Homeಮುಖಪುಟಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

ಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

- Advertisement -
- Advertisement -

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ಯುದ್ಧದ ಬಗ್ಗೆ ಕೇರಳದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಕೇರಳದ ಕಂಪೆನಿಯೊಂದು ಇಸ್ರೇಲ್ ಪೊಲೀಸ್ ಪಡೆಗಳೊಂದಿಗೆ ದೃಢವಾದ ವ್ಯವಹಾರ ಸಂಬಂಧವನ್ನು ಹೊಂದಿದೆ ಎನ್ನವುದು ಇದೀಗ ಬಹಿರಂಗವಾಗಿದೆ.

ಕೇರಳದ ಕಣ್ಣೂರು ಜಿಲ್ಲೆಯ ಒಂದು ಉಡುಪು ಕಾರ್ಖಾನೆಯು ಕಳೆದ ಆರು ವರ್ಷಗಳಿಂದ ಇಸ್ರೇಲ್‌ ಪೊಲೀಸ್ ಸಿಬ್ಬಂದಿಗೆ ಸಮವಸ್ತ್ರವನ್ನು ಪೂರೈಸುತ್ತಿದೆ. ಕಣ್ಣೂರಿನ ಕೂತುಪರಂಬದಲ್ಲಿರುವ ಮರಿಯನ್ ಅಪ್ಯಾರಲ್ ಫ್ಯಾಕ್ಟರಿಯಿಂದ ಪ್ರತಿ ವರ್ಷ ಇಸ್ರೇಲಿ ಪೊಲೀಸ್ ಸಿಬ್ಬಂದಿಗೆ ಸುಮಾರು ಒಂದು ಲಕ್ಷ ಸಮವಸ್ತ್ರಗಳನ್ನು ರಫ್ತು ಮಾಡಲಾಗುತ್ತಿದೆ.

ಇದಲ್ಲದೆ ಕಂಪೆನಿಯು ವಿವಿಧ ದೇಶಗಳಿಗೆ ಯುನಿಫಾರ್ಮ್‌ ರಫ್ತು ಮಾಡುತ್ತಿದೆ. ಕಂಪೆನಿಯಲ್ಲಿ 1,500 ಉದ್ಯೋಗಿಗಳಲ್ಲಿ ಸುಮಾರು 1,300 ಮಂದಿ ಮಹಿಳಾ ಸಿಬ್ಬಂದಿಗಳಿದ್ದಾರೆ. ಬೀಡಿ ಉದ್ಯಮ ಬಿಕ್ಕಟ್ಟನ್ನು ಎದುರಿಸಿದ ಬಳಿಕ ಉದ್ಯೋಗ ಕಳೆದುಕೊಂಡ ಅನೇಕರಿಗೆ ಸಂಸ್ಥೆಯು ಉದ್ಯೋಗವನ್ನು ಒದಗಿಸಿದೆ. ಮುಂಬೈನಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, ಸಂಸ್ಥೆಯನ್ನು ಉದ್ಯಮಿ ಥಾಮಸ್ ಒಲಿಕಲ್ ನಡೆಸುತ್ತಿದ್ದಾರೆ.

ಈ ವರ್ಷವೂ ಇಸ್ರೇಲ್‌ನ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸುಮಾರು 1 ಲಕ್ಷ ಸಮವಸ್ತ್ರಗಳನ್ನು ಪೂರೈಸಲು ಬುಕ್ಕಿಂಗ್ ಮಾಡಲಾಗಿದೆ ಎಂದು ಮರಿಯನ್ ಫ್ಯಾಕ್ಟರಿ ಮ್ಯಾನೇಜರ್ ಶಿಜಿನ್ ಕುಮಾರ್ ಹೇಳಿದ್ದಾರೆ.

ನಾವು ಆರು ವರ್ಷಗಳ ಹಿಂದೆ ಮೊದಲ ಆರ್ಡರ್‌ನ್ನು ಸ್ವೀಕರಿಸಿದ್ದೇವೆ. ಇಸ್ರೇಲ್‌ನ ತಂಡವು ನಮ್ಮ ಕಂಪೆನಿಗೆ ಭೇಟಿ ನೀಡಿದೆ ಮತ್ತು ನಮ್ಮ ಬಟ್ಟೆಗಳಿಂದ ಅವರು ತೃಪ್ತರಾಗಿದ್ದಾರೆ. ಆ ಬಳಿಕ ನಾವು ಅವರಿಂದ ಪ್ರತಿ ವರ್ಷ ಆರ್ಡರ್‌ಗಳನ್ನು ಪಡೆಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಉತ್ಪಾದಿಸಿದ ಮತ್ತು ಆಮದು ಮಾಡಿಕೊಳ್ಳುವ ಬಟ್ಟೆಗಳನ್ನು ಒಳಗೊಂಡಂತೆ ವಿವಿಧ ರೀತಿಯ ಬಟ್ಟೆಗಳನ್ನು ಬಳಸಲಾಗುತ್ತದೆ. ಉಡುಪು ಕಾರ್ಖಾನೆಯು ಇಸ್ರೇಲ್‌ನ ಜೈಲು ಅಧಿಕಾರಿಗಳಿಗೆ ಸಮವಸ್ತ್ರಕ್ಕಾಗಿ ಆರ್ಡರ್‌ ಪಡೆಯುತ್ತಿತ್ತು.

ಮೇರಿಯನ್ ಅಪ್ಯಾರಲ್ ಸಮವಸ್ತ್ರ ತಯಾರಿಕೆಯ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಿಂದ ಇಸ್ರೇಲ್ ಫಿಲಿಪೈನ್ಸ್ ಮತ್ತು ಕುವೈತ್‌ನಂತಹ ಹಲವು ದೇಶಗಳ ಭದ್ರತಾ ಸಂಸ್ಥೆಗಳಿಗೆ ಸಮವಸ್ತ್ರವನ್ನು ಪೂರೈಸುತ್ತಿದ್ದಾರೆ. ಸಂಸ್ಥೆಯ ಉತ್ಪಾದನಾ ಘಟಕವು ಆರಂಭದಲ್ಲಿ ತಿರುವನಂತಪುರದಲ್ಲಿತ್ತು ಬಳಿಕ ಕಣ್ಣೂರಿಗೆ ಸ್ಥಳಾಂತರಗೊಳಿಸಲಾಗಿದೆ.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...