿದ್ದಾರೆ.

ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿಯಲಾದ ದೃಶ್ಯವು ವೈರಲ್ ಆದ ನಂತರ ಈ ಘಟನೆಗೆ ಸಾರ್ವಜನಿಕರು ಪ್ರತಿಕ್ರಿಯಿಸತೊಡಗಿದರು. ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿದವು. ಸಾರಿಗೆ ಸಿಬ್ಬಂದಿ ವ್ಯಕ್ತಿಯನ್ನು ಕೋಣೆಗೆ ತಳ್ಳಿ, ಆತನ ಮೇಲೆ ಹಲ್ಲೆ ನಡೆಸುವುದು ಮತ್ತು ತಡೆಯಲು ಪ್ರಯತ್ನಿಸಿದ ಹುಡುಗಿಯನ್ನು ಥಳಿಸುವುದು ವಿಡಿಯೊದಲ್ಲಿ ವರದಿಯಾಗಿದೆ.

ನೌಕರರಿಂದಾದ ಹಲ್ಲೆಯನ್ನು ಬಾಲಕಿ ಪ್ರಶ್ನಿಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಇನ್ನೊಬ್ಬ ವ್ಯಕ್ತಿ ಅವರನ್ನು ಹೊಡೆಯಬೇಡಿ ಎಂದು ಸಿಬ್ಬಂದಿಗೆ ಹೇಳುವುದನ್ನು ಕೇಳಬಹುದು. ಬಳಿಕ ಬಾಲಕಿಯ ತಂದೆ ಪ್ರೇಮನ್ ಅವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ತಿರುವನಂತಪುರಂ ಬಳಿಯ ಅಮಚಲ್ ಮೂಲದವರಾದ ಅವರು, ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ನೌಕರರೊಂದಿಗೆ ಮಾಡಿದ ಸಣ್ಣ ವಾಗ್ವಾದದ ಕಾರಣ ಹಲ್ಲೆಗೊಳಗಾದರು.

“ನನ್ನ ಮಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿನಿಯರ ರಿಯಾಯಿತಿ ಕಾರ್ಡ್ ನವೀಕರಿಸಲು ಡಿಪೋಗೆ ಹೋಗಿದ್ದೆವು. ಕೌಂಟರ್‌ನಲ್ಲಿದ್ದ ಸಿಬ್ಬಂದಿ ಕೋರ್ಸ್ ಪ್ರಮಾಣಪತ್ರವನ್ನು ತರುವಂತೆ ಹೇಳಿದರು. ಕಳೆದ ತಿಂಗಳು ಬಸ್ ಪಾಸ್ ನವೀಕರಣದ ಸಮಯದಲ್ಲಿ ಅದನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ನಾನು ಅವರಿಗೆ ಹೇಳಿದೆ. ಆದರೆ, ರಿಯಾಯಿತಿಯನ್ನು ನವೀಕರಿಸಲು ನೌಕರರು ಸಿದ್ಧರಿಲ್ಲದ ಕಾರಣ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ವ್ಯಕ್ತಿ ತಿಳಿಸಿದ್ದಾರೆ.

ಘಟನೆಯು ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಸಚಿವ ಆಂಟನಿ ರಾಜು ಮಧ್ಯಪ್ರವೇಶಿಸಿದರು. ಕೆಎಸ್‌ಆರ್‌ಟಿಸಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಂದ ತುರ್ತು ವರದಿ ಕೇಳಿದರು. “ಇದೊಂದು ಪ್ರತ್ಯೇಕ ಘಟನೆಯಾಗಿದ್ದರೂ ಕೆಎಸ್‌ಆರ್‌ಟಿಸಿಗೆ ಕಳಂಕ ತಂದಿದೆ. ಈ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಆ್ಯಂಟನಿ ರಾಜು ಹೇಳಿದ್ದಾರೆ.

ಇದನ್ನೂ ಓದಿರಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ಬಳಿಕ ಸಂಜೆ ವೇಳೆಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ನಾಲ್ವರು ನೌಕರರನ್ನು ವಿಚಾರಣೆಗೆ ಬಾಕಿ ಉಳಿಸಿ ಅಮಾನತು ಮಾಡಿದ್ದಾರೆ. 45 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ (ಸಿಎಂಡಿ) ಅವರು ಆದೇಶಿಸಿದ್ದಾರೆ.

ಇದರ ನಡುವೆ ಕೇರಳ ಹೈಕೋರ್ಟ್‌ ವರದಿ ಕೇಳಿದೆ. ಕೆಎಸ್‌ಆರ್‌ಟಿಸಿಯನ್ನು ಪ್ರತಿನಿಧಿಸುವ ವಕೀಲ ದೀಪು ತಂಕನ್ ಮಾಹಿತಿ ನೀಡಿದ್ದು, “ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು ಘಟನೆಯ ಕುರಿತು ವರದಿಯನ್ನು ಕೇಳಿದ್ದಾರೆ. ಮಾಧ್ಯಮ ವರದಿಗಳ ಆಧಾರದ ಮೇಲೆ ಘಟನೆಯ ಬಗ್ಗೆ ಹೈಕೋರ್ಟ್ ತನ್ನದೇ ಆದ ಪ್ರಕರಣವನ್ನು ದಾಖಲಿಸಿದೆ” ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಕೆಎಸ್‌ಆರ್‌ಟಿಸಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 143, 149, 323 ಸೇರಿದಂತೆ ವಿವಿಧ ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂದು ಕಟ್ಟಕ್ಕಡ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...