Homeಮುಖಪುಟಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್ ಅಲೆಕ್ಸಾಂಡರ್ ಬೇಬಿ ಹೇಳಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ಕುರಿತ ಸಿನಿಮಾಗಳೂ ಇವೆ ಎಂದು ತಿಳಿಸಿದ್ದಾರೆ.

ಚಲನಚಿತ್ರೋತ್ಸವ ಡಿಸೆಂಬರ್ 12ರಂದು ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಪ್ರಾರಂಭಗೊಂಡಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ.

ಪ್ಯಾಲೆಸ್ತೀನ್ ಕುರಿತಾದ ಚಲನಚಿತ್ರಗಳಾದ “ಪ್ಯಾಲೆಸ್ಟೈನ್ 36”, “ಯೆಸ್ ಒನ್ಸ್ ಅಪೋನ್ ಅ ಟೈಮ್ ಇನ್ ಗಾಝಾ” ಮತ್ತು “ಆಲ್ ದಾಟ್ಸ್ ಲೆಫ್ಟ್ ಆಫ್ ಯು” ಪ್ರದರ್ಶನಕ್ಕೆ ಅನುಮತಿ ನಿರಾಕರಿಸಲಾಗಿದೆ. ಈ ಚಿತ್ರಗಳು ಈಗಾಗಲೇ ಚಲನಚಿತ್ರೋತ್ಸವದಲ್ಲಿ ಆರಂಭಿಕ ಪ್ರದರ್ಶನ (initial screening) ಕಂಡಿದ್ದವು ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ಟೈನ್ 36” ಎಂಬ ಅರೆಬಿಕ್ ಮತ್ತು ಇಂಗ್ಲಿಷ್ ಭಾಷೆಯ ಚಲನಚಿತ್ರವು ಚಲನಚಿತ್ರೋತ್ಸವದ ಉದ್ಘಾಟನಾ ಚಿತ್ರವಾಗಿತ್ತು.

ಡಿಸೆಂಬರ್ 12ರಂದು ನಡೆದ 30ನೇ ಅಂತಾರಾಷ್ಟ್ರೀಯ ಕೇರಳ ಚಲನಚಿತ್ರೋತ್ಸವದ (ಐಎಫ್‌ಎಫ್‌ಕೆ 2025) ಉದ್ಘಾಟನಾ ಸಮಾರಂಭದಲ್ಲಿ, ಕೇರಳದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು ಪ್ಯಾಲೆಸ್ತೀನ್‌ಗೆ ರಾಜ್ಯದ ಬೆಂಬಲದ ಬಗ್ಗೆ ಮಾತನಾಡಿದ್ದರು. ಕೇರಳದ ಜನರು ಯಾವಾಗಲೂ ಪ್ಯಾಲೆಸ್ತೀನ್ ಜನತೆಯ ಪರವಾಗಿ ಇದ್ದಾರೆ. ಈ ಕಾರಣಕ್ಕಾಗಿಯೇ ಉದ್ಘಾಟನಾ ಚಿತ್ರವಾಗಿ “ಪ್ಯಾಲೆಸ್ಟೈನ್ 36” ಅನ್ನು ಆಯ್ಕೆ ಮಾಡಿಲಾಗಿದೆ ಎಂದು ಹೇಳಿದ್ದರು. ಈ ಕಾರ್ಯಕ್ರಮದಲ್ಲಿ ಭಾರತದಲ್ಲಿನ ಪ್ಯಾಲೆಸ್ತೀನ್ ರಾಯಭಾರಿ ಅಬ್ದುಲ್ಲ ಎಂ. ಅಬು ಶಾವೇಶ್ ಅವರು ಅತಿಥಿಯಾಗಿ ಭಾಗವಹಿಸಿದ್ದರು ಮತ್ತು ಕೇರಳದ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ, 2025ರ ಏಪ್ರಿಲ್‌ನಲ್ಲಿ ನಿಧನರಾದ ನಿರ್ದೇಶಕ ಶಾಜಿ ಎನ್. ಕಾರುಣ್ ಅವರಿಗೆ ಗೌರವ ಸಲ್ಲಿಸುತ್ತಾ, ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು, “ಈ ಚಲನಚಿತ್ರೋತ್ಸವವು ಮತೀಯವಾದ ಮತ್ತು ಸರ್ವಾಧಿಕಾರವಾದಕ್ಕೆ ಪ್ರತಿರೋಧ ತೋರುವ ಹಾಗೂ ವಾಕ್‌ ಸ್ವಾತಂತ್ರ್ಯ ಮತ್ತು ಸೃಜನಶೀಲ ಅಭಿವ್ಯಕ್ತಿಯನ್ನು ಆಚರಿಸುವ ವೇದಿಕೆ” ಎಂದು ಹೇಳಿದ್ದರು.

ಚಲನಚಿತ್ರೋತ್ಸವವನ್ನು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿ ಆಯೋಜಿಸುತ್ತದೆ. ಇದು ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಗೆ ವರದಿ ಮಾಡುವ ಸ್ವಾಯತ್ತ ಸಂಸ್ಥೆಯಾಗಿದೆ. ಈ ವಾರ್ಷಿಕ ಕಾರ್ಯಕ್ರಮಕ್ಕೆ ಸಾವಿರಾರು ಪ್ರತಿನಿಧಿಗಳು ಭಾಗವಹಿಸುತ್ತಾರೆ. 2025ರ 30ನೇ ಆವೃತ್ತಿಯಲ್ಲಿ 13,000ಕ್ಕೂ ಹೆಚ್ಚು ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಆಯೋಜಕರು ಚಲನಚಿತ್ರಗಳ ಹೆಸರುಗಳನ್ನು ಮುಂಚಿತವಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಅನುಮೋದನೆಗಾಗಿ ಸಲ್ಲಿಸುತ್ತಾರೆ. ಸಚಿವಾಲಯವು ರಾಜತಾಂತ್ರಿಕ ಸಂಬಂಧಗಳಿಗೆ ಹಾನಿಯಾಗುವಂತೆ ತೋರುವ ಚಿತ್ರಗಳನ್ನು ನಿರಾಕರಿಸಬಹುದು.

ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ್ದಕ್ಕೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಎಂದು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಅನುಮತಿ ನಿರಾಕರಣೆಯಿಂದ ಚಲನಚಿತ್ರೋತ್ಸವದ ವೇಳಾಪಟ್ಟಿಯಲ್ಲಿ ಅಂತರ ಉಂಟಾಗಿದೆ ಎಂದು ವರದಿಯಾಗಿದೆ.

“ಎ ಪೊಯೆಟ್: ಅನ್‌ಕನ್ಸೀಲ್ಡ್ ಪೊಯೆಟ್ರಿ, ಬಮಾಕೊ, ನಿರ್ದೇಶಕ ಸೆರ್ಗೆಯ್ ಐಸೆನ್‌ಸ್ಟೈನ್‌ರ 1925 ರ ಕ್ಲಾಸಿಕ್ ಬ್ಯಾಟಲ್‌ಶಿಪ್ ಪೊಟೆಮ್‌ಕಿನ್, ಸ್ಪ್ಯಾನಿಷ್ ಚಲನಚಿತ್ರ ಬೀಫ್, ಕ್ಲಾಷ್, ಈಗಲ್ಸ್ ಆಫ್ ದಿ ರಿಪಬ್ಲಿಕ್, ಹಾರ್ಟ್ ಆಫ್ ದಿ ವುಲ್ಫ್, ರೆಡ್ ರೇನ್, ರಿವರ್‌ಸ್ಟೋನ್, ದಿ ಅವರ್ ಆಫ್ ದಿ ಫರ್ನೇಸಸ್, ಟನೆಲ್ಸ್: ಸನ್ ಇನ್ ದಿ ಡಾರ್ಕ್ (ಮಾಟ್ ಟ್ರೋಂಗ್ ಬಾಂಗ್ ಟಾಯ್), ಫ್ಲೇಮ್ಸ್, ಟಿಂಬಕ್ಟು, ವಾಜಿಬ್ ಅಂಡ್ ಸಂತೋಷ್” ಅನುಮತಿ ನಿರಾಕರಿಸಿರುವ ಇತರ ಚಿತ್ರಗಳಾಗಿವೆ.

ಬ್ಯಾಟಲ್‌ಶಿಪ್ ಪೊಟೆಮ್‌ಕಿನ್ ಮತ್ತು ನಿರ್ದೇಶಕ ಅಬ್ದುರಹ್ಮಾನೆ ಸಿಸಾಕೊ ಅವರ 2006 ರ ಸಾಕ್ಷ್ಯಚಿತ್ರ ಬಮಾಕೊವನ್ನು ಭಾರತದ ಚಲನಚಿತ್ರೋತ್ಸವಗಳಲ್ಲಿ ವ್ಯಾಪಕವಾಗಿ ಪ್ರದರ್ಶಿಸಲಾಗಿದೆ. ಈ ವರ್ಷ ಸಿಸಾಕೊ ಅವರಿಗೆ ಐಎಫ್‌ಎಫ್‌ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಆಹಾರದ ಆಯ್ಕೆಗಳೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ‘ಬೀಫ್’ ಚಿತ್ರಕ್ಕೆ ಅದರ ಹೆಸರಿನ ಕಾರಣದಿಂದಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಬೇಬಿ ಹೇಳಿದ್ದಾರೆ.

ಚಲನಚಿತ್ರಗಳನ್ನು ಪ್ರದರ್ಶಿಸಲು ಅನುಮತಿ ನಿರಾಕರಿಸಿರುವುದು ಐಎಫ್‌ಎಫ್‌ಕೆಯನ್ನು ಹಳಿತಪ್ಪಿಸುವ ಅಸಂಬದ್ಧ ಮತ್ತು ಹುಚ್ಚುತನದ ಪ್ರಯತ್ನ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ತೀವ್ರ ಸರ್ವಾಧಿಕಾರಿ ಆಡಳಿತದ ನವ-ಫ್ಯಾಸಿಸ್ಟ್ ಪ್ರವೃತ್ತಿಗಳ ಇತ್ತೀಚಿನ ಉದಾಹರಣೆ’ ಎಂದು ಬೇಬಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಾವಿದರು, ಚಲನಚಿತ್ರ ನಿರ್ಮಾಪಕರು ಮತ್ತು ಎಲ್ಲಾ ಪ್ರಜಾಪ್ರಭುತ್ವ ಮನಸ್ಸಿನ ನಾಗರಿಕರು ಈ ಅವಮಾನಕರ ಕ್ರಮದ ವಿರುದ್ಧ ಧ್ವನಿ ಎತ್ತಬೇಕು ಎಂದು ಅವರು ಕರೆಕೊಟ್ಟಿದ್ದಾರೆ.

ಸಿಪಿಐ(ಎಂ) ಗೆ ಸಂಯೋಜಿತವಾಗಿರುವ ಯುವ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಚಲನಚಿತ್ರೋತ್ಸವದ ಪ್ರಮುಖ ಸ್ಥಳಗಳ ಪೈಕಿ ಒಂದರಲ್ಲಿ ಪ್ರತಿಭಟನೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...