Homeರಾಷ್ಟ್ರೀಯಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

ಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

- Advertisement -
- Advertisement -

ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರನ್ನು ಬ್ರಾ ತೆಗೆಯುವಂತೆ ಕೇಳಿದ ಮೂವರು ಸೇರಿದಂತೆ ಒಟ್ಟು ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ. ಪರೀಕ್ಷೆಗೂ ಮುನ್ನ ಅವಮಾನಕರವಾಗಿ ತಪಾಸಣೆಗೆ ಒಳಗಾದ ಮೂವರು ವಿದ್ಯಾರ್ಥಿನಿಯರು ಪೊಲೀಸರಿಗೆ ಮೂರು ನೀಡಿದ್ದಾರೆ.

ಈ ಬಗ್ಗೆ ಮೊದಲು ದೂರು ನೀಡಿದ್ದ ವಿದ್ಯಾರ್ಥಿನಿಯ ಆರೋಪಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಿರಾಕರಿಸಿದೆ. ದೂರನ್ನು ‘ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ’ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಅಧೀಕ್ಷಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರದಂದು 17 ವರ್ಷದ ಬಾಲಕಿಯ ತಂದೆಯೊಬ್ಬರು ಮಾಧ್ಯಮಗಳ ಮುಂದೆ ಬಂದು ಈ ಬಗ್ಗೆ ಹೇಳಿಕೆ ನೀಡಿದಾಗ ವಿವಾದವು ಬೆಳಕಿಗೆ ಬಂದಿತ್ತು. ಅವರು, “ನನ್ನ ಮಗಳು ಮೊದಲ ಬಾರಿಗೆ ನೀಟ್ ಪರೀಕ್ಷೆಯನ್ನು ಬರೆದಿದ್ದಾರೆ. ಅವರು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ಒಳವಸ್ತ್ರಗಳನ್ನು ತೆಗೆಯುವಂತೆ ಕೇಳಲಾಯಿತು. ಪರೀಕ್ಷೆಯ ಮೂರು ಗಂಟೆಗಳ ಕಾಲ ಒಳ ಉಡುಪು ಧರಿಸದೇ ಕುಳಿತಿದ್ದರು. ಪರೀಕ್ಷೆಗೆ ಕುಳಿತ ‘ಆಘಾತಕಾರಿ ಅನುಭವ’ದಿಂದ ಇನ್ನೂ ಚೇತರಿಸಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಪರೀಕ್ಷಾ ಕೇಂದ್ರವಾದ ಮಾರ್ ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿಯಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಒಳವಸ್ತ್ರಕ್ಕೆ ಲೋಹಗಳ ಕೊಕ್ಕೆಗಳು ಇದ್ದುದರಿಂದ ಬಾಲಕಿಯ ಬ್ರಾ ತೆಗೆಯುವಂತೆ ಹೇಳಲಾಗಿತ್ತು ಎಂದು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

“ಒಳಉಡುಪು ನಿಮ್ಮ ಭವಿಷ್ಯಕ್ಕಿಂತ ದೊಡ್ಡದೆ? ಅದನ್ನು ತೆಗೆದುಹಾಕಿ, ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. 90% ವಿದ್ಯಾರ್ಥಿನಿಯರು ತಮ್ಮ ಒಳ ವಸ್ತ್ರಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಇಡಬೇಕಾಯಿತು” ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ ಎಂದು ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಪರೀಕ್ಷಾ ಕೇಂದ್ರವು ಬಾಲಕಿಯ ತಂದೆಯ ಆರೋಪವನ್ನು ನಿರಾಕರಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, “NEET ಡ್ರೆಸ್ ಕೋಡ್ ಅಭ್ಯರ್ಥಿಯ ಪೋಷಕರು ಆಪಾದಿಸುವ ಯಾವುದೇ ಚಟುವಟಿಕೆಯನ್ನು ಅನುಮತಿಸುವುದಿಲ್ಲ” ಎಂದು ಇಂದು ಹೇಳಿದೆ.

ಘಟನೆಯ ಕುರಿತು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಹುಡುಗಿಯರನ್ನು ಅವರ ಬ್ರಾ ತೆಗೆಯುವಂತೆ ಒತ್ತಾಯಿಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ನೀಟ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಘನತೆ ಮತ್ತು ಗೌರವದ ಮೇಲೆ ದಾಳಿ ನಡೆಸಿದ್ದಕ್ಕೆ ಅವರು ನಿರಾಶೆ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

“ಈ ಅನಿರೀಕ್ಷಿತ ಘಟನೆಯ ಅವಮಾನ ಮತ್ತು ಆಘಾತವು ವಿದ್ಯಾರ್ಥಿಗಳ ನೈತಿಕತೆ ಮತ್ತು ಸ್ಥೈರ್ಯದ ಮೇಲೆ ಪರಿಣಾಮ ಬೀರಿದೆ. ಅದರ ಪರಿಣಾಮವಾಗಿ ಪರೀಕ್ಷೆಯಲ್ಲಿನ ಕಾರ್ಯಕ್ಷಮತೆಯು ಪರಿಣಾಮ ಬೀರುತ್ತದೆ. ದುಷ್ಕೃತ್ಯ ಎಸಗಿದವರ ವಿರುದ್ದ ತೀವ್ರ ಕ್ರಮ ಜರುಗಿಸಿ” ಎಂದು ಸಚಿವೆ ಪತ್ರದಲ್ಲಿ ಹೇಳಿದ್ದಾರೆ.

ಭದ್ರತಾ ತಪಾಸಣೆ ನಡೆಸಿ ಒಳ ಉಡುಪನ್ನು ತೆಗೆಯುವಂತೆ ಹೇಳಿದವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...