Homeಮುಖಪುಟಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

ಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

- Advertisement -
- Advertisement -

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ಯುದ್ಧದ ಬಗ್ಗೆ ಕೇರಳದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಕೇರಳದ ಕಂಪೆನಿಯೊಂದು ಇಸ್ರೇಲ್ ಪೊಲೀಸ್ ಪಡೆಗಳೊಂದಿಗೆ ದೃಢವಾದ ವ್ಯವಹಾರ ಸಂಬಂಧವನ್ನು ಹೊಂದಿದೆ ಎನ್ನವುದು ಇದೀಗ ಬಹಿರಂಗವಾಗಿದೆ.

ಕೇರಳದ ಕಣ್ಣೂರು ಜಿಲ್ಲೆಯ ಒಂದು ಉಡುಪು ಕಾರ್ಖಾನೆಯು ಕಳೆದ ಆರು ವರ್ಷಗಳಿಂದ ಇಸ್ರೇಲ್‌ ಪೊಲೀಸ್ ಸಿಬ್ಬಂದಿಗೆ ಸಮವಸ್ತ್ರವನ್ನು ಪೂರೈಸುತ್ತಿದೆ. ಕಣ್ಣೂರಿನ ಕೂತುಪರಂಬದಲ್ಲಿರುವ ಮರಿಯನ್ ಅಪ್ಯಾರಲ್ ಫ್ಯಾಕ್ಟರಿಯಿಂದ ಪ್ರತಿ ವರ್ಷ ಇಸ್ರೇಲಿ ಪೊಲೀಸ್ ಸಿಬ್ಬಂದಿಗೆ ಸುಮಾರು ಒಂದು ಲಕ್ಷ ಸಮವಸ್ತ್ರಗಳನ್ನು ರಫ್ತು ಮಾಡಲಾಗುತ್ತಿದೆ.

ಇದಲ್ಲದೆ ಕಂಪೆನಿಯು ವಿವಿಧ ದೇಶಗಳಿಗೆ ಯುನಿಫಾರ್ಮ್‌ ರಫ್ತು ಮಾಡುತ್ತಿದೆ. ಕಂಪೆನಿಯಲ್ಲಿ 1,500 ಉದ್ಯೋಗಿಗಳಲ್ಲಿ ಸುಮಾರು 1,300 ಮಂದಿ ಮಹಿಳಾ ಸಿಬ್ಬಂದಿಗಳಿದ್ದಾರೆ. ಬೀಡಿ ಉದ್ಯಮ ಬಿಕ್ಕಟ್ಟನ್ನು ಎದುರಿಸಿದ ಬಳಿಕ ಉದ್ಯೋಗ ಕಳೆದುಕೊಂಡ ಅನೇಕರಿಗೆ ಸಂಸ್ಥೆಯು ಉದ್ಯೋಗವನ್ನು ಒದಗಿಸಿದೆ. ಮುಂಬೈನಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, ಸಂಸ್ಥೆಯನ್ನು ಉದ್ಯಮಿ ಥಾಮಸ್ ಒಲಿಕಲ್ ನಡೆಸುತ್ತಿದ್ದಾರೆ.

ಈ ವರ್ಷವೂ ಇಸ್ರೇಲ್‌ನ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸುಮಾರು 1 ಲಕ್ಷ ಸಮವಸ್ತ್ರಗಳನ್ನು ಪೂರೈಸಲು ಬುಕ್ಕಿಂಗ್ ಮಾಡಲಾಗಿದೆ ಎಂದು ಮರಿಯನ್ ಫ್ಯಾಕ್ಟರಿ ಮ್ಯಾನೇಜರ್ ಶಿಜಿನ್ ಕುಮಾರ್ ಹೇಳಿದ್ದಾರೆ.

ನಾವು ಆರು ವರ್ಷಗಳ ಹಿಂದೆ ಮೊದಲ ಆರ್ಡರ್‌ನ್ನು ಸ್ವೀಕರಿಸಿದ್ದೇವೆ. ಇಸ್ರೇಲ್‌ನ ತಂಡವು ನಮ್ಮ ಕಂಪೆನಿಗೆ ಭೇಟಿ ನೀಡಿದೆ ಮತ್ತು ನಮ್ಮ ಬಟ್ಟೆಗಳಿಂದ ಅವರು ತೃಪ್ತರಾಗಿದ್ದಾರೆ. ಆ ಬಳಿಕ ನಾವು ಅವರಿಂದ ಪ್ರತಿ ವರ್ಷ ಆರ್ಡರ್‌ಗಳನ್ನು ಪಡೆಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಉತ್ಪಾದಿಸಿದ ಮತ್ತು ಆಮದು ಮಾಡಿಕೊಳ್ಳುವ ಬಟ್ಟೆಗಳನ್ನು ಒಳಗೊಂಡಂತೆ ವಿವಿಧ ರೀತಿಯ ಬಟ್ಟೆಗಳನ್ನು ಬಳಸಲಾಗುತ್ತದೆ. ಉಡುಪು ಕಾರ್ಖಾನೆಯು ಇಸ್ರೇಲ್‌ನ ಜೈಲು ಅಧಿಕಾರಿಗಳಿಗೆ ಸಮವಸ್ತ್ರಕ್ಕಾಗಿ ಆರ್ಡರ್‌ ಪಡೆಯುತ್ತಿತ್ತು.

ಮೇರಿಯನ್ ಅಪ್ಯಾರಲ್ ಸಮವಸ್ತ್ರ ತಯಾರಿಕೆಯ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಿಂದ ಇಸ್ರೇಲ್ ಫಿಲಿಪೈನ್ಸ್ ಮತ್ತು ಕುವೈತ್‌ನಂತಹ ಹಲವು ದೇಶಗಳ ಭದ್ರತಾ ಸಂಸ್ಥೆಗಳಿಗೆ ಸಮವಸ್ತ್ರವನ್ನು ಪೂರೈಸುತ್ತಿದ್ದಾರೆ. ಸಂಸ್ಥೆಯ ಉತ್ಪಾದನಾ ಘಟಕವು ಆರಂಭದಲ್ಲಿ ತಿರುವನಂತಪುರದಲ್ಲಿತ್ತು ಬಳಿಕ ಕಣ್ಣೂರಿಗೆ ಸ್ಥಳಾಂತರಗೊಳಿಸಲಾಗಿದೆ.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...