Homeಮುಖಪುಟಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

ಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

- Advertisement -
- Advertisement -

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ಯುದ್ಧದ ಬಗ್ಗೆ ಕೇರಳದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಕೇರಳದ ಕಂಪೆನಿಯೊಂದು ಇಸ್ರೇಲ್ ಪೊಲೀಸ್ ಪಡೆಗಳೊಂದಿಗೆ ದೃಢವಾದ ವ್ಯವಹಾರ ಸಂಬಂಧವನ್ನು ಹೊಂದಿದೆ ಎನ್ನವುದು ಇದೀಗ ಬಹಿರಂಗವಾಗಿದೆ.

ಕೇರಳದ ಕಣ್ಣೂರು ಜಿಲ್ಲೆಯ ಒಂದು ಉಡುಪು ಕಾರ್ಖಾನೆಯು ಕಳೆದ ಆರು ವರ್ಷಗಳಿಂದ ಇಸ್ರೇಲ್‌ ಪೊಲೀಸ್ ಸಿಬ್ಬಂದಿಗೆ ಸಮವಸ್ತ್ರವನ್ನು ಪೂರೈಸುತ್ತಿದೆ. ಕಣ್ಣೂರಿನ ಕೂತುಪರಂಬದಲ್ಲಿರುವ ಮರಿಯನ್ ಅಪ್ಯಾರಲ್ ಫ್ಯಾಕ್ಟರಿಯಿಂದ ಪ್ರತಿ ವರ್ಷ ಇಸ್ರೇಲಿ ಪೊಲೀಸ್ ಸಿಬ್ಬಂದಿಗೆ ಸುಮಾರು ಒಂದು ಲಕ್ಷ ಸಮವಸ್ತ್ರಗಳನ್ನು ರಫ್ತು ಮಾಡಲಾಗುತ್ತಿದೆ.

ಇದಲ್ಲದೆ ಕಂಪೆನಿಯು ವಿವಿಧ ದೇಶಗಳಿಗೆ ಯುನಿಫಾರ್ಮ್‌ ರಫ್ತು ಮಾಡುತ್ತಿದೆ. ಕಂಪೆನಿಯಲ್ಲಿ 1,500 ಉದ್ಯೋಗಿಗಳಲ್ಲಿ ಸುಮಾರು 1,300 ಮಂದಿ ಮಹಿಳಾ ಸಿಬ್ಬಂದಿಗಳಿದ್ದಾರೆ. ಬೀಡಿ ಉದ್ಯಮ ಬಿಕ್ಕಟ್ಟನ್ನು ಎದುರಿಸಿದ ಬಳಿಕ ಉದ್ಯೋಗ ಕಳೆದುಕೊಂಡ ಅನೇಕರಿಗೆ ಸಂಸ್ಥೆಯು ಉದ್ಯೋಗವನ್ನು ಒದಗಿಸಿದೆ. ಮುಂಬೈನಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, ಸಂಸ್ಥೆಯನ್ನು ಉದ್ಯಮಿ ಥಾಮಸ್ ಒಲಿಕಲ್ ನಡೆಸುತ್ತಿದ್ದಾರೆ.

ಈ ವರ್ಷವೂ ಇಸ್ರೇಲ್‌ನ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸುಮಾರು 1 ಲಕ್ಷ ಸಮವಸ್ತ್ರಗಳನ್ನು ಪೂರೈಸಲು ಬುಕ್ಕಿಂಗ್ ಮಾಡಲಾಗಿದೆ ಎಂದು ಮರಿಯನ್ ಫ್ಯಾಕ್ಟರಿ ಮ್ಯಾನೇಜರ್ ಶಿಜಿನ್ ಕುಮಾರ್ ಹೇಳಿದ್ದಾರೆ.

ನಾವು ಆರು ವರ್ಷಗಳ ಹಿಂದೆ ಮೊದಲ ಆರ್ಡರ್‌ನ್ನು ಸ್ವೀಕರಿಸಿದ್ದೇವೆ. ಇಸ್ರೇಲ್‌ನ ತಂಡವು ನಮ್ಮ ಕಂಪೆನಿಗೆ ಭೇಟಿ ನೀಡಿದೆ ಮತ್ತು ನಮ್ಮ ಬಟ್ಟೆಗಳಿಂದ ಅವರು ತೃಪ್ತರಾಗಿದ್ದಾರೆ. ಆ ಬಳಿಕ ನಾವು ಅವರಿಂದ ಪ್ರತಿ ವರ್ಷ ಆರ್ಡರ್‌ಗಳನ್ನು ಪಡೆಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಉತ್ಪಾದಿಸಿದ ಮತ್ತು ಆಮದು ಮಾಡಿಕೊಳ್ಳುವ ಬಟ್ಟೆಗಳನ್ನು ಒಳಗೊಂಡಂತೆ ವಿವಿಧ ರೀತಿಯ ಬಟ್ಟೆಗಳನ್ನು ಬಳಸಲಾಗುತ್ತದೆ. ಉಡುಪು ಕಾರ್ಖಾನೆಯು ಇಸ್ರೇಲ್‌ನ ಜೈಲು ಅಧಿಕಾರಿಗಳಿಗೆ ಸಮವಸ್ತ್ರಕ್ಕಾಗಿ ಆರ್ಡರ್‌ ಪಡೆಯುತ್ತಿತ್ತು.

ಮೇರಿಯನ್ ಅಪ್ಯಾರಲ್ ಸಮವಸ್ತ್ರ ತಯಾರಿಕೆಯ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಿಂದ ಇಸ್ರೇಲ್ ಫಿಲಿಪೈನ್ಸ್ ಮತ್ತು ಕುವೈತ್‌ನಂತಹ ಹಲವು ದೇಶಗಳ ಭದ್ರತಾ ಸಂಸ್ಥೆಗಳಿಗೆ ಸಮವಸ್ತ್ರವನ್ನು ಪೂರೈಸುತ್ತಿದ್ದಾರೆ. ಸಂಸ್ಥೆಯ ಉತ್ಪಾದನಾ ಘಟಕವು ಆರಂಭದಲ್ಲಿ ತಿರುವನಂತಪುರದಲ್ಲಿತ್ತು ಬಳಿಕ ಕಣ್ಣೂರಿಗೆ ಸ್ಥಳಾಂತರಗೊಳಿಸಲಾಗಿದೆ.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...