Homeಮುಖಪುಟಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಸ್ಫರ್ಧಿಸಲಿದ್ದಾರೆ. 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್ ಅವರು ಕೇರಳದ ವೆಂಗಾರಾ ಕ್ಷೇತ್ರದಿಂದ ಸ್ಫರ್ಧಿಸಲಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಫರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ವಿರುದ್ಧ ಅವರು ಕಣಕ್ಕಿಳಿದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರಂತೆ ಸಮನಾಗಿ ಟ್ರಾನ್ಸ್‌ಜೆಂಡರ್‌ಗಳು ಸಹ ಉತ್ತಮ ನಾಯಕರಾಗಬಹು ಎಂಬುದನ್ನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಅನನ್ಯಾ ಕುಮಾರಿ ಹೇಳಿದ್ದಾರೆ.

“ನಾವು ಯಾವುದೇ ಗಂಡು ಅಥವಾ ಹೆಣ್ಣಿನಂತೆಯೇ ಸಾಮರ್ಥ್ಯಗಳನ್ನು ಹೊಂದಿದ್ದೇವೆ. ನಮಗೆ ಯಾವುದೇ ಸಹಾನುಭೂತಿ ಬೇಡ. ಇತರರಂತೆ ನಮಗೂ ಸಮಾನವಾಗಿ ಪರಿಗಣಿಸಿದರೆ ಸಾಕು. ತೃತೀಯಲಿಂಗಿ ಸಮುದಾಯದವರು ಸಹ ಇತರರಂತೆ ಪ್ರತಿಭಾವಂತರು ಮತ್ತು ಯಾವುದೇ ಕ್ಷೇತ್ರದಲ್ಲಿ ತಮ್ಮನ್ನು ಪ್ರತಿನಿಧಿಸಬಹುದು” ಎಂದು ಅನನ್ಯಾ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅನನ್ಯಾ ಅವರ ನಿರ್ಧಾರವನ್ನು ಅವರ ಪ್ರತಿಸ್ಫರ್ಧಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಸ್ವಾಗತಿಸಿದ್ದಾರೆ. ತೃತೀಯಲಿಂಗಿಗಳು ಸಹ ಸಮಾಜದ ಭಾಗವಾಗಿದ್ದಾರೆ ಮತ್ತು ಚುನಾವಣೆಯಲ್ಲಿ ಹೋರಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಚುನಾವಣಾ ಪ್ರಚಾರ ಮಾಡುವಾಗ ಯಾವುದೇ ತಾರತಮ್ಯವನ್ನು ಎದುರಿಸದ ಕಾರಣ ಚುನಾವಣೆಯಲ್ಲಿ ಮಾತ್ರವಲ್ಲದೆ ಜನರ ಹೃದಯವನ್ನೂ ಗೆಲ್ಲುವ ಭರವಸೆ ಇದೆ ಎಂದು ಅನನ್ಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೂ, ತೃತೀಯಲಿಂಗಿ ಸಮುದಾಯದವರು ತಮ್ಮ ಮನೆಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಚುನಾವಣೆಯಲ್ಲಿ ತಾನು ಗೆದ್ದರೆ, ಇವರುಗಳು ತಮ್ಮ ಮನೆಗಳಲ್ಲಿ ಮತ್ತು ಸಮಾಜದಲ್ಲಿ ಸುರಕ್ಷತವಾಗಿರಲು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನೆರೆಯ ರಾಜ್ಯ ತಮಿಳುನಾಡಿನಲ್ಲಿ, ಮಧುರೈ ದಕ್ಷಿಣ ಕ್ಷೇತ್ರದಿಂದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಕನ್ನಮ್ಮ ಎಂಬ ತೃತೀಯಲಿಂಗಿ ಸ್ಪರ್ಧಿಸುತ್ತಿದ್ದು, ಮಧುರೈಯನ್ನು ಮಾದರಿ ನಗರವನ್ನಾಗಿ ಮಾಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...