Homeಮುಖಪುಟಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

- Advertisement -
- Advertisement -

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್ ಅಲೆಕ್ಸಾಂಡರ್ ಬೇಬಿ ಹೇಳಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ಕುರಿತ ಸಿನಿಮಾಗಳೂ ಇವೆ ಎಂದು ತಿಳಿಸಿದ್ದಾರೆ.

ಚಲನಚಿತ್ರೋತ್ಸವ ಡಿಸೆಂಬರ್ 12ರಂದು ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಪ್ರಾರಂಭಗೊಂಡಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ.

ಪ್ಯಾಲೆಸ್ತೀನ್ ಕುರಿತಾದ ಚಲನಚಿತ್ರಗಳಾದ “ಪ್ಯಾಲೆಸ್ಟೈನ್ 36”, “ಯೆಸ್ ಒನ್ಸ್ ಅಪೋನ್ ಅ ಟೈಮ್ ಇನ್ ಗಾಝಾ” ಮತ್ತು “ಆಲ್ ದಾಟ್ಸ್ ಲೆಫ್ಟ್ ಆಫ್ ಯು” ಪ್ರದರ್ಶನಕ್ಕೆ ಅನುಮತಿ ನಿರಾಕರಿಸಲಾಗಿದೆ. ಈ ಚಿತ್ರಗಳು ಈಗಾಗಲೇ ಚಲನಚಿತ್ರೋತ್ಸವದಲ್ಲಿ ಆರಂಭಿಕ ಪ್ರದರ್ಶನ (initial screening) ಕಂಡಿದ್ದವು ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ಟೈನ್ 36” ಎಂಬ ಅರೆಬಿಕ್ ಮತ್ತು ಇಂಗ್ಲಿಷ್ ಭಾಷೆಯ ಚಲನಚಿತ್ರವು ಚಲನಚಿತ್ರೋತ್ಸವದ ಉದ್ಘಾಟನಾ ಚಿತ್ರವಾಗಿತ್ತು.

ಡಿಸೆಂಬರ್ 12ರಂದು ನಡೆದ 30ನೇ ಅಂತಾರಾಷ್ಟ್ರೀಯ ಕೇರಳ ಚಲನಚಿತ್ರೋತ್ಸವದ (ಐಎಫ್‌ಎಫ್‌ಕೆ 2025) ಉದ್ಘಾಟನಾ ಸಮಾರಂಭದಲ್ಲಿ, ಕೇರಳದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು ಪ್ಯಾಲೆಸ್ತೀನ್‌ಗೆ ರಾಜ್ಯದ ಬೆಂಬಲದ ಬಗ್ಗೆ ಮಾತನಾಡಿದ್ದರು. ಕೇರಳದ ಜನರು ಯಾವಾಗಲೂ ಪ್ಯಾಲೆಸ್ತೀನ್ ಜನತೆಯ ಪರವಾಗಿ ಇದ್ದಾರೆ. ಈ ಕಾರಣಕ್ಕಾಗಿಯೇ ಉದ್ಘಾಟನಾ ಚಿತ್ರವಾಗಿ “ಪ್ಯಾಲೆಸ್ಟೈನ್ 36” ಅನ್ನು ಆಯ್ಕೆ ಮಾಡಿಲಾಗಿದೆ ಎಂದು ಹೇಳಿದ್ದರು. ಈ ಕಾರ್ಯಕ್ರಮದಲ್ಲಿ ಭಾರತದಲ್ಲಿನ ಪ್ಯಾಲೆಸ್ತೀನ್ ರಾಯಭಾರಿ ಅಬ್ದುಲ್ಲ ಎಂ. ಅಬು ಶಾವೇಶ್ ಅವರು ಅತಿಥಿಯಾಗಿ ಭಾಗವಹಿಸಿದ್ದರು ಮತ್ತು ಕೇರಳದ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ, 2025ರ ಏಪ್ರಿಲ್‌ನಲ್ಲಿ ನಿಧನರಾದ ನಿರ್ದೇಶಕ ಶಾಜಿ ಎನ್. ಕಾರುಣ್ ಅವರಿಗೆ ಗೌರವ ಸಲ್ಲಿಸುತ್ತಾ, ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ಅವರು, “ಈ ಚಲನಚಿತ್ರೋತ್ಸವವು ಮತೀಯವಾದ ಮತ್ತು ಸರ್ವಾಧಿಕಾರವಾದಕ್ಕೆ ಪ್ರತಿರೋಧ ತೋರುವ ಹಾಗೂ ವಾಕ್‌ ಸ್ವಾತಂತ್ರ್ಯ ಮತ್ತು ಸೃಜನಶೀಲ ಅಭಿವ್ಯಕ್ತಿಯನ್ನು ಆಚರಿಸುವ ವೇದಿಕೆ” ಎಂದು ಹೇಳಿದ್ದರು.

ಚಲನಚಿತ್ರೋತ್ಸವವನ್ನು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿ ಆಯೋಜಿಸುತ್ತದೆ. ಇದು ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಗೆ ವರದಿ ಮಾಡುವ ಸ್ವಾಯತ್ತ ಸಂಸ್ಥೆಯಾಗಿದೆ. ಈ ವಾರ್ಷಿಕ ಕಾರ್ಯಕ್ರಮಕ್ಕೆ ಸಾವಿರಾರು ಪ್ರತಿನಿಧಿಗಳು ಭಾಗವಹಿಸುತ್ತಾರೆ. 2025ರ 30ನೇ ಆವೃತ್ತಿಯಲ್ಲಿ 13,000ಕ್ಕೂ ಹೆಚ್ಚು ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಆಯೋಜಕರು ಚಲನಚಿತ್ರಗಳ ಹೆಸರುಗಳನ್ನು ಮುಂಚಿತವಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಅನುಮೋದನೆಗಾಗಿ ಸಲ್ಲಿಸುತ್ತಾರೆ. ಸಚಿವಾಲಯವು ರಾಜತಾಂತ್ರಿಕ ಸಂಬಂಧಗಳಿಗೆ ಹಾನಿಯಾಗುವಂತೆ ತೋರುವ ಚಿತ್ರಗಳನ್ನು ನಿರಾಕರಿಸಬಹುದು.

ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ್ದಕ್ಕೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಎಂದು ಕೇರಳ ರಾಜ್ಯ ಚಲಚಿತ್ರ ಅಕಾಡೆಮಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಅನುಮತಿ ನಿರಾಕರಣೆಯಿಂದ ಚಲನಚಿತ್ರೋತ್ಸವದ ವೇಳಾಪಟ್ಟಿಯಲ್ಲಿ ಅಂತರ ಉಂಟಾಗಿದೆ ಎಂದು ವರದಿಯಾಗಿದೆ.

“ಎ ಪೊಯೆಟ್: ಅನ್‌ಕನ್ಸೀಲ್ಡ್ ಪೊಯೆಟ್ರಿ, ಬಮಾಕೊ, ನಿರ್ದೇಶಕ ಸೆರ್ಗೆಯ್ ಐಸೆನ್‌ಸ್ಟೈನ್‌ರ 1925 ರ ಕ್ಲಾಸಿಕ್ ಬ್ಯಾಟಲ್‌ಶಿಪ್ ಪೊಟೆಮ್‌ಕಿನ್, ಸ್ಪ್ಯಾನಿಷ್ ಚಲನಚಿತ್ರ ಬೀಫ್, ಕ್ಲಾಷ್, ಈಗಲ್ಸ್ ಆಫ್ ದಿ ರಿಪಬ್ಲಿಕ್, ಹಾರ್ಟ್ ಆಫ್ ದಿ ವುಲ್ಫ್, ರೆಡ್ ರೇನ್, ರಿವರ್‌ಸ್ಟೋನ್, ದಿ ಅವರ್ ಆಫ್ ದಿ ಫರ್ನೇಸಸ್, ಟನೆಲ್ಸ್: ಸನ್ ಇನ್ ದಿ ಡಾರ್ಕ್ (ಮಾಟ್ ಟ್ರೋಂಗ್ ಬಾಂಗ್ ಟಾಯ್), ಫ್ಲೇಮ್ಸ್, ಟಿಂಬಕ್ಟು, ವಾಜಿಬ್ ಅಂಡ್ ಸಂತೋಷ್” ಅನುಮತಿ ನಿರಾಕರಿಸಿರುವ ಇತರ ಚಿತ್ರಗಳಾಗಿವೆ.

ಬ್ಯಾಟಲ್‌ಶಿಪ್ ಪೊಟೆಮ್‌ಕಿನ್ ಮತ್ತು ನಿರ್ದೇಶಕ ಅಬ್ದುರಹ್ಮಾನೆ ಸಿಸಾಕೊ ಅವರ 2006 ರ ಸಾಕ್ಷ್ಯಚಿತ್ರ ಬಮಾಕೊವನ್ನು ಭಾರತದ ಚಲನಚಿತ್ರೋತ್ಸವಗಳಲ್ಲಿ ವ್ಯಾಪಕವಾಗಿ ಪ್ರದರ್ಶಿಸಲಾಗಿದೆ. ಈ ವರ್ಷ ಸಿಸಾಕೊ ಅವರಿಗೆ ಐಎಫ್‌ಎಫ್‌ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಆಹಾರದ ಆಯ್ಕೆಗಳೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ‘ಬೀಫ್’ ಚಿತ್ರಕ್ಕೆ ಅದರ ಹೆಸರಿನ ಕಾರಣದಿಂದಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಬೇಬಿ ಹೇಳಿದ್ದಾರೆ.

ಚಲನಚಿತ್ರಗಳನ್ನು ಪ್ರದರ್ಶಿಸಲು ಅನುಮತಿ ನಿರಾಕರಿಸಿರುವುದು ಐಎಫ್‌ಎಫ್‌ಕೆಯನ್ನು ಹಳಿತಪ್ಪಿಸುವ ಅಸಂಬದ್ಧ ಮತ್ತು ಹುಚ್ಚುತನದ ಪ್ರಯತ್ನ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ತೀವ್ರ ಸರ್ವಾಧಿಕಾರಿ ಆಡಳಿತದ ನವ-ಫ್ಯಾಸಿಸ್ಟ್ ಪ್ರವೃತ್ತಿಗಳ ಇತ್ತೀಚಿನ ಉದಾಹರಣೆ’ ಎಂದು ಬೇಬಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಾವಿದರು, ಚಲನಚಿತ್ರ ನಿರ್ಮಾಪಕರು ಮತ್ತು ಎಲ್ಲಾ ಪ್ರಜಾಪ್ರಭುತ್ವ ಮನಸ್ಸಿನ ನಾಗರಿಕರು ಈ ಅವಮಾನಕರ ಕ್ರಮದ ವಿರುದ್ಧ ಧ್ವನಿ ಎತ್ತಬೇಕು ಎಂದು ಅವರು ಕರೆಕೊಟ್ಟಿದ್ದಾರೆ.

ಸಿಪಿಐ(ಎಂ) ಗೆ ಸಂಯೋಜಿತವಾಗಿರುವ ಯುವ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಚಲನಚಿತ್ರೋತ್ಸವದ ಪ್ರಮುಖ ಸ್ಥಳಗಳ ಪೈಕಿ ಒಂದರಲ್ಲಿ ಪ್ರತಿಭಟನೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...