Homeಮುಖಪುಟಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಸ್ಫರ್ಧಿಸಲಿದ್ದಾರೆ. 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್ ಅವರು ಕೇರಳದ ವೆಂಗಾರಾ ಕ್ಷೇತ್ರದಿಂದ ಸ್ಫರ್ಧಿಸಲಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಫರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ವಿರುದ್ಧ ಅವರು ಕಣಕ್ಕಿಳಿದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರಂತೆ ಸಮನಾಗಿ ಟ್ರಾನ್ಸ್‌ಜೆಂಡರ್‌ಗಳು ಸಹ ಉತ್ತಮ ನಾಯಕರಾಗಬಹು ಎಂಬುದನ್ನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಅನನ್ಯಾ ಕುಮಾರಿ ಹೇಳಿದ್ದಾರೆ.

“ನಾವು ಯಾವುದೇ ಗಂಡು ಅಥವಾ ಹೆಣ್ಣಿನಂತೆಯೇ ಸಾಮರ್ಥ್ಯಗಳನ್ನು ಹೊಂದಿದ್ದೇವೆ. ನಮಗೆ ಯಾವುದೇ ಸಹಾನುಭೂತಿ ಬೇಡ. ಇತರರಂತೆ ನಮಗೂ ಸಮಾನವಾಗಿ ಪರಿಗಣಿಸಿದರೆ ಸಾಕು. ತೃತೀಯಲಿಂಗಿ ಸಮುದಾಯದವರು ಸಹ ಇತರರಂತೆ ಪ್ರತಿಭಾವಂತರು ಮತ್ತು ಯಾವುದೇ ಕ್ಷೇತ್ರದಲ್ಲಿ ತಮ್ಮನ್ನು ಪ್ರತಿನಿಧಿಸಬಹುದು” ಎಂದು ಅನನ್ಯಾ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅನನ್ಯಾ ಅವರ ನಿರ್ಧಾರವನ್ನು ಅವರ ಪ್ರತಿಸ್ಫರ್ಧಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಸ್ವಾಗತಿಸಿದ್ದಾರೆ. ತೃತೀಯಲಿಂಗಿಗಳು ಸಹ ಸಮಾಜದ ಭಾಗವಾಗಿದ್ದಾರೆ ಮತ್ತು ಚುನಾವಣೆಯಲ್ಲಿ ಹೋರಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಚುನಾವಣಾ ಪ್ರಚಾರ ಮಾಡುವಾಗ ಯಾವುದೇ ತಾರತಮ್ಯವನ್ನು ಎದುರಿಸದ ಕಾರಣ ಚುನಾವಣೆಯಲ್ಲಿ ಮಾತ್ರವಲ್ಲದೆ ಜನರ ಹೃದಯವನ್ನೂ ಗೆಲ್ಲುವ ಭರವಸೆ ಇದೆ ಎಂದು ಅನನ್ಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೂ, ತೃತೀಯಲಿಂಗಿ ಸಮುದಾಯದವರು ತಮ್ಮ ಮನೆಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಚುನಾವಣೆಯಲ್ಲಿ ತಾನು ಗೆದ್ದರೆ, ಇವರುಗಳು ತಮ್ಮ ಮನೆಗಳಲ್ಲಿ ಮತ್ತು ಸಮಾಜದಲ್ಲಿ ಸುರಕ್ಷತವಾಗಿರಲು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನೆರೆಯ ರಾಜ್ಯ ತಮಿಳುನಾಡಿನಲ್ಲಿ, ಮಧುರೈ ದಕ್ಷಿಣ ಕ್ಷೇತ್ರದಿಂದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಕನ್ನಮ್ಮ ಎಂಬ ತೃತೀಯಲಿಂಗಿ ಸ್ಪರ್ಧಿಸುತ್ತಿದ್ದು, ಮಧುರೈಯನ್ನು ಮಾದರಿ ನಗರವನ್ನಾಗಿ ಮಾಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...