Homeಮುಖಪುಟಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

ಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

- Advertisement -
- Advertisement -

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ಯುದ್ಧದ ಬಗ್ಗೆ ಕೇರಳದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಕೇರಳದ ಕಂಪೆನಿಯೊಂದು ಇಸ್ರೇಲ್ ಪೊಲೀಸ್ ಪಡೆಗಳೊಂದಿಗೆ ದೃಢವಾದ ವ್ಯವಹಾರ ಸಂಬಂಧವನ್ನು ಹೊಂದಿದೆ ಎನ್ನವುದು ಇದೀಗ ಬಹಿರಂಗವಾಗಿದೆ.

ಕೇರಳದ ಕಣ್ಣೂರು ಜಿಲ್ಲೆಯ ಒಂದು ಉಡುಪು ಕಾರ್ಖಾನೆಯು ಕಳೆದ ಆರು ವರ್ಷಗಳಿಂದ ಇಸ್ರೇಲ್‌ ಪೊಲೀಸ್ ಸಿಬ್ಬಂದಿಗೆ ಸಮವಸ್ತ್ರವನ್ನು ಪೂರೈಸುತ್ತಿದೆ. ಕಣ್ಣೂರಿನ ಕೂತುಪರಂಬದಲ್ಲಿರುವ ಮರಿಯನ್ ಅಪ್ಯಾರಲ್ ಫ್ಯಾಕ್ಟರಿಯಿಂದ ಪ್ರತಿ ವರ್ಷ ಇಸ್ರೇಲಿ ಪೊಲೀಸ್ ಸಿಬ್ಬಂದಿಗೆ ಸುಮಾರು ಒಂದು ಲಕ್ಷ ಸಮವಸ್ತ್ರಗಳನ್ನು ರಫ್ತು ಮಾಡಲಾಗುತ್ತಿದೆ.

ಇದಲ್ಲದೆ ಕಂಪೆನಿಯು ವಿವಿಧ ದೇಶಗಳಿಗೆ ಯುನಿಫಾರ್ಮ್‌ ರಫ್ತು ಮಾಡುತ್ತಿದೆ. ಕಂಪೆನಿಯಲ್ಲಿ 1,500 ಉದ್ಯೋಗಿಗಳಲ್ಲಿ ಸುಮಾರು 1,300 ಮಂದಿ ಮಹಿಳಾ ಸಿಬ್ಬಂದಿಗಳಿದ್ದಾರೆ. ಬೀಡಿ ಉದ್ಯಮ ಬಿಕ್ಕಟ್ಟನ್ನು ಎದುರಿಸಿದ ಬಳಿಕ ಉದ್ಯೋಗ ಕಳೆದುಕೊಂಡ ಅನೇಕರಿಗೆ ಸಂಸ್ಥೆಯು ಉದ್ಯೋಗವನ್ನು ಒದಗಿಸಿದೆ. ಮುಂಬೈನಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, ಸಂಸ್ಥೆಯನ್ನು ಉದ್ಯಮಿ ಥಾಮಸ್ ಒಲಿಕಲ್ ನಡೆಸುತ್ತಿದ್ದಾರೆ.

ಈ ವರ್ಷವೂ ಇಸ್ರೇಲ್‌ನ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸುಮಾರು 1 ಲಕ್ಷ ಸಮವಸ್ತ್ರಗಳನ್ನು ಪೂರೈಸಲು ಬುಕ್ಕಿಂಗ್ ಮಾಡಲಾಗಿದೆ ಎಂದು ಮರಿಯನ್ ಫ್ಯಾಕ್ಟರಿ ಮ್ಯಾನೇಜರ್ ಶಿಜಿನ್ ಕುಮಾರ್ ಹೇಳಿದ್ದಾರೆ.

ನಾವು ಆರು ವರ್ಷಗಳ ಹಿಂದೆ ಮೊದಲ ಆರ್ಡರ್‌ನ್ನು ಸ್ವೀಕರಿಸಿದ್ದೇವೆ. ಇಸ್ರೇಲ್‌ನ ತಂಡವು ನಮ್ಮ ಕಂಪೆನಿಗೆ ಭೇಟಿ ನೀಡಿದೆ ಮತ್ತು ನಮ್ಮ ಬಟ್ಟೆಗಳಿಂದ ಅವರು ತೃಪ್ತರಾಗಿದ್ದಾರೆ. ಆ ಬಳಿಕ ನಾವು ಅವರಿಂದ ಪ್ರತಿ ವರ್ಷ ಆರ್ಡರ್‌ಗಳನ್ನು ಪಡೆಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಉತ್ಪಾದಿಸಿದ ಮತ್ತು ಆಮದು ಮಾಡಿಕೊಳ್ಳುವ ಬಟ್ಟೆಗಳನ್ನು ಒಳಗೊಂಡಂತೆ ವಿವಿಧ ರೀತಿಯ ಬಟ್ಟೆಗಳನ್ನು ಬಳಸಲಾಗುತ್ತದೆ. ಉಡುಪು ಕಾರ್ಖಾನೆಯು ಇಸ್ರೇಲ್‌ನ ಜೈಲು ಅಧಿಕಾರಿಗಳಿಗೆ ಸಮವಸ್ತ್ರಕ್ಕಾಗಿ ಆರ್ಡರ್‌ ಪಡೆಯುತ್ತಿತ್ತು.

ಮೇರಿಯನ್ ಅಪ್ಯಾರಲ್ ಸಮವಸ್ತ್ರ ತಯಾರಿಕೆಯ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಿಂದ ಇಸ್ರೇಲ್ ಫಿಲಿಪೈನ್ಸ್ ಮತ್ತು ಕುವೈತ್‌ನಂತಹ ಹಲವು ದೇಶಗಳ ಭದ್ರತಾ ಸಂಸ್ಥೆಗಳಿಗೆ ಸಮವಸ್ತ್ರವನ್ನು ಪೂರೈಸುತ್ತಿದ್ದಾರೆ. ಸಂಸ್ಥೆಯ ಉತ್ಪಾದನಾ ಘಟಕವು ಆರಂಭದಲ್ಲಿ ತಿರುವನಂತಪುರದಲ್ಲಿತ್ತು ಬಳಿಕ ಕಣ್ಣೂರಿಗೆ ಸ್ಥಳಾಂತರಗೊಳಿಸಲಾಗಿದೆ.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...