Homeರಾಷ್ಟ್ರೀಯಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

ಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

- Advertisement -
- Advertisement -

ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರನ್ನು ಬ್ರಾ ತೆಗೆಯುವಂತೆ ಕೇಳಿದ ಮೂವರು ಸೇರಿದಂತೆ ಒಟ್ಟು ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ. ಪರೀಕ್ಷೆಗೂ ಮುನ್ನ ಅವಮಾನಕರವಾಗಿ ತಪಾಸಣೆಗೆ ಒಳಗಾದ ಮೂವರು ವಿದ್ಯಾರ್ಥಿನಿಯರು ಪೊಲೀಸರಿಗೆ ಮೂರು ನೀಡಿದ್ದಾರೆ.

ಈ ಬಗ್ಗೆ ಮೊದಲು ದೂರು ನೀಡಿದ್ದ ವಿದ್ಯಾರ್ಥಿನಿಯ ಆರೋಪಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಿರಾಕರಿಸಿದೆ. ದೂರನ್ನು ‘ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ’ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಅಧೀಕ್ಷಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರದಂದು 17 ವರ್ಷದ ಬಾಲಕಿಯ ತಂದೆಯೊಬ್ಬರು ಮಾಧ್ಯಮಗಳ ಮುಂದೆ ಬಂದು ಈ ಬಗ್ಗೆ ಹೇಳಿಕೆ ನೀಡಿದಾಗ ವಿವಾದವು ಬೆಳಕಿಗೆ ಬಂದಿತ್ತು. ಅವರು, “ನನ್ನ ಮಗಳು ಮೊದಲ ಬಾರಿಗೆ ನೀಟ್ ಪರೀಕ್ಷೆಯನ್ನು ಬರೆದಿದ್ದಾರೆ. ಅವರು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ಒಳವಸ್ತ್ರಗಳನ್ನು ತೆಗೆಯುವಂತೆ ಕೇಳಲಾಯಿತು. ಪರೀಕ್ಷೆಯ ಮೂರು ಗಂಟೆಗಳ ಕಾಲ ಒಳ ಉಡುಪು ಧರಿಸದೇ ಕುಳಿತಿದ್ದರು. ಪರೀಕ್ಷೆಗೆ ಕುಳಿತ ‘ಆಘಾತಕಾರಿ ಅನುಭವ’ದಿಂದ ಇನ್ನೂ ಚೇತರಿಸಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಪರೀಕ್ಷಾ ಕೇಂದ್ರವಾದ ಮಾರ್ ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿಯಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಒಳವಸ್ತ್ರಕ್ಕೆ ಲೋಹಗಳ ಕೊಕ್ಕೆಗಳು ಇದ್ದುದರಿಂದ ಬಾಲಕಿಯ ಬ್ರಾ ತೆಗೆಯುವಂತೆ ಹೇಳಲಾಗಿತ್ತು ಎಂದು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

“ಒಳಉಡುಪು ನಿಮ್ಮ ಭವಿಷ್ಯಕ್ಕಿಂತ ದೊಡ್ಡದೆ? ಅದನ್ನು ತೆಗೆದುಹಾಕಿ, ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. 90% ವಿದ್ಯಾರ್ಥಿನಿಯರು ತಮ್ಮ ಒಳ ವಸ್ತ್ರಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಇಡಬೇಕಾಯಿತು” ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ ಎಂದು ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಪರೀಕ್ಷಾ ಕೇಂದ್ರವು ಬಾಲಕಿಯ ತಂದೆಯ ಆರೋಪವನ್ನು ನಿರಾಕರಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, “NEET ಡ್ರೆಸ್ ಕೋಡ್ ಅಭ್ಯರ್ಥಿಯ ಪೋಷಕರು ಆಪಾದಿಸುವ ಯಾವುದೇ ಚಟುವಟಿಕೆಯನ್ನು ಅನುಮತಿಸುವುದಿಲ್ಲ” ಎಂದು ಇಂದು ಹೇಳಿದೆ.

ಘಟನೆಯ ಕುರಿತು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಹುಡುಗಿಯರನ್ನು ಅವರ ಬ್ರಾ ತೆಗೆಯುವಂತೆ ಒತ್ತಾಯಿಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ನೀಟ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಘನತೆ ಮತ್ತು ಗೌರವದ ಮೇಲೆ ದಾಳಿ ನಡೆಸಿದ್ದಕ್ಕೆ ಅವರು ನಿರಾಶೆ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

“ಈ ಅನಿರೀಕ್ಷಿತ ಘಟನೆಯ ಅವಮಾನ ಮತ್ತು ಆಘಾತವು ವಿದ್ಯಾರ್ಥಿಗಳ ನೈತಿಕತೆ ಮತ್ತು ಸ್ಥೈರ್ಯದ ಮೇಲೆ ಪರಿಣಾಮ ಬೀರಿದೆ. ಅದರ ಪರಿಣಾಮವಾಗಿ ಪರೀಕ್ಷೆಯಲ್ಲಿನ ಕಾರ್ಯಕ್ಷಮತೆಯು ಪರಿಣಾಮ ಬೀರುತ್ತದೆ. ದುಷ್ಕೃತ್ಯ ಎಸಗಿದವರ ವಿರುದ್ದ ತೀವ್ರ ಕ್ರಮ ಜರುಗಿಸಿ” ಎಂದು ಸಚಿವೆ ಪತ್ರದಲ್ಲಿ ಹೇಳಿದ್ದಾರೆ.

ಭದ್ರತಾ ತಪಾಸಣೆ ನಡೆಸಿ ಒಳ ಉಡುಪನ್ನು ತೆಗೆಯುವಂತೆ ಹೇಳಿದವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...