Homeಮುಖಪುಟಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಸ್ಫರ್ಧಿಸಲಿದ್ದಾರೆ. 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್ ಅವರು ಕೇರಳದ ವೆಂಗಾರಾ ಕ್ಷೇತ್ರದಿಂದ ಸ್ಫರ್ಧಿಸಲಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಫರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ವಿರುದ್ಧ ಅವರು ಕಣಕ್ಕಿಳಿದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರಂತೆ ಸಮನಾಗಿ ಟ್ರಾನ್ಸ್‌ಜೆಂಡರ್‌ಗಳು ಸಹ ಉತ್ತಮ ನಾಯಕರಾಗಬಹು ಎಂಬುದನ್ನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಅನನ್ಯಾ ಕುಮಾರಿ ಹೇಳಿದ್ದಾರೆ.

“ನಾವು ಯಾವುದೇ ಗಂಡು ಅಥವಾ ಹೆಣ್ಣಿನಂತೆಯೇ ಸಾಮರ್ಥ್ಯಗಳನ್ನು ಹೊಂದಿದ್ದೇವೆ. ನಮಗೆ ಯಾವುದೇ ಸಹಾನುಭೂತಿ ಬೇಡ. ಇತರರಂತೆ ನಮಗೂ ಸಮಾನವಾಗಿ ಪರಿಗಣಿಸಿದರೆ ಸಾಕು. ತೃತೀಯಲಿಂಗಿ ಸಮುದಾಯದವರು ಸಹ ಇತರರಂತೆ ಪ್ರತಿಭಾವಂತರು ಮತ್ತು ಯಾವುದೇ ಕ್ಷೇತ್ರದಲ್ಲಿ ತಮ್ಮನ್ನು ಪ್ರತಿನಿಧಿಸಬಹುದು” ಎಂದು ಅನನ್ಯಾ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅನನ್ಯಾ ಅವರ ನಿರ್ಧಾರವನ್ನು ಅವರ ಪ್ರತಿಸ್ಫರ್ಧಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಸ್ವಾಗತಿಸಿದ್ದಾರೆ. ತೃತೀಯಲಿಂಗಿಗಳು ಸಹ ಸಮಾಜದ ಭಾಗವಾಗಿದ್ದಾರೆ ಮತ್ತು ಚುನಾವಣೆಯಲ್ಲಿ ಹೋರಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಚುನಾವಣಾ ಪ್ರಚಾರ ಮಾಡುವಾಗ ಯಾವುದೇ ತಾರತಮ್ಯವನ್ನು ಎದುರಿಸದ ಕಾರಣ ಚುನಾವಣೆಯಲ್ಲಿ ಮಾತ್ರವಲ್ಲದೆ ಜನರ ಹೃದಯವನ್ನೂ ಗೆಲ್ಲುವ ಭರವಸೆ ಇದೆ ಎಂದು ಅನನ್ಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೂ, ತೃತೀಯಲಿಂಗಿ ಸಮುದಾಯದವರು ತಮ್ಮ ಮನೆಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಚುನಾವಣೆಯಲ್ಲಿ ತಾನು ಗೆದ್ದರೆ, ಇವರುಗಳು ತಮ್ಮ ಮನೆಗಳಲ್ಲಿ ಮತ್ತು ಸಮಾಜದಲ್ಲಿ ಸುರಕ್ಷತವಾಗಿರಲು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನೆರೆಯ ರಾಜ್ಯ ತಮಿಳುನಾಡಿನಲ್ಲಿ, ಮಧುರೈ ದಕ್ಷಿಣ ಕ್ಷೇತ್ರದಿಂದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಕನ್ನಮ್ಮ ಎಂಬ ತೃತೀಯಲಿಂಗಿ ಸ್ಪರ್ಧಿಸುತ್ತಿದ್ದು, ಮಧುರೈಯನ್ನು ಮಾದರಿ ನಗರವನ್ನಾಗಿ ಮಾಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...