Homeಮುಖಪುಟಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್ ಅಲೆಕ್ಸಾಂಡರ್ ಬೇಬಿ ಹೇಳಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ಕುರಿತ ಸಿನಿಮಾಗಳೂ ಇವೆ ಎಂದು ತಿಳಿಸಿದ್ದಾರೆ.

ಚಲನಚಿತ್ರೋತ್ಸವ ಡಿಸೆಂಬರ್ 12ರಂದು ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಪ್ರಾರಂಭಗೊಂಡಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ.

ಪ್ಯಾಲೆಸ್ತೀನ್ ಕುರಿತಾದ ಚಲನಚಿತ್ರಗಳಾದ “ಪ್ಯಾಲೆಸ್ಟೈನ್ 36”, “ಯೆಸ್ ಒನ್ಸ್ ಅಪೋನ್ ಅ ಟೈಮ್ ಇನ್ ಗಾಝಾ” ಮತ್ತು “ಆಲ್ ದಾಟ್ಸ್ ಲೆಫ್ಟ್ ಆಫ್ ಯು” ಪ್ರದರ್ಶನಕ್ಕೆ ಅನುಮತಿ ನಿರಾಕರಿಸಲಾಗಿದೆ. ಈ ಚಿತ್ರಗಳು ಈಗಾಗಲೇ ಚಲನಚಿತ್ರೋತ್ಸವದಲ್ಲಿ ಆರಂಭಿಕ ಪ್ರದರ್ಶನ (initial screening) ಕಂಡಿದ್ದವು ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ಟೈನ್ 36” ಎಂಬ ಅರೆಬಿಕ್ ಮತ್ತು ಇಂಗ್ಲಿಷ್ ಭಾಷೆಯ ಚಲನಚಿತ್ರವು ಚಲನಚಿತ್ರೋತ್ಸವದ ಉದ್ಘಾಟನಾ ಚಿತ್ರವಾಗಿತ್ತು.

ಡಿಸೆಂಬರ್ 12ರಂದು ನಡೆದ 30ನೇ ಅಂತಾರಾಷ್ಟ್ರೀಯ ಕೇರಳ ಚಲನಚಿತ್ರೋತ್ಸವದ (ಐಎಫ್‌ಎಫ್‌ಕೆ 2025) ಉದ್ಘಾಟನಾ ಸಮಾರಂಭದಲ್ಲಿ, ಕೇರಳದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು ಪ್ಯಾಲೆಸ್ತೀನ್‌ಗೆ ರಾಜ್ಯದ ಬೆಂಬಲದ ಬಗ್ಗೆ ಮಾತನಾಡಿದ್ದರು. ಕೇರಳದ ಜನರು ಯಾವಾಗಲೂ ಪ್ಯಾಲೆಸ್ತೀನ್ ಜನತೆಯ ಪರವಾಗಿ ಇದ್ದಾರೆ. ಈ ಕಾರಣಕ್ಕಾಗಿಯೇ ಉದ್ಘಾಟನಾ ಚಿತ್ರವಾಗಿ “ಪ್ಯಾಲೆಸ್ಟೈನ್ 36” ಅನ್ನು ಆಯ್ಕೆ ಮಾಡಿಲಾಗಿದೆ ಎಂದು ಹೇಳಿದ್ದರು. ಈ ಕಾರ್ಯಕ್ರಮದಲ್ಲಿ ಭಾರತದಲ್ಲಿನ ಪ್ಯಾಲೆಸ್ತೀನ್ ರಾಯಭಾರಿ ಅಬ್ದುಲ್ಲ ಎಂ. ಅಬು ಶಾವೇಶ್ ಅವರು ಅತಿಥಿಯಾಗಿ ಭಾಗವಹಿಸಿದ್ದರು ಮತ್ತು ಕೇರಳದ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ, 2025ರ ಏಪ್ರಿಲ್‌ನಲ್ಲಿ ನಿಧನರಾದ ನಿರ್ದೇಶಕ ಶಾಜಿ ಎನ್. ಕಾರುಣ್ ಅವರಿಗೆ ಗೌರವ ಸಲ್ಲಿಸುತ್ತಾ, ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು, “ಈ ಚಲನಚಿತ್ರೋತ್ಸವವು ಮತೀಯವಾದ ಮತ್ತು ಸರ್ವಾಧಿಕಾರವಾದಕ್ಕೆ ಪ್ರತಿರೋಧ ತೋರುವ ಹಾಗೂ ವಾಕ್‌ ಸ್ವಾತಂತ್ರ್ಯ ಮತ್ತು ಸೃಜನಶೀಲ ಅಭಿವ್ಯಕ್ತಿಯನ್ನು ಆಚರಿಸುವ ವೇದಿಕೆ” ಎಂದು ಹೇಳಿದ್ದರು.

ಚಲನಚಿತ್ರೋತ್ಸವವನ್ನು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿ ಆಯೋಜಿಸುತ್ತದೆ. ಇದು ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಗೆ ವರದಿ ಮಾಡುವ ಸ್ವಾಯತ್ತ ಸಂಸ್ಥೆಯಾಗಿದೆ. ಈ ವಾರ್ಷಿಕ ಕಾರ್ಯಕ್ರಮಕ್ಕೆ ಸಾವಿರಾರು ಪ್ರತಿನಿಧಿಗಳು ಭಾಗವಹಿಸುತ್ತಾರೆ. 2025ರ 30ನೇ ಆವೃತ್ತಿಯಲ್ಲಿ 13,000ಕ್ಕೂ ಹೆಚ್ಚು ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಆಯೋಜಕರು ಚಲನಚಿತ್ರಗಳ ಹೆಸರುಗಳನ್ನು ಮುಂಚಿತವಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಅನುಮೋದನೆಗಾಗಿ ಸಲ್ಲಿಸುತ್ತಾರೆ. ಸಚಿವಾಲಯವು ರಾಜತಾಂತ್ರಿಕ ಸಂಬಂಧಗಳಿಗೆ ಹಾನಿಯಾಗುವಂತೆ ತೋರುವ ಚಿತ್ರಗಳನ್ನು ನಿರಾಕರಿಸಬಹುದು.

ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ್ದಕ್ಕೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಎಂದು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಅನುಮತಿ ನಿರಾಕರಣೆಯಿಂದ ಚಲನಚಿತ್ರೋತ್ಸವದ ವೇಳಾಪಟ್ಟಿಯಲ್ಲಿ ಅಂತರ ಉಂಟಾಗಿದೆ ಎಂದು ವರದಿಯಾಗಿದೆ.

“ಎ ಪೊಯೆಟ್: ಅನ್‌ಕನ್ಸೀಲ್ಡ್ ಪೊಯೆಟ್ರಿ, ಬಮಾಕೊ, ನಿರ್ದೇಶಕ ಸೆರ್ಗೆಯ್ ಐಸೆನ್‌ಸ್ಟೈನ್‌ರ 1925 ರ ಕ್ಲಾಸಿಕ್ ಬ್ಯಾಟಲ್‌ಶಿಪ್ ಪೊಟೆಮ್‌ಕಿನ್, ಸ್ಪ್ಯಾನಿಷ್ ಚಲನಚಿತ್ರ ಬೀಫ್, ಕ್ಲಾಷ್, ಈಗಲ್ಸ್ ಆಫ್ ದಿ ರಿಪಬ್ಲಿಕ್, ಹಾರ್ಟ್ ಆಫ್ ದಿ ವುಲ್ಫ್, ರೆಡ್ ರೇನ್, ರಿವರ್‌ಸ್ಟೋನ್, ದಿ ಅವರ್ ಆಫ್ ದಿ ಫರ್ನೇಸಸ್, ಟನೆಲ್ಸ್: ಸನ್ ಇನ್ ದಿ ಡಾರ್ಕ್ (ಮಾಟ್ ಟ್ರೋಂಗ್ ಬಾಂಗ್ ಟಾಯ್), ಫ್ಲೇಮ್ಸ್, ಟಿಂಬಕ್ಟು, ವಾಜಿಬ್ ಅಂಡ್ ಸಂತೋಷ್” ಅನುಮತಿ ನಿರಾಕರಿಸಿರುವ ಇತರ ಚಿತ್ರಗಳಾಗಿವೆ.

ಬ್ಯಾಟಲ್‌ಶಿಪ್ ಪೊಟೆಮ್‌ಕಿನ್ ಮತ್ತು ನಿರ್ದೇಶಕ ಅಬ್ದುರಹ್ಮಾನೆ ಸಿಸಾಕೊ ಅವರ 2006 ರ ಸಾಕ್ಷ್ಯಚಿತ್ರ ಬಮಾಕೊವನ್ನು ಭಾರತದ ಚಲನಚಿತ್ರೋತ್ಸವಗಳಲ್ಲಿ ವ್ಯಾಪಕವಾಗಿ ಪ್ರದರ್ಶಿಸಲಾಗಿದೆ. ಈ ವರ್ಷ ಸಿಸಾಕೊ ಅವರಿಗೆ ಐಎಫ್‌ಎಫ್‌ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಆಹಾರದ ಆಯ್ಕೆಗಳೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ‘ಬೀಫ್’ ಚಿತ್ರಕ್ಕೆ ಅದರ ಹೆಸರಿನ ಕಾರಣದಿಂದಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಬೇಬಿ ಹೇಳಿದ್ದಾರೆ.

ಚಲನಚಿತ್ರಗಳನ್ನು ಪ್ರದರ್ಶಿಸಲು ಅನುಮತಿ ನಿರಾಕರಿಸಿರುವುದು ಐಎಫ್‌ಎಫ್‌ಕೆಯನ್ನು ಹಳಿತಪ್ಪಿಸುವ ಅಸಂಬದ್ಧ ಮತ್ತು ಹುಚ್ಚುತನದ ಪ್ರಯತ್ನ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ತೀವ್ರ ಸರ್ವಾಧಿಕಾರಿ ಆಡಳಿತದ ನವ-ಫ್ಯಾಸಿಸ್ಟ್ ಪ್ರವೃತ್ತಿಗಳ ಇತ್ತೀಚಿನ ಉದಾಹರಣೆ’ ಎಂದು ಬೇಬಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಾವಿದರು, ಚಲನಚಿತ್ರ ನಿರ್ಮಾಪಕರು ಮತ್ತು ಎಲ್ಲಾ ಪ್ರಜಾಪ್ರಭುತ್ವ ಮನಸ್ಸಿನ ನಾಗರಿಕರು ಈ ಅವಮಾನಕರ ಕ್ರಮದ ವಿರುದ್ಧ ಧ್ವನಿ ಎತ್ತಬೇಕು ಎಂದು ಅವರು ಕರೆಕೊಟ್ಟಿದ್ದಾರೆ.

ಸಿಪಿಐ(ಎಂ) ಗೆ ಸಂಯೋಜಿತವಾಗಿರುವ ಯುವ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಚಲನಚಿತ್ರೋತ್ಸವದ ಪ್ರಮುಖ ಸ್ಥಳಗಳ ಪೈಕಿ ಒಂದರಲ್ಲಿ ಪ್ರತಿಭಟನೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...