Homeಮುಖಪುಟಕೇರಳ: ಚುನಾವಣೆಯಿಂದ ಹಿಂದೆ ಸರಿದ ಮೊದಲ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ ಕುಮಾರಿ

ಕೇರಳ: ಚುನಾವಣೆಯಿಂದ ಹಿಂದೆ ಸರಿದ ಮೊದಲ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ ಕುಮಾರಿ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ ಮೊದಲ ತೃತೀಯಲಿಂಗಿ ಅಭ್ಯರ್ಥಿ 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್, ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಈ ಮೊದಲು ಅವರು ಡೆಮಾಕ್ರಟಿಕ್ ಸೋಶಿಯಲ್ ಜಸ್ಟೀಸ್ ಪಾರ್ಟಿಯಿಂದ ಸ್ಪರ್ಧಿಗಿಳಿಯುವುದಾಗಿ ಘೋಷಿಸಿದ್ದರು.

ಅನನ್ಯಾ ಕುಮಾರಿ ಅಲೆಕ್ಸ್ ಸ್ಫರ್ಧಿಸಲು ಬಯಸಿದ್ದ ಡೆಮಾಕ್ರಟಿಕ್ ಸೋಶಿಯಲ್ ಜಸ್ಟೀಸ್ ಪಾರ್ಟಿಯವರಲ್ಲೇ ಕೆಲವರು ಲಿಂಗ ತಾರತಮ್ಯ ಮಾಡುತ್ತಿದ್ದಾರೆ. ತೀವ್ರ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ, ಹೀಗಾಗಿ ಚುನಾವಣೆಯಿಂದ ದೂರ ಇರುವುದಾಗಿ ಅನನ್ಯಾ ತಿಳಿಸಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ಕಣಕ್ಕಿಳಿದಿದ್ದಾರೆ.

‌ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ತನಗೆ ಕಿರುಕುಳ ನೀಡಿದ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ ಮತ್ತು ನಾಯಕರ ವಿರುದ್ಧ ತಾನು ಪೊಲೀಸ್ ದೂರು ದಾಖಲಿಸಿದ್ದೇನೆ ಎಂದು ಅನನ್ಯಾ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಕಾರ್ಯ ಕೂಡ ನಿಲ್ಲಿಸಿದ್ದಾರೆ.

ಅನನ್ಯಾ ತಮ್ಮ ಹೇಳಿಕೆಯಲ್ಲಿ, “ನಾನು ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿದಲ್ಲಿ ತಾರತಮ್ಯ ಮತ್ತು ಲೈಂಗಿಕ ಕಿರುಕುಳವನ್ನು ಎದುರಿಸುತ್ತಿರುವ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಅವರು ಪ್ರಚಾರಕ್ಕಾಗಿ ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಯುಡಿಎಫ್ ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಬಗ್ಗೆ ತಪ್ಪಾಗಿ ಮಾತನಾಡಲು ಮತ್ತು ಎಲ್‌ಡಿಎಫ್ ಸರ್ಕಾರವನ್ನು ಟೀಕಿಸಲು ಡಿಎಸ್‌ಜೆಪಿ ನಾಯಕರು ನನ್ನನ್ನು ಒತ್ತಾಯಿಸುತ್ತಿದ್ದಾರೆ. ಇದರ ಜೊತೆಗೆ, ಚುನಾವಣಾ ಪ್ರಚಾರದ ಸಮಯದಲ್ಲಿ ಬುರ್ಖಾ ಧರಿಸಲು ನನ್ನನ್ನು ಒತ್ತಾಯಿಸಿದರು, ಅದನ್ನು ನಾನು ನಿರಾಕರಿಸಿದ್ದೇನೆ” ಎಂದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಳದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.


ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...