Homeಮುಖಪುಟಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಸ್ಫರ್ಧಿಸಲಿದ್ದಾರೆ. 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್ ಅವರು ಕೇರಳದ ವೆಂಗಾರಾ ಕ್ಷೇತ್ರದಿಂದ ಸ್ಫರ್ಧಿಸಲಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಫರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ವಿರುದ್ಧ ಅವರು ಕಣಕ್ಕಿಳಿದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರಂತೆ ಸಮನಾಗಿ ಟ್ರಾನ್ಸ್‌ಜೆಂಡರ್‌ಗಳು ಸಹ ಉತ್ತಮ ನಾಯಕರಾಗಬಹು ಎಂಬುದನ್ನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಅನನ್ಯಾ ಕುಮಾರಿ ಹೇಳಿದ್ದಾರೆ.

“ನಾವು ಯಾವುದೇ ಗಂಡು ಅಥವಾ ಹೆಣ್ಣಿನಂತೆಯೇ ಸಾಮರ್ಥ್ಯಗಳನ್ನು ಹೊಂದಿದ್ದೇವೆ. ನಮಗೆ ಯಾವುದೇ ಸಹಾನುಭೂತಿ ಬೇಡ. ಇತರರಂತೆ ನಮಗೂ ಸಮಾನವಾಗಿ ಪರಿಗಣಿಸಿದರೆ ಸಾಕು. ತೃತೀಯಲಿಂಗಿ ಸಮುದಾಯದವರು ಸಹ ಇತರರಂತೆ ಪ್ರತಿಭಾವಂತರು ಮತ್ತು ಯಾವುದೇ ಕ್ಷೇತ್ರದಲ್ಲಿ ತಮ್ಮನ್ನು ಪ್ರತಿನಿಧಿಸಬಹುದು” ಎಂದು ಅನನ್ಯಾ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅನನ್ಯಾ ಅವರ ನಿರ್ಧಾರವನ್ನು ಅವರ ಪ್ರತಿಸ್ಫರ್ಧಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಸ್ವಾಗತಿಸಿದ್ದಾರೆ. ತೃತೀಯಲಿಂಗಿಗಳು ಸಹ ಸಮಾಜದ ಭಾಗವಾಗಿದ್ದಾರೆ ಮತ್ತು ಚುನಾವಣೆಯಲ್ಲಿ ಹೋರಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಚುನಾವಣಾ ಪ್ರಚಾರ ಮಾಡುವಾಗ ಯಾವುದೇ ತಾರತಮ್ಯವನ್ನು ಎದುರಿಸದ ಕಾರಣ ಚುನಾವಣೆಯಲ್ಲಿ ಮಾತ್ರವಲ್ಲದೆ ಜನರ ಹೃದಯವನ್ನೂ ಗೆಲ್ಲುವ ಭರವಸೆ ಇದೆ ಎಂದು ಅನನ್ಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೂ, ತೃತೀಯಲಿಂಗಿ ಸಮುದಾಯದವರು ತಮ್ಮ ಮನೆಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಚುನಾವಣೆಯಲ್ಲಿ ತಾನು ಗೆದ್ದರೆ, ಇವರುಗಳು ತಮ್ಮ ಮನೆಗಳಲ್ಲಿ ಮತ್ತು ಸಮಾಜದಲ್ಲಿ ಸುರಕ್ಷತವಾಗಿರಲು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನೆರೆಯ ರಾಜ್ಯ ತಮಿಳುನಾಡಿನಲ್ಲಿ, ಮಧುರೈ ದಕ್ಷಿಣ ಕ್ಷೇತ್ರದಿಂದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಕನ್ನಮ್ಮ ಎಂಬ ತೃತೀಯಲಿಂಗಿ ಸ್ಪರ್ಧಿಸುತ್ತಿದ್ದು, ಮಧುರೈಯನ್ನು ಮಾದರಿ ನಗರವನ್ನಾಗಿ ಮಾಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...