Homeಮುಖಪುಟಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್ ಅಲೆಕ್ಸಾಂಡರ್ ಬೇಬಿ ಹೇಳಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ಕುರಿತ ಸಿನಿಮಾಗಳೂ ಇವೆ ಎಂದು ತಿಳಿಸಿದ್ದಾರೆ.

ಚಲನಚಿತ್ರೋತ್ಸವ ಡಿಸೆಂಬರ್ 12ರಂದು ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಪ್ರಾರಂಭಗೊಂಡಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ.

ಪ್ಯಾಲೆಸ್ತೀನ್ ಕುರಿತಾದ ಚಲನಚಿತ್ರಗಳಾದ “ಪ್ಯಾಲೆಸ್ಟೈನ್ 36”, “ಯೆಸ್ ಒನ್ಸ್ ಅಪೋನ್ ಅ ಟೈಮ್ ಇನ್ ಗಾಝಾ” ಮತ್ತು “ಆಲ್ ದಾಟ್ಸ್ ಲೆಫ್ಟ್ ಆಫ್ ಯು” ಪ್ರದರ್ಶನಕ್ಕೆ ಅನುಮತಿ ನಿರಾಕರಿಸಲಾಗಿದೆ. ಈ ಚಿತ್ರಗಳು ಈಗಾಗಲೇ ಚಲನಚಿತ್ರೋತ್ಸವದಲ್ಲಿ ಆರಂಭಿಕ ಪ್ರದರ್ಶನ (initial screening) ಕಂಡಿದ್ದವು ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ಟೈನ್ 36” ಎಂಬ ಅರೆಬಿಕ್ ಮತ್ತು ಇಂಗ್ಲಿಷ್ ಭಾಷೆಯ ಚಲನಚಿತ್ರವು ಚಲನಚಿತ್ರೋತ್ಸವದ ಉದ್ಘಾಟನಾ ಚಿತ್ರವಾಗಿತ್ತು.

ಡಿಸೆಂಬರ್ 12ರಂದು ನಡೆದ 30ನೇ ಅಂತಾರಾಷ್ಟ್ರೀಯ ಕೇರಳ ಚಲನಚಿತ್ರೋತ್ಸವದ (ಐಎಫ್‌ಎಫ್‌ಕೆ 2025) ಉದ್ಘಾಟನಾ ಸಮಾರಂಭದಲ್ಲಿ, ಕೇರಳದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು ಪ್ಯಾಲೆಸ್ತೀನ್‌ಗೆ ರಾಜ್ಯದ ಬೆಂಬಲದ ಬಗ್ಗೆ ಮಾತನಾಡಿದ್ದರು. ಕೇರಳದ ಜನರು ಯಾವಾಗಲೂ ಪ್ಯಾಲೆಸ್ತೀನ್ ಜನತೆಯ ಪರವಾಗಿ ಇದ್ದಾರೆ. ಈ ಕಾರಣಕ್ಕಾಗಿಯೇ ಉದ್ಘಾಟನಾ ಚಿತ್ರವಾಗಿ “ಪ್ಯಾಲೆಸ್ಟೈನ್ 36” ಅನ್ನು ಆಯ್ಕೆ ಮಾಡಿಲಾಗಿದೆ ಎಂದು ಹೇಳಿದ್ದರು. ಈ ಕಾರ್ಯಕ್ರಮದಲ್ಲಿ ಭಾರತದಲ್ಲಿನ ಪ್ಯಾಲೆಸ್ತೀನ್ ರಾಯಭಾರಿ ಅಬ್ದುಲ್ಲ ಎಂ. ಅಬು ಶಾವೇಶ್ ಅವರು ಅತಿಥಿಯಾಗಿ ಭಾಗವಹಿಸಿದ್ದರು ಮತ್ತು ಕೇರಳದ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ, 2025ರ ಏಪ್ರಿಲ್‌ನಲ್ಲಿ ನಿಧನರಾದ ನಿರ್ದೇಶಕ ಶಾಜಿ ಎನ್. ಕಾರುಣ್ ಅವರಿಗೆ ಗೌರವ ಸಲ್ಲಿಸುತ್ತಾ, ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು, “ಈ ಚಲನಚಿತ್ರೋತ್ಸವವು ಮತೀಯವಾದ ಮತ್ತು ಸರ್ವಾಧಿಕಾರವಾದಕ್ಕೆ ಪ್ರತಿರೋಧ ತೋರುವ ಹಾಗೂ ವಾಕ್‌ ಸ್ವಾತಂತ್ರ್ಯ ಮತ್ತು ಸೃಜನಶೀಲ ಅಭಿವ್ಯಕ್ತಿಯನ್ನು ಆಚರಿಸುವ ವೇದಿಕೆ” ಎಂದು ಹೇಳಿದ್ದರು.

ಚಲನಚಿತ್ರೋತ್ಸವವನ್ನು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿ ಆಯೋಜಿಸುತ್ತದೆ. ಇದು ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಗೆ ವರದಿ ಮಾಡುವ ಸ್ವಾಯತ್ತ ಸಂಸ್ಥೆಯಾಗಿದೆ. ಈ ವಾರ್ಷಿಕ ಕಾರ್ಯಕ್ರಮಕ್ಕೆ ಸಾವಿರಾರು ಪ್ರತಿನಿಧಿಗಳು ಭಾಗವಹಿಸುತ್ತಾರೆ. 2025ರ 30ನೇ ಆವೃತ್ತಿಯಲ್ಲಿ 13,000ಕ್ಕೂ ಹೆಚ್ಚು ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಆಯೋಜಕರು ಚಲನಚಿತ್ರಗಳ ಹೆಸರುಗಳನ್ನು ಮುಂಚಿತವಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಅನುಮೋದನೆಗಾಗಿ ಸಲ್ಲಿಸುತ್ತಾರೆ. ಸಚಿವಾಲಯವು ರಾಜತಾಂತ್ರಿಕ ಸಂಬಂಧಗಳಿಗೆ ಹಾನಿಯಾಗುವಂತೆ ತೋರುವ ಚಿತ್ರಗಳನ್ನು ನಿರಾಕರಿಸಬಹುದು.

ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ್ದಕ್ಕೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಎಂದು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಅನುಮತಿ ನಿರಾಕರಣೆಯಿಂದ ಚಲನಚಿತ್ರೋತ್ಸವದ ವೇಳಾಪಟ್ಟಿಯಲ್ಲಿ ಅಂತರ ಉಂಟಾಗಿದೆ ಎಂದು ವರದಿಯಾಗಿದೆ.

“ಎ ಪೊಯೆಟ್: ಅನ್‌ಕನ್ಸೀಲ್ಡ್ ಪೊಯೆಟ್ರಿ, ಬಮಾಕೊ, ನಿರ್ದೇಶಕ ಸೆರ್ಗೆಯ್ ಐಸೆನ್‌ಸ್ಟೈನ್‌ರ 1925 ರ ಕ್ಲಾಸಿಕ್ ಬ್ಯಾಟಲ್‌ಶಿಪ್ ಪೊಟೆಮ್‌ಕಿನ್, ಸ್ಪ್ಯಾನಿಷ್ ಚಲನಚಿತ್ರ ಬೀಫ್, ಕ್ಲಾಷ್, ಈಗಲ್ಸ್ ಆಫ್ ದಿ ರಿಪಬ್ಲಿಕ್, ಹಾರ್ಟ್ ಆಫ್ ದಿ ವುಲ್ಫ್, ರೆಡ್ ರೇನ್, ರಿವರ್‌ಸ್ಟೋನ್, ದಿ ಅವರ್ ಆಫ್ ದಿ ಫರ್ನೇಸಸ್, ಟನೆಲ್ಸ್: ಸನ್ ಇನ್ ದಿ ಡಾರ್ಕ್ (ಮಾಟ್ ಟ್ರೋಂಗ್ ಬಾಂಗ್ ಟಾಯ್), ಫ್ಲೇಮ್ಸ್, ಟಿಂಬಕ್ಟು, ವಾಜಿಬ್ ಅಂಡ್ ಸಂತೋಷ್” ಅನುಮತಿ ನಿರಾಕರಿಸಿರುವ ಇತರ ಚಿತ್ರಗಳಾಗಿವೆ.

ಬ್ಯಾಟಲ್‌ಶಿಪ್ ಪೊಟೆಮ್‌ಕಿನ್ ಮತ್ತು ನಿರ್ದೇಶಕ ಅಬ್ದುರಹ್ಮಾನೆ ಸಿಸಾಕೊ ಅವರ 2006 ರ ಸಾಕ್ಷ್ಯಚಿತ್ರ ಬಮಾಕೊವನ್ನು ಭಾರತದ ಚಲನಚಿತ್ರೋತ್ಸವಗಳಲ್ಲಿ ವ್ಯಾಪಕವಾಗಿ ಪ್ರದರ್ಶಿಸಲಾಗಿದೆ. ಈ ವರ್ಷ ಸಿಸಾಕೊ ಅವರಿಗೆ ಐಎಫ್‌ಎಫ್‌ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಆಹಾರದ ಆಯ್ಕೆಗಳೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ‘ಬೀಫ್’ ಚಿತ್ರಕ್ಕೆ ಅದರ ಹೆಸರಿನ ಕಾರಣದಿಂದಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಬೇಬಿ ಹೇಳಿದ್ದಾರೆ.

ಚಲನಚಿತ್ರಗಳನ್ನು ಪ್ರದರ್ಶಿಸಲು ಅನುಮತಿ ನಿರಾಕರಿಸಿರುವುದು ಐಎಫ್‌ಎಫ್‌ಕೆಯನ್ನು ಹಳಿತಪ್ಪಿಸುವ ಅಸಂಬದ್ಧ ಮತ್ತು ಹುಚ್ಚುತನದ ಪ್ರಯತ್ನ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ತೀವ್ರ ಸರ್ವಾಧಿಕಾರಿ ಆಡಳಿತದ ನವ-ಫ್ಯಾಸಿಸ್ಟ್ ಪ್ರವೃತ್ತಿಗಳ ಇತ್ತೀಚಿನ ಉದಾಹರಣೆ’ ಎಂದು ಬೇಬಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಾವಿದರು, ಚಲನಚಿತ್ರ ನಿರ್ಮಾಪಕರು ಮತ್ತು ಎಲ್ಲಾ ಪ್ರಜಾಪ್ರಭುತ್ವ ಮನಸ್ಸಿನ ನಾಗರಿಕರು ಈ ಅವಮಾನಕರ ಕ್ರಮದ ವಿರುದ್ಧ ಧ್ವನಿ ಎತ್ತಬೇಕು ಎಂದು ಅವರು ಕರೆಕೊಟ್ಟಿದ್ದಾರೆ.

ಸಿಪಿಐ(ಎಂ) ಗೆ ಸಂಯೋಜಿತವಾಗಿರುವ ಯುವ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಚಲನಚಿತ್ರೋತ್ಸವದ ಪ್ರಮುಖ ಸ್ಥಳಗಳ ಪೈಕಿ ಒಂದರಲ್ಲಿ ಪ್ರತಿಭಟನೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...